9:27 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಮಂಗಳೂರು ಕಂಪ್ಯೂಟರ್ ವಿತರಕರ ಸಂಘದ ಪದಾಧಿಕಾರಿಗಳ ಪದಗ್ರಹಣ

27/07/2024, 16:29

ಮಂಗಳೂರು(reporterkarnataka.com): ಮಂಗಳೂರು ಕಂಪ್ಯೂಟರ್ ವಿತರಕರ ಸಂಘದ 2024-26ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಶನಿವಾರ ಹೋಟೆಲ್ ದೀಪಾ ಕಂಫರ್ಟ್ ನಲ್ಲಿ ಜರಗಿತು.
ಅಧ್ಯಕ್ಷರಾಗಿ ಟಾಲಿ ಕಂಪ್ಯೂಟರ್ಸ್ ಮಾಲಕರಾದ ಜಗದೀಶ್ ಅಧಿಕಾರ ಸ್ವೀಕರಿಸಿದರು. ಉಪಾಧ್ಯಕ್ಷರಾಗಿ ಶ್ರೀ ಭಾರತಿ ಸಿಸ್ಟಮ್ಸನ ಮಾಲಕರಾದ ಶಂಕರನಾರಾಯಣ ಕಾರಂತ್, ಕಾರ್ಯದರ್ಶಿಯಾಗಿ ಡಿಯೊ ಟೆಕ್ ಗ್ಲೋಬಲ್‌ನ ಪಾಲುದಾರರಾದ ರವಿ ಭಟ್, ಖಜಾಂಚಿಯಾಗಿ ಚತುರ್ ಟೆಕ್ನಾಲಜಿಸ್‌ ಮಾಲಕರಾದ ಜಯಪ್ರಕಾಶ್ ಹಾಗೂ ಜೊತೆ ಕಾರ್ಯದರ್ಶಿಯಾಗಿ ಶ್ರೀನಿಧಿ ಸಿಸ್ಟಮ್ಸನ ಮಾಲಕರಾದ ರಾಜೇಶ್ ಅಧಿಕಾರ ಸ್ವೀಕರಿಸಿದರು.
ಕಾರ‍್ಯಕಾರಿ ಸಮಿತಿಯ ಸದಸ್ಯರಾಗಿ ಆರ್ಯ ಎಂಟರ್‌ಪ್ರೈಸಸ್‌ನ ನಿರ್ದೆಶಕರಾದ ಮುರಳಿ ಎಚ್., ಸಾಫ್ಟ್ ಲಿಂಕ್ ಮಾಲಕರಾದ ಗಣೇಶ್, ಐ ಕೇರ್ ಕಂಪ್ಯೂಟರ್ಸ್ ಮಾಲಕರಾದ ಲೋಕೇಶ್, ಇಲೆಕ್ಟೊçಟೆಕ್ ಸಿಸ್ಟಮ್ಸ್ ಪಾಲುದಾರರಾದ ಭರತ್ ಶೆಟ್ಟಿ, ಎ.ಎನ್. ಎಂಟರ್‌ಪ್ರೈಸಸ್‌ನ ಪಾಲುದಾರರಾದ ನಿರಂಜನ್ ಆಯ್ಕೆಯಾಗಿದ್ದಾರೆ. ನಿಕಟಪೂರ್ವ ಅಧ್ಯಕ್ಷರಾದ ಭರತ್ ಶೆಟ್ಟಿ ತಮ್ಮ ನಿರ್ಗಮನ ಭಾಷಣದಲ್ಲಿ ಸಂಸ್ಥೆಯ ಕಳೆದ ಅವಧಿಯ ಕರ‍್ಯಕ್ರಮಗಳ ವಿವರಗಳನ್ನು ನೀಡಿದರು.
ಅಧಿಕಾರ ವಹಿಸಿಕೊಂಡ ಅಧ್ಯಕ್ಷರಾದ ಜಗದೀಶ್ ತಮ್ಮ ಮುಂದಿನ ಯೋಜನೆಗಳ ಬಗ್ಗೆ ಮಾತನಾಡಿದರು.
ಕಾರ‍್ಯಕ್ರಮದಲ್ಲಿ ನಿಕಟಪೂರ್ವ ಅಧ್ಯಕ್ಷರಾದ ಭರತ್ ಶೆಟ್ಟಿಗೆ ಶಾಲು ಹೊದಿಸಿ ಸನ್ಮಾನಿಸಲಾಯಿತು ಮತ್ತು ಭಾರತೀಯ ಜನತಾ ಪಕ್ಷದ ಶಿಕ್ಷಣ ಪ್ರಕೋಷ್ಟದ ರಾಜ್ಯ ಸದಸ್ಯರಾಗಿ ಆಯ್ಕೆಯಾದ ಮುರಳಿ ಎಚ್. ಅವರನ್ನು ಗೌರವಿಸಲಾಯಿತು.
ಮಂಗಳೂರು ಕಂಪ್ಯೂಟರ್ ವಿತರಕರ ಸಂಘದ (ಎಮ್‌ಐಟಿಡಿಎ) ಪೂರ್ವಧ್ಯಕ್ಷರಾದ ಗೋಪಿನಾಥ್, ಕೇತನ್ ಚಂದ್ರಾನ, ಸಾಯಿ ರಾವ್ ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು.
ಶಂಕರ್ ನಾರಾಯಣ ಪ್ರಾರ್ಥನೆ ನೆರವೇರಿಸಿದರು, ಜಗದೀಶ್ ಸ್ವಾಗತಿಸಿದರು. ರವಿ ಭಟ್ ವಂದನಾರ್ಪಣೆ ಸಲ್ಲಿಸಿದರು. ಮುರಳಿ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು