ಇತ್ತೀಚಿನ ಸುದ್ದಿ
Mangaluru | ಕಲಿ ಯೋಗೀಶ್ ಸಹಚರ ಶ್ರೀನಿವಾಸ್ ಶೆಟ್ಟಿ ಬಂಧನ: ಮುಲ್ಕಿ ಪೊಲೀಸರ ಕಾರ್ಯಾಚರಣೆ
05/10/2025, 14:18

ಮಂಗಳೂರು(reporterkarnataka.com): ಕಲಿ ಯೋಗೀಶ್ ಪ್ರಕರಣದಲ್ಲಿ ಭಾಗಿಯಾಗಿ ಅನೇಕ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಯೋಗೀಶ್ ನ ಸಹಚರ ಶ್ರೀನಿವಾಸ್ ಶೆಟ್ಟಿ ಅಲಿಯಾಸ್ ಶೀನು ಎಂಬಾತನನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಮುಲ್ಕಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅ. ಕ್ರ 155/ 2017 & ಕೋಕಾ ಪ್ರಕರಣದ ಅರೋಪಿಯಾದ ಕಲಿ ಯೋಗೀಶ್ ನ ಸಹಚರನಾದ ಮುಲ್ಕಿ ತಾಲೂಕಿನ ಚಿತ್ರಾಪು ಗ್ರಾಮದ ಆರೋಪಿ ಶ್ರೀನಿವಾಸ್ ಅಲಿಯಾಸ್ ಶೀನು(45)ಎಂಬಾತನು ಕಳೆದ 8 ವರ್ಷಗಳಿಂದ ದಸ್ತಗಿರಿ ಗೆ ಸಿಗದೆ, ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ.ಈತನ ವಿರುದ್ದ ಪ್ರಿನ್ಸಿಪಲ್ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮೈಸೂರು ರವರು ವಾರೆಂಟ್ ಹಾಗೂ ಉದ್ಘೂಷಣೆಯನ್ನು ಹೊರಡಿಸಿತ್ತು. ಈತನ ಪತ್ತೆಯ ಬಗ್ಗೆ ಶ್ರೀಕಾಂತ್ (ಸಹಾಯಕ ಪೊಲೀಸ್ ಅಯುಕ್ತರ) ಅವರ ಮಾರ್ಗದರ್ಶನದಲ್ಲಿ ಮುಲ್ಕಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಮಂಜುನಾಥ ಬಿ. ಎಸ್. ಪೊಲೀಸ್ ಉಪ ನಿರೀಕ್ಷಕರಾ್ ಉಮೇಶ್ ಕುಮಾರ್ ಎಂ.ಎನ್. ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಎ.ಎಸ್.ಐ ಸುರೇಶ್ ಕುಂದರ್, ಹೆಡ್ ಕಾನ್ಸ್ಟೇಬಲ್ ಉದಯ ಅವರ ಒಂದು ತಂಡವನ್ನು ರಚಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.