8:50 AM Sunday12 - April 2026
ಬ್ರೇಕಿಂಗ್ ನ್ಯೂಸ್
3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ

ಇತ್ತೀಚಿನ ಸುದ್ದಿ

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್: ಕಡಲನಗರಿಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್

06/06/2023, 17:57

ಮಂಗಳೂರು(reporterkarnataka.com): ಪೊಲೀಸ್ ಇಲಾಖೆ ನೈತಿಕ ಪೊಲೀಸ್ ಗಿರಿ ನಡೆಯಲು ಯಾವುದೇ ಕಾರಣಕ್ಕೂ ಅವಕಾಶವೇ ನೀಡಬಾರದು. ಈ ನಿಟ್ಟಿನಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಶ್ಚಿಮ ವಲಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇನೆ. ಕೋಮು ಸಾಮರಸ್ಯ ತರಲು ಸೂಚನೆ ನೀಡಿದ್ದೇನೆ. ನೈತಿಕ ಪೊಲೀಸ್ ಗಿರಿ ನಡೆದರೆ ರಾಜ್ಯಕ್ಕೆ ಕೆಟ್ಟ ಹೆಸರು ಬರುತ್ತದೆ. ಇದಕ್ಕೆ ಕಠಿಣ ಕ್ರಮ ತೆಗೆದುಕೊಳ್ಳಲು ಸೂಚನೆ ಕೊಟ್ಟಿದ್ದೇನೆ ಎಂದರು.
ಕರಾವಳಿ ಮಾತ್ರವಲ್ಲ ಕೋಮು ವೈಷಮ್ಯ ಇರುವ ಕಡೆಗಳಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ ಮಾಡುತ್ತೇವೆ. ಅದರ ರೂಪುರೇಷೆ ಬಗ್ಗೆ ಕಮಿಷನರ್ ತಯಾರಿಸುತ್ತಾರೆ. ಇದರ ಮುಖ್ಯ ಉದ್ದೇಶ ನೈತಿಕ ಪೊಲೀಸ್‌ಗಿರಿ ಹತ್ತಿಕ್ಕುವುದು. ಮೊದಲಿಗೆ ಮಂಗಳೂರು ಕಮಿಷನರ್ ವ್ಯಾಪ್ತಿಯಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ ಮಾಡುತ್ತೇವೆ. ಇಲ್ಲಿ ಯಶಸ್ವಿಯಾದರೆ ಇಡೀ ರಾಜ್ಯದಲ್ಲಿ ವಿಸ್ತರಣೆ ಮಾಡುತ್ತೇವೆ ಎಂದು ಅವರು ನುಡಿದರು.
ಬಿಜೆಪಿ ಆಡಳಿತದಲ್ಲಿ ಮತೀಯ ಕೊಲೆಗಳು ನಡೆದಾಗ ಪರಿಹಾರ ನೀಡುವಲ್ಲಿ ತಾರತಮ್ಯವಾಗಿದೆ. ಈ ತಾರತಮ್ಯವನ್ನು ಸರಿಪಡಿಸಲು ನಿರ್ಧರಿಸಲಾಗಿದೆ.‌ ಹತ್ಯೆಗೀಡಾದ ಫಾಝಿಲ್, ಮಸೂದ್ ಮತ್ತು ಜಲೀಲ್ ಕುಟುಂಬಗಳಿಗೆ ಪರಿಹಾರ ಕೊಡುವ ಬಗ್ಗೆ ಶೀಘ್ರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವರು ಹೇಳಿದರು.
ಯುವ ಸಮೂಹದಲ್ಲಿ ಡ್ರಗ್ಸ್ ಗೆ ಬಲಿಯಾಗಿದೆ. ಡ್ರಗ್ಸ್ ದಂಧೆ ತಡೆಯೋಕೆ ಆಗದ ರೀತಿಯಲ್ಲಿ ಬೆಳೆಯುತ್ತಿದೆ. ಆಗಸ್ಟ್ 15ರೊಳಗೆ ಕರಾವಳಿಯಲ್ಲಿ ಯಾವುದೇ ಡ್ರಗ್ಸ್ ಸಿಗದಂತೆ ಕ್ರಮ ತೆಗೆದುಕೊಳ್ಳಲು ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದರು.
ಸರ್ವ ಜನಾಂಗದ ಶಾಂತಿಯ ತೋಟ ಎಂದು ಪ್ರಣಾಳಿಕೆ ಭರವಸೆ ಕೊಟ್ಟಿದ್ದೇವೆ. ಶಾಂತಿಯ ತೋಟಕ್ಕೆ ತೊಂದರೆ ಮಾಡುವ ಕೆಲಸ ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ನಡೀತಿದೆ. ನಮಗೆ ಕೋಮು ಸಾಮರಸ್ಯ ಇರಬೇಕು. ಯಾರು ಪ್ರಚೋದನೆ ಮಾಡುತ್ತಾರೋ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ನಮ್ಮ ಬಳಿ ಕಾನೂನುಗಳಿವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು