12:39 AM Saturday16 - August 2025
ಬ್ರೇಕಿಂಗ್ ನ್ಯೂಸ್
Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ

ಇತ್ತೀಚಿನ ಸುದ್ದಿ

ಮಂಗಳೂರು ಕಂಪ್ಯೂಟರ್ ವಿತರಕರ ಸಂಘದ ಪದಾಧಿಕಾರಿಗಳ ಪದಗ್ರಹಣ

27/07/2024, 16:29

ಮಂಗಳೂರು(reporterkarnataka.com): ಮಂಗಳೂರು ಕಂಪ್ಯೂಟರ್ ವಿತರಕರ ಸಂಘದ 2024-26ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಶನಿವಾರ ಹೋಟೆಲ್ ದೀಪಾ ಕಂಫರ್ಟ್ ನಲ್ಲಿ ಜರಗಿತು.
ಅಧ್ಯಕ್ಷರಾಗಿ ಟಾಲಿ ಕಂಪ್ಯೂಟರ್ಸ್ ಮಾಲಕರಾದ ಜಗದೀಶ್ ಅಧಿಕಾರ ಸ್ವೀಕರಿಸಿದರು. ಉಪಾಧ್ಯಕ್ಷರಾಗಿ ಶ್ರೀ ಭಾರತಿ ಸಿಸ್ಟಮ್ಸನ ಮಾಲಕರಾದ ಶಂಕರನಾರಾಯಣ ಕಾರಂತ್, ಕಾರ್ಯದರ್ಶಿಯಾಗಿ ಡಿಯೊ ಟೆಕ್ ಗ್ಲೋಬಲ್‌ನ ಪಾಲುದಾರರಾದ ರವಿ ಭಟ್, ಖಜಾಂಚಿಯಾಗಿ ಚತುರ್ ಟೆಕ್ನಾಲಜಿಸ್‌ ಮಾಲಕರಾದ ಜಯಪ್ರಕಾಶ್ ಹಾಗೂ ಜೊತೆ ಕಾರ್ಯದರ್ಶಿಯಾಗಿ ಶ್ರೀನಿಧಿ ಸಿಸ್ಟಮ್ಸನ ಮಾಲಕರಾದ ರಾಜೇಶ್ ಅಧಿಕಾರ ಸ್ವೀಕರಿಸಿದರು.
ಕಾರ‍್ಯಕಾರಿ ಸಮಿತಿಯ ಸದಸ್ಯರಾಗಿ ಆರ್ಯ ಎಂಟರ್‌ಪ್ರೈಸಸ್‌ನ ನಿರ್ದೆಶಕರಾದ ಮುರಳಿ ಎಚ್., ಸಾಫ್ಟ್ ಲಿಂಕ್ ಮಾಲಕರಾದ ಗಣೇಶ್, ಐ ಕೇರ್ ಕಂಪ್ಯೂಟರ್ಸ್ ಮಾಲಕರಾದ ಲೋಕೇಶ್, ಇಲೆಕ್ಟೊçಟೆಕ್ ಸಿಸ್ಟಮ್ಸ್ ಪಾಲುದಾರರಾದ ಭರತ್ ಶೆಟ್ಟಿ, ಎ.ಎನ್. ಎಂಟರ್‌ಪ್ರೈಸಸ್‌ನ ಪಾಲುದಾರರಾದ ನಿರಂಜನ್ ಆಯ್ಕೆಯಾಗಿದ್ದಾರೆ. ನಿಕಟಪೂರ್ವ ಅಧ್ಯಕ್ಷರಾದ ಭರತ್ ಶೆಟ್ಟಿ ತಮ್ಮ ನಿರ್ಗಮನ ಭಾಷಣದಲ್ಲಿ ಸಂಸ್ಥೆಯ ಕಳೆದ ಅವಧಿಯ ಕರ‍್ಯಕ್ರಮಗಳ ವಿವರಗಳನ್ನು ನೀಡಿದರು.
ಅಧಿಕಾರ ವಹಿಸಿಕೊಂಡ ಅಧ್ಯಕ್ಷರಾದ ಜಗದೀಶ್ ತಮ್ಮ ಮುಂದಿನ ಯೋಜನೆಗಳ ಬಗ್ಗೆ ಮಾತನಾಡಿದರು.
ಕಾರ‍್ಯಕ್ರಮದಲ್ಲಿ ನಿಕಟಪೂರ್ವ ಅಧ್ಯಕ್ಷರಾದ ಭರತ್ ಶೆಟ್ಟಿಗೆ ಶಾಲು ಹೊದಿಸಿ ಸನ್ಮಾನಿಸಲಾಯಿತು ಮತ್ತು ಭಾರತೀಯ ಜನತಾ ಪಕ್ಷದ ಶಿಕ್ಷಣ ಪ್ರಕೋಷ್ಟದ ರಾಜ್ಯ ಸದಸ್ಯರಾಗಿ ಆಯ್ಕೆಯಾದ ಮುರಳಿ ಎಚ್. ಅವರನ್ನು ಗೌರವಿಸಲಾಯಿತು.
ಮಂಗಳೂರು ಕಂಪ್ಯೂಟರ್ ವಿತರಕರ ಸಂಘದ (ಎಮ್‌ಐಟಿಡಿಎ) ಪೂರ್ವಧ್ಯಕ್ಷರಾದ ಗೋಪಿನಾಥ್, ಕೇತನ್ ಚಂದ್ರಾನ, ಸಾಯಿ ರಾವ್ ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು.
ಶಂಕರ್ ನಾರಾಯಣ ಪ್ರಾರ್ಥನೆ ನೆರವೇರಿಸಿದರು, ಜಗದೀಶ್ ಸ್ವಾಗತಿಸಿದರು. ರವಿ ಭಟ್ ವಂದನಾರ್ಪಣೆ ಸಲ್ಲಿಸಿದರು. ಮುರಳಿ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು