4:10 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್: ಕಡಲನಗರಿಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್

06/06/2023, 17:57

ಮಂಗಳೂರು(reporterkarnataka.com): ಪೊಲೀಸ್ ಇಲಾಖೆ ನೈತಿಕ ಪೊಲೀಸ್ ಗಿರಿ ನಡೆಯಲು ಯಾವುದೇ ಕಾರಣಕ್ಕೂ ಅವಕಾಶವೇ ನೀಡಬಾರದು. ಈ ನಿಟ್ಟಿನಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಶ್ಚಿಮ ವಲಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇನೆ. ಕೋಮು ಸಾಮರಸ್ಯ ತರಲು ಸೂಚನೆ ನೀಡಿದ್ದೇನೆ. ನೈತಿಕ ಪೊಲೀಸ್ ಗಿರಿ ನಡೆದರೆ ರಾಜ್ಯಕ್ಕೆ ಕೆಟ್ಟ ಹೆಸರು ಬರುತ್ತದೆ. ಇದಕ್ಕೆ ಕಠಿಣ ಕ್ರಮ ತೆಗೆದುಕೊಳ್ಳಲು ಸೂಚನೆ ಕೊಟ್ಟಿದ್ದೇನೆ ಎಂದರು.
ಕರಾವಳಿ ಮಾತ್ರವಲ್ಲ ಕೋಮು ವೈಷಮ್ಯ ಇರುವ ಕಡೆಗಳಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ ಮಾಡುತ್ತೇವೆ. ಅದರ ರೂಪುರೇಷೆ ಬಗ್ಗೆ ಕಮಿಷನರ್ ತಯಾರಿಸುತ್ತಾರೆ. ಇದರ ಮುಖ್ಯ ಉದ್ದೇಶ ನೈತಿಕ ಪೊಲೀಸ್‌ಗಿರಿ ಹತ್ತಿಕ್ಕುವುದು. ಮೊದಲಿಗೆ ಮಂಗಳೂರು ಕಮಿಷನರ್ ವ್ಯಾಪ್ತಿಯಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ ಮಾಡುತ್ತೇವೆ. ಇಲ್ಲಿ ಯಶಸ್ವಿಯಾದರೆ ಇಡೀ ರಾಜ್ಯದಲ್ಲಿ ವಿಸ್ತರಣೆ ಮಾಡುತ್ತೇವೆ ಎಂದು ಅವರು ನುಡಿದರು.
ಬಿಜೆಪಿ ಆಡಳಿತದಲ್ಲಿ ಮತೀಯ ಕೊಲೆಗಳು ನಡೆದಾಗ ಪರಿಹಾರ ನೀಡುವಲ್ಲಿ ತಾರತಮ್ಯವಾಗಿದೆ. ಈ ತಾರತಮ್ಯವನ್ನು ಸರಿಪಡಿಸಲು ನಿರ್ಧರಿಸಲಾಗಿದೆ.‌ ಹತ್ಯೆಗೀಡಾದ ಫಾಝಿಲ್, ಮಸೂದ್ ಮತ್ತು ಜಲೀಲ್ ಕುಟುಂಬಗಳಿಗೆ ಪರಿಹಾರ ಕೊಡುವ ಬಗ್ಗೆ ಶೀಘ್ರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವರು ಹೇಳಿದರು.
ಯುವ ಸಮೂಹದಲ್ಲಿ ಡ್ರಗ್ಸ್ ಗೆ ಬಲಿಯಾಗಿದೆ. ಡ್ರಗ್ಸ್ ದಂಧೆ ತಡೆಯೋಕೆ ಆಗದ ರೀತಿಯಲ್ಲಿ ಬೆಳೆಯುತ್ತಿದೆ. ಆಗಸ್ಟ್ 15ರೊಳಗೆ ಕರಾವಳಿಯಲ್ಲಿ ಯಾವುದೇ ಡ್ರಗ್ಸ್ ಸಿಗದಂತೆ ಕ್ರಮ ತೆಗೆದುಕೊಳ್ಳಲು ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದರು.
ಸರ್ವ ಜನಾಂಗದ ಶಾಂತಿಯ ತೋಟ ಎಂದು ಪ್ರಣಾಳಿಕೆ ಭರವಸೆ ಕೊಟ್ಟಿದ್ದೇವೆ. ಶಾಂತಿಯ ತೋಟಕ್ಕೆ ತೊಂದರೆ ಮಾಡುವ ಕೆಲಸ ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ನಡೀತಿದೆ. ನಮಗೆ ಕೋಮು ಸಾಮರಸ್ಯ ಇರಬೇಕು. ಯಾರು ಪ್ರಚೋದನೆ ಮಾಡುತ್ತಾರೋ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ನಮ್ಮ ಬಳಿ ಕಾನೂನುಗಳಿವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು