7:41 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

Mangaluru | ರಾಜ್ಯ ಸರ್ಕಾರದ ಎಲ್ಲ ಭ್ರಷ್ಟಾಚಾರಕ್ಕೆ ಮುಖ್ಯಮಂತ್ರಿಗಳೇ ಗಾಡ್ ಫಾದರ್: ಶಾಸಕ ವೇದವ್ಯಾಸ ಕಾಮತ್

26/06/2025, 13:08

ಮಂಗಳೂರು(reporterkarnataka.com): ಇಷ್ಟು ದಿನ ಒಳಗೊಳಗೆ ನಡೆಯುತ್ತಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರದ ಕಮಿಷನ್‌ ಅವ್ಯವಹಾರ ಇದೀಗ ಬಹಿರಂಗವಾಗಿಯೇ ನಡೆಯಲಾರಂಭಿಸಿದ್ದು ಸರ್ಕಾರದ ಹುಳುಕುಗಳೆಲ್ಲ ಬೀದಿಗೆ ಬಂದು ಜನಸಾಮಾನ್ಯರೂ ಸಹ ಹೇಸಿಗೆ ಪಟ್ಟುಕೊಳ್ಳುವಷ್ಟರ ಮಟ್ಟಿಗೆ ರಾಜ್ಯದ ಆಡಳಿತ ಹದಗೆಟ್ಟಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಆರೋಪಿಸಿದರು.
ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದಿಂದ ಸ್ವತಃ ಕಾಂಗ್ರೆಸ್ಸಿನ ಹಿರಿಯ ನಾಯಕರುಗಳೇ ಬೇಸತ್ತಿದ್ದು ಇದೀಗ ನೇರವಾಗಿ ಸರ್ಕಾರದ ವಿರುದ್ಧ ವಾಗ್ದಾಳಿ ಆರಂಭಿಸಿದ್ದಾರೆ. ಬಡವರಿಗಾಗಿ ಇರುವ ಹೌಸಿಂಗ್ ಬೋರ್ಡ್‌ ಲಂಚಕೋರರ ಅಡ್ಡೆಯಾಗಿದ್ದು, ಕಮಿಷನ್‌ ಕೊಟ್ಟವರಿಗೆ ಮಾತ್ರ ಮನೆ ನೀಡಲಾಗಿದೆ ಎಂದು ಬಿ.ಆರ್ ಪಾಟೀಲ್ ರವರು ಆರೋಪಿಸಿದರೆ, ಕಂದಾಯ ಸಚಿವ ಕೃಷ್ಣ ಬೈರೇಗೌಡರು, “ಸರ್ಕಾರಿ ಕಚೇರಿಗಳಲ್ಲಿ ಯಾವ ಕೆಲಸಕ್ಕೆ ಎಷ್ಟು ಲಂಚ ಎಂಬುದನ್ನು ಬೋರ್ಡ್ ಹಾಕಿಕೊಂಡು ಬಿಡಿ” ಎಂದು ಹತಾಶೆ ವ್ಯಕ್ತಪಡಿಸಿದ್ದಾರೆ. ನಾನೊಬ್ಬ ಆಡಳಿತ ಪಕ್ಷದ ಶಾಸಕನಾಗಿದ್ದುಕೊಂಡು ಒಂದು ಚರಂಡಿ, ರಸ್ತೆ ನಿರ್ಮಿಸಲು ಸಹ ಸಾಧ್ಯವಾಗುತ್ತಿಲ್ಲ ಎಂದು ಎನ್.‌ ವೈ. ಗೋಪಾಲಕೃಷ್ಣ ಆಕ್ರೋಶ ತೋರಿಸಿದರೆ, ರಾಜ್ಯದಲ್ಲಿ ಆಡಳಿತ ಸಂಪೂರ್ಣ ವಿಫಲವಾಗಿದ್ದು, ಎರಡು ವರ್ಷದಿಂದ ಯಾವುದೇ ಅನುದಾನ ಸಿಗುತ್ತಿಲ್ಲ. ರಾಜೀನಾಮೆ ಕೊಟ್ಟು ಹೋಗುವ ಪರಿಸ್ಥಿತಿ ಇದೆ ಎಂದು ರಾಜು ಕಾಗೆಯವರು ಅಳಲು ತೋಡಿಕೊಂಡಿದ್ದಾರೆ. ಅಲ್ಲದೇ ಈ ಸರ್ಕಾರದ ಭ್ರಷ್ಟಾಚಾರಗಳ ಬಗ್ಗೆ ತನಿಖೆ ನಡೆಯಲಿ, ಅದಕ್ಕೂ ಮೊದಲು ಜಮೀರ್ ಅಹ್ಮದ್ ರಾಜೀನಾಮೆ ಕೊಡಲಿ ಎಂದು ಬೇಳೂರು ಗೋಪಾಲ ಕೃಷ್ಣರವರು ತಮ್ಮದೇ ಸರ್ಕಾರವನ್ನು ಆಗ್ರಹಿಸಿದ್ದು ಇಡೀ ಸರ್ಕಾರದ ಬಂಡವಾಳವೇ ಬಯಲಾಗಿದೆ ಎಂದು ಶಾಸಕರು ಹೇಳಿದರು.
ಸ್ವತಃ ಮುಖ್ಯಮಂತ್ರಿಗಳೇ ಎಲ್ಲಾ ಅಕ್ರಮಗಳಿಗೆ ಗಾಡ್‌ ಫಾದರ್‌ ಆಗಿ ನಿಂತಿರುವಾಗ ಇನ್ನು ಭ್ರಷ್ಟರಿಗೆ ಯಾವ ಭಯ? ವಿಪಕ್ಷದವರಾದ ನಾವು ಹೇಳಿದರೆ ರಾಜಕೀಯ ಎನ್ನುವ ಕಾಂಗ್ರೆಸ್ಸಿಗರು ಈಗೇನು ಹೇಳುತ್ತಾರೆ? ಇನ್ನೂ ಸಹ ಯಾವ ಮುಖ ಇಟ್ಟುಕೊಂಡು ಆಡಳಿತ ನಡೆಸುತ್ತಿದ್ದಾರೆ? ಕಿಂಚಿತ್ತಾದರೂ ಮರ್ಯಾದೆ ಉಳಿದಿದ್ದರೆ ಕೂಡಲೇ ರಾಜ್ಯದ ಜನತೆಯ ಕ್ಷಮೆಯಾಚಿಸಿ ರಾಜೀನಾಮೆ ಕೊಟ್ಟು ತೊಲಗಲಿ ಎಂದು ಶಾಸಕ ಕಾಮತ್ ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು