8:46 AM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

Mangaluru | ಕಲಿ ಯೋಗೀಶ್ ಸಹಚರ ಶ್ರೀನಿವಾಸ್ ಶೆಟ್ಟಿ ಬಂಧನ: ಮುಲ್ಕಿ ಪೊಲೀಸರ ಕಾರ್ಯಾಚರಣೆ

05/10/2025, 14:18

ಮಂಗಳೂರು(reporterkarnataka.com): ಕಲಿ ಯೋಗೀಶ್ ಪ್ರಕರಣದಲ್ಲಿ ಭಾಗಿಯಾಗಿ ಅನೇಕ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಯೋಗೀಶ್ ನ ಸಹಚರ ಶ್ರೀನಿವಾಸ್ ಶೆಟ್ಟಿ ಅಲಿಯಾಸ್ ಶೀನು ಎಂಬಾತನನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಮುಲ್ಕಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅ. ಕ್ರ 155/ 2017 & ಕೋಕಾ ಪ್ರಕರಣದ ಅರೋಪಿಯಾದ ಕಲಿ ಯೋಗೀಶ್ ನ ಸಹಚರನಾದ ಮುಲ್ಕಿ ತಾಲೂಕಿನ ಚಿತ್ರಾಪು ಗ್ರಾಮದ ಆರೋಪಿ ಶ್ರೀನಿವಾಸ್ ಅಲಿಯಾಸ್ ಶೀನು(45)ಎಂಬಾತನು ಕಳೆದ 8 ವರ್ಷಗಳಿಂದ ದಸ್ತಗಿರಿ ಗೆ ಸಿಗದೆ, ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ.ಈತನ ವಿರುದ್ದ ಪ್ರಿನ್ಸಿಪಲ್ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮೈಸೂರು ರವರು ವಾರೆಂಟ್ ಹಾಗೂ ಉದ್ಘೂಷಣೆಯನ್ನು ಹೊರಡಿಸಿತ್ತು. ಈತನ ಪತ್ತೆಯ ಬಗ್ಗೆ ಶ್ರೀಕಾಂತ್ (ಸಹಾಯಕ ಪೊಲೀಸ್ ಅಯುಕ್ತರ) ಅವರ ಮಾರ್ಗದರ್ಶನದಲ್ಲಿ ಮುಲ್ಕಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಮಂಜುನಾಥ ಬಿ. ಎಸ್. ಪೊಲೀಸ್ ಉಪ ನಿರೀಕ್ಷಕರಾ್ ಉಮೇಶ್ ಕುಮಾರ್ ಎಂ.ಎನ್. ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಎ.ಎಸ್.ಐ ಸುರೇಶ್ ಕುಂದರ್, ಹೆಡ್ ಕಾನ್ಸ್ಟೇಬಲ್ ಉದಯ ಅವರ ಒಂದು ತಂಡವನ್ನು ರಚಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು