2:03 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

Mangaluru | ಕ್ರೈಸ್ತ ಧರ್ಮ ಗುರುಗಳ ದಿನಾಚರಣೆ: ಪಾಲ್ದನೆ ಚರ್ಚ್ ನಲ್ಲಿ ಮೂವರು ಧರ್ಮಗುರುಗಳಿಗೆ ಸನ್ಮಾನ

09/08/2026, 13:04

ಮಂಗಳೂರು(reporterkarnataka.com): ಕ್ಯಾಥೊಲಿಕರ ಚರ್ಚ್ ಧರ್ಮಗುರುಗಳ ಪೋಷಕ ಸಂತ ಜಾನ್ ಮೇರಿ ವಿಯಾನ್ನಿ ಅವರ ಸ್ಮರಣಾರ್ಥ ಆಗಸ್ಟ್ 4 ಅನ್ನು ಧರ್ಮಗುರುಗಳ ದಿನವಾಗಿ ಆಚರಿಸಲಾಗುತ್ತದೆ.
ಆ ಪ್ರಯುಕ್ತ ಆಗಸ್ಟ್ 9ರಂದು ಭಾನುವಾರ ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಬಲಿ ಪೂಜೆಯ ಸಂದರ್ಭ ಪ್ರಧಾನ ಧರ್ಮಗುರು ಸೇರಿದಂತೆ ಮೂವರು ಧರ್ಮಗುರುಗಳನ್ನು ಸನ್ಮಾನಿಸಲಾಯಿತು.
ಪ್ರಧಾನ ಧರ್ಮ ಗುರು ವಂದನೀಯ ಫಾ ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರನ್ನು ಚರ್ಚ್ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಸಹಾಯಕ ಧರ್ಮ ಗುರು ವಂದನೀಯ ಫಾ. ಜೋಸೆಫ್ ಕುವೆಲ್ಲೊ ಅವರನ್ನು ಚರ್ಚ್ ನ ಕಾರ್ಯದರ್ಶಿ ರೋಷನ್ ಮೊಂತೇರೊ, ಚರ್ಚ್ ನಲ್ಲಿ ಡಿಯಾಕೋನ್ ಆಗಿ ಸೇವೆ ಸಲ್ಲಿಸಿ ಇತ್ತೀಚೆಗೆ ಧರ್ಮಗುರುಗಳಾಗಿ ದೀಕ್ಷೆ ಸ್ವೀಕರಿಸಿ ಇಂದು ಪಾಲ್ದನೆಗೆ ಅತಿಥಿಯಾಗಿ ಆಗಮಿಸಿ ಬಲಿ ಪೂಜೆಯಲ್ಲಿ ಸಹಭಾಗಿತ್ವ ವಹಿಸಿದ ವಂದನೀಯ ಫಾ. ರೋಶ್ವಿನ್ ಲೋಪೆಜ್ ಅವರನ್ನು ಚರ್ಚ್ ನ ಸರ್ವ ಆಯೋಗಗಳ ಸಂಯೋಜಕ ವಿಲಿಯಂ ಲೋಬೊ ಅವರು ಹೂ ಗುಚ್ಛ ನೀಡಿ ಅಭಿನಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು