10:42 AM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ‘ಚಾರೊಳಿ’ 1000ದ ಸಂಭ್ರಮ: ಹಲವು ರಾಜ್ಯಗಳ ಕವಿಗಳು ಭಾಗಿ

28/07/2024, 17:36

ಮಂಗಳೂರು(reporterkarnataka.com): ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮತ್ತು 20 ವರ್ಷ ಪೂರೈಸಿದ ‘ಪಿಂಗಾರ’ ವಾರ ಪತ್ರಿಕೆಯ ಸಹಯೋಗದಲ್ಲಿ ‘ಚಾರೊಳಿ’ 1000 ದ ಸಂಭ್ರಮ ನಗರದ ಬಜ್ಜೋಡಿಯ ಸಂದೇಶ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸ್ಟ್ಯಾನಿ ಅಲ್ವಾರಿಸ್‌ ಮಾತನಾಡಿ ‘ಚಾರೊಳಿ’ ಎಂದರೆ ನಾಲ್ಕು ಸಾಲುಗಳ ಸಾಹಿತ್ಯ. ಈ ನಾಲ್ಕು ಸಾಲುಗಳ ಸಾಹಿತ್ಯದಲ್ಲಿ ಎಲ್ಲಾ ವಿಷಯಗಳನ್ನು ಮನ ತಟ್ಟುವಂತೆ ಮಾಡುವ ಸಾಹಿತ್ಯ ಜನರ ಮನೆ ಮಾತಗಿದೆ ಎಂದರು.
ಮುಖ್ಯ ಅತಿಥಿಯಾಗಿದ್ದ ಮಂಗಳೂರು ಧರ್ಮ ಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿ ಹಾಗೂ ಕೊಂಕಣಿ ಅಕಾಡೆಮಿಯ ಮಾಜಿ ಅಧ್ಯಕ್ಷ ರೋಯ್‌ ಕ್ಯಾಸ್ಟಲಿನೊ ಅವರು ಶುಭ ಹಾರೈಸಿದರು. ಅತಿಥಿಗಳಾಗಿ ರಾಹುಲ್‌ ಜಾಹೀರಾತು ಸಂಸ್ಥೆಯ ಮಾಲಕ ಟೈಟಸ್‌ ನೊರೊನ್ಹಾ, ನವೀನ್ ನಾಯಕ್‌, ಫೋರ್‌ ವಿಂಡ್ಸ್ ಜಾಹೀರಾತು ಸಂಸ್ಥೆಯ ನಿರ್ದೇಶಕ ಎಲಿಯಾಸ್‌ ಫೆರ್ನಾಂಡಿಸ್‌ ಅವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕೊಂಕಣಿ ಹಾಗೂ ಇತರ ಭಾಷೆಗಳಲ್ಲಿ ಹಲವಾರು ಸಾಹಿತ್ಯ ಕೃತಿ ರಚಿಸಿದ ಕೊಂಕಣಿ ಕವಿ ರಿಚಾರ್ಡ್‌ ಲಸ್ರಾದೊ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಕೇರಳ, ಗೋವಾ, ಆಂಧ್ರ ಹಾಗೂ ಮಹಾರಾಷ್ಟ್ರ ರಾಜ್ಯಗಳಿಂದ ಹಲವು ಮಂದಿ ಕವಿಗಳು ಹಾಗೂ ಚಾರೊಳಿಯಲ್ಲಿ ನಿಪುಣರಾದ ಸಾಹಿತಿಗಳು ಭಾಗವಹಿಸಿದ್ದರು.
ಅಖಿಲ ಭಾರತೀಯ ಕೊಂಕಣಿ ಚಾರೊಳಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಗೂ ಪಿಂಗಾರ ಪತ್ರಿಕೆಯ ಸಂಪಾದಕ ರೈಮಂಡ್ ಡಿ’ಕುನ್ಹಾ ಸ್ವಾಗತಿಸಿದರು. ರಿಯಾನಾ ಡಿ’ಕಿನ್ಹಾ ಮತ್ತು ಅರವಿಂದ ಶಾನುಬೋಗ್‌ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು