10:39 PM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ‘ಚಾರೊಳಿ’ 1000ದ ಸಂಭ್ರಮ: ಹಲವು ರಾಜ್ಯಗಳ ಕವಿಗಳು ಭಾಗಿ

28/07/2024, 17:36

ಮಂಗಳೂರು(reporterkarnataka.com): ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮತ್ತು 20 ವರ್ಷ ಪೂರೈಸಿದ ‘ಪಿಂಗಾರ’ ವಾರ ಪತ್ರಿಕೆಯ ಸಹಯೋಗದಲ್ಲಿ ‘ಚಾರೊಳಿ’ 1000 ದ ಸಂಭ್ರಮ ನಗರದ ಬಜ್ಜೋಡಿಯ ಸಂದೇಶ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸ್ಟ್ಯಾನಿ ಅಲ್ವಾರಿಸ್‌ ಮಾತನಾಡಿ ‘ಚಾರೊಳಿ’ ಎಂದರೆ ನಾಲ್ಕು ಸಾಲುಗಳ ಸಾಹಿತ್ಯ. ಈ ನಾಲ್ಕು ಸಾಲುಗಳ ಸಾಹಿತ್ಯದಲ್ಲಿ ಎಲ್ಲಾ ವಿಷಯಗಳನ್ನು ಮನ ತಟ್ಟುವಂತೆ ಮಾಡುವ ಸಾಹಿತ್ಯ ಜನರ ಮನೆ ಮಾತಗಿದೆ ಎಂದರು.
ಮುಖ್ಯ ಅತಿಥಿಯಾಗಿದ್ದ ಮಂಗಳೂರು ಧರ್ಮ ಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿ ಹಾಗೂ ಕೊಂಕಣಿ ಅಕಾಡೆಮಿಯ ಮಾಜಿ ಅಧ್ಯಕ್ಷ ರೋಯ್‌ ಕ್ಯಾಸ್ಟಲಿನೊ ಅವರು ಶುಭ ಹಾರೈಸಿದರು. ಅತಿಥಿಗಳಾಗಿ ರಾಹುಲ್‌ ಜಾಹೀರಾತು ಸಂಸ್ಥೆಯ ಮಾಲಕ ಟೈಟಸ್‌ ನೊರೊನ್ಹಾ, ನವೀನ್ ನಾಯಕ್‌, ಫೋರ್‌ ವಿಂಡ್ಸ್ ಜಾಹೀರಾತು ಸಂಸ್ಥೆಯ ನಿರ್ದೇಶಕ ಎಲಿಯಾಸ್‌ ಫೆರ್ನಾಂಡಿಸ್‌ ಅವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕೊಂಕಣಿ ಹಾಗೂ ಇತರ ಭಾಷೆಗಳಲ್ಲಿ ಹಲವಾರು ಸಾಹಿತ್ಯ ಕೃತಿ ರಚಿಸಿದ ಕೊಂಕಣಿ ಕವಿ ರಿಚಾರ್ಡ್‌ ಲಸ್ರಾದೊ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಕೇರಳ, ಗೋವಾ, ಆಂಧ್ರ ಹಾಗೂ ಮಹಾರಾಷ್ಟ್ರ ರಾಜ್ಯಗಳಿಂದ ಹಲವು ಮಂದಿ ಕವಿಗಳು ಹಾಗೂ ಚಾರೊಳಿಯಲ್ಲಿ ನಿಪುಣರಾದ ಸಾಹಿತಿಗಳು ಭಾಗವಹಿಸಿದ್ದರು.
ಅಖಿಲ ಭಾರತೀಯ ಕೊಂಕಣಿ ಚಾರೊಳಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಗೂ ಪಿಂಗಾರ ಪತ್ರಿಕೆಯ ಸಂಪಾದಕ ರೈಮಂಡ್ ಡಿ’ಕುನ್ಹಾ ಸ್ವಾಗತಿಸಿದರು. ರಿಯಾನಾ ಡಿ’ಕಿನ್ಹಾ ಮತ್ತು ಅರವಿಂದ ಶಾನುಬೋಗ್‌ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು