10:13 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಮಂಗಳೂರು: ಕೆಲರಾಯ್ ಚರ್ಚ್ ನಲ್ಲಿ ಕ್ರೈಸ್ತ ಸಮುದಾಯದ ಜನೋತ್ಸವ

18/09/2025, 22:18

ಮಂಗಳೂರು(reporterkarnataka.com): ನಗರ ಕೆಲರಾಯ್ ಸೈಂಟ್ ಆನ್ಸ್ ಚರ್ಚ್ ಮತ್ತು ಕ್ಯಾಥೊಲಿಕ್ ಸಭಾ ಕೆಲರಾಯ್ ಘಟಕದ ಜಂಟಿ ಆಶ್ರಯದಲ್ಲಿ ಕ್ರೈಸ್ತ ಸಮುದಾಯದ ಜನೋತ್ಸವ (ಲಾಯಿಕೋತ್ಸವ್ – 2025) ಸಪ್ಟೆಂಬರ್ 21 ರಂದು ಕೆಲರಾಯ್ ಗೋಲ್ಡನ್ ಜುಬಿಲಿ ಸಭಾಂಗಣದಲ್ಲಿ ನಡೆಯಲಿದೆ.

ವಿವಿಧ ಸಂಘಟನೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಮಾಜ ಮುಖಿ ಕಾರ್ಯಕ್ರಮಗಳನ್ನು ನಡೆಸಲು ಮುಂದಾಳುತ್ವ ವಹಿಸಲು ಆಸಕ್ತಿ ಇರುವ ಕ್ರೈಸ್ತ ಸಮುದಾಯದ ಮುಖಂಡರಿಗೆ, ಯುವ ಜನರಿಗೆ ಮತ್ತು ರಾಜಕೀಯ ಕ್ಷೇತ್ರದಲ್ಲಿ ಆಸಕ್ತಿ ಇರುವವರಿಗೆ ತರಬೇತಿ, ಮಾಹಿತಿ ನೀಡುವುದು, ಸಮಾಲೋಚನೆ ನಡೆಸುವುದು ಮತ್ತು ಏಕತೆಯ ಬಗ್ಗೆ ಮಾಹಿತಿ ನೀಡುವುದು ಇದರ ಉದ್ದೇಶವಾಗಿದೆ.
ಬೆಳಗ್ಗೆ 8.30ರಿಂದ ಮಧ್ಯಾಹ್ನ 1 ಗಂಟೆ ತನಕ ನಡೆಯುವ ಈ ಕಾರ್ಯಕ್ರಮದಲ್ಲಿ ನೀರುಮಾರ್ಗ, ಬೊಂಡಂತಿಲ, ಉಳಾಯಿಬೆಟ್ಟು, ಮಲ್ಲೂರು, ಅಡ್ಯಾರ್, ಅರ್ಕುಳ, ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿ ಹಾಗೂ ಮಂಗಳೂರು ಮಹಾ ನಗರ ಪಾಲಿಕೆಯ ಪದವು, ವಾಮಂಜೂರು ವಾರ್ಡ್ ಗಳ ವ್ಯಾಪ್ತಿಗೆ ಬರುವ 5 ಚರ್ಚು ಗಳ (ಕೆಲರಾಯ್, ನೀರುಮಾರ್ಗ, ಪೆರ್ಮಾಯ್, ಪಾಲ್ದನೆ, ವಾಮಂಜೂರು) ಕ್ರೈಸ್ತ ಸಮುದಾಯದ ಚರ್ಚ್ ಪಾಲನಾ ಸಮಿತಿಯ ಸದಸ್ಯರು, ಕ್ಯಾಥೊಲಿಕ್ ಸಭಾ ಘಟಕಗಳ ಸದಸ್ಯರು, ಐ. ಸಿ. ವೈ. ಎಂ. ಸದಸ್ಯರು, ವಿವಿಧ ಮುಖಂಡರು ಹಾಗೂ ಆಸಕ್ತರು ಸೇರಿದಂತೆ ಸುಮಾರು 700 ಕ್ಕಿಂತ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಕೆಲರಾಯ್ ಚರ್ಚ್ ಧರ್ಮಗುರು ವಂದನೀಯ ಫಾ. ಸಿಲ್ವೆಸ್ಟರ್ ಡಿ’ ಕೋಸ್ಟಾ ಮತ್ತು ಕ್ಯಾಥೋಲಿಕ್ ಸಭಾ ಅಧ್ಯಕ್ಷ ಡೊಟ್ಟಿ ಬ್ರಾಗ್ಸ್ ಅವರು ತಿಳಿಸಿದ್ದಾರೆ. ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ನಿರ್ದೇಶಕ ವಂದನೀಯ ಫಾ. ಫೌಸ್ಟಿನ್ ಲೋಬೊ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು