11:34 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಮಂಗಳೂರು- ಚಿತ್ರದುರ್ಗ ಖಾಸಗಿ ಬಸ್ ಶಿವಮೊಗ್ಗ ಬಳಿ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು; 10ಕ್ಕೂ ಹೆಚ್ಚು ಮಂದಿಗೆ ಗಾಯ

30/07/2025, 14:21

ಶಿವಮೊಗ್ಗ(reporterkarnataka.com): ಕೆಟ್ಟು ನಿಂತಿದ್ದ ಲಾರಿಗೆ ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, 10 ಮಂದಿ‌ ಗಂಭೀರ ಗಾಯಗೊಂಡ ದಾರುಣ ಘಟನೆ ಗಾಜನೂರು ಸಮೀಪ ಬುಧವಾರ ಮುಂಜಾನೆ ನಡೆದಿದೆ.
ಗಾಜನೂರು ಡ್ಯಾಂ ಬಳಿ ಮುಂಜಾನೆ
ಸುಮಾರು 3 ಗಂಟೆ ಈ ದುರ್ಘಟನೆ ಸಂಭವಿಸಿದೆ.
ಮಂಗಳೂರಿನಿಂದ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಕಡೆ ಹೊರಟಿದ್ದ ದುರ್ಗಾಂಬ ಬಸ್ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಲಾರಿ ಆಂಧ್ರ ಪ್ರದೇಶದ್ದಾಗಿದೆ. ಅಪಘಾತದ ರಭಸಕ್ಕೆ ತೀವ್ರ ಗಾಯಗೊಂಡ ಬಸ್ ಕಂಡಕ್ಟರ್ ಅಣ್ಣಪ್ಪ (40) ಹಾಗೂ ಚಳ್ಳಕೆರೆ ನಿವಾಸಿ ಹರ್ಷಿತ್ (35) ಎಂಬವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದಿಂದ ಶಿವಮೊಗ್ಗ ಮಂಗಳೂರು ರಾಷ್ಟ್ರೀಯ ಹೆದ್ದಾರಿ 169(A) ರಲ್ಲಿ ಕೆಲಕಾಲ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು‌. ಸ್ಥಳಕ್ಕೆ ತುಂಗಾ ನಗರ ಠಾಣೆಯ ಪೊಲೀಸ್​ ಇನ್ಸ್​ಪೆಕ್ಟರ್​ ಗುರುರಾಜ್ ಹಾಗೂ ತಂಡ ಭೇಟಿ ನೀಡಿ, ಗಾಯಾಳುಗಳನ್ನು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
ಲಾರಿ ಕತ್ತಲಲ್ಲಿ ನಿಂತಿರುವುದು ಹಾಗೂ ಬಸ್​ ವೇಗವಾಗಿ ಚಲಿಸುತ್ತಿರುವುದೇ ಘಟನೆಗೆ ಕಾರಣ ಎಂದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ. ಗಾಯಾಳುಗಳ ಗುರುತು ಪತ್ತೆ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ತುಂಗಾ ನಗರ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು