6:26 AM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಮಂಗಳೂರು ಕಂಪ್ಯೂಟರ್ ವಿತರಕರ ಸಂಘದ ಪದಾಧಿಕಾರಿಗಳ ಪದಗ್ರಹಣ

27/07/2024, 16:29

ಮಂಗಳೂರು(reporterkarnataka.com): ಮಂಗಳೂರು ಕಂಪ್ಯೂಟರ್ ವಿತರಕರ ಸಂಘದ 2024-26ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಶನಿವಾರ ಹೋಟೆಲ್ ದೀಪಾ ಕಂಫರ್ಟ್ ನಲ್ಲಿ ಜರಗಿತು.
ಅಧ್ಯಕ್ಷರಾಗಿ ಟಾಲಿ ಕಂಪ್ಯೂಟರ್ಸ್ ಮಾಲಕರಾದ ಜಗದೀಶ್ ಅಧಿಕಾರ ಸ್ವೀಕರಿಸಿದರು. ಉಪಾಧ್ಯಕ್ಷರಾಗಿ ಶ್ರೀ ಭಾರತಿ ಸಿಸ್ಟಮ್ಸನ ಮಾಲಕರಾದ ಶಂಕರನಾರಾಯಣ ಕಾರಂತ್, ಕಾರ್ಯದರ್ಶಿಯಾಗಿ ಡಿಯೊ ಟೆಕ್ ಗ್ಲೋಬಲ್‌ನ ಪಾಲುದಾರರಾದ ರವಿ ಭಟ್, ಖಜಾಂಚಿಯಾಗಿ ಚತುರ್ ಟೆಕ್ನಾಲಜಿಸ್‌ ಮಾಲಕರಾದ ಜಯಪ್ರಕಾಶ್ ಹಾಗೂ ಜೊತೆ ಕಾರ್ಯದರ್ಶಿಯಾಗಿ ಶ್ರೀನಿಧಿ ಸಿಸ್ಟಮ್ಸನ ಮಾಲಕರಾದ ರಾಜೇಶ್ ಅಧಿಕಾರ ಸ್ವೀಕರಿಸಿದರು.
ಕಾರ‍್ಯಕಾರಿ ಸಮಿತಿಯ ಸದಸ್ಯರಾಗಿ ಆರ್ಯ ಎಂಟರ್‌ಪ್ರೈಸಸ್‌ನ ನಿರ್ದೆಶಕರಾದ ಮುರಳಿ ಎಚ್., ಸಾಫ್ಟ್ ಲಿಂಕ್ ಮಾಲಕರಾದ ಗಣೇಶ್, ಐ ಕೇರ್ ಕಂಪ್ಯೂಟರ್ಸ್ ಮಾಲಕರಾದ ಲೋಕೇಶ್, ಇಲೆಕ್ಟೊçಟೆಕ್ ಸಿಸ್ಟಮ್ಸ್ ಪಾಲುದಾರರಾದ ಭರತ್ ಶೆಟ್ಟಿ, ಎ.ಎನ್. ಎಂಟರ್‌ಪ್ರೈಸಸ್‌ನ ಪಾಲುದಾರರಾದ ನಿರಂಜನ್ ಆಯ್ಕೆಯಾಗಿದ್ದಾರೆ. ನಿಕಟಪೂರ್ವ ಅಧ್ಯಕ್ಷರಾದ ಭರತ್ ಶೆಟ್ಟಿ ತಮ್ಮ ನಿರ್ಗಮನ ಭಾಷಣದಲ್ಲಿ ಸಂಸ್ಥೆಯ ಕಳೆದ ಅವಧಿಯ ಕರ‍್ಯಕ್ರಮಗಳ ವಿವರಗಳನ್ನು ನೀಡಿದರು.
ಅಧಿಕಾರ ವಹಿಸಿಕೊಂಡ ಅಧ್ಯಕ್ಷರಾದ ಜಗದೀಶ್ ತಮ್ಮ ಮುಂದಿನ ಯೋಜನೆಗಳ ಬಗ್ಗೆ ಮಾತನಾಡಿದರು.
ಕಾರ‍್ಯಕ್ರಮದಲ್ಲಿ ನಿಕಟಪೂರ್ವ ಅಧ್ಯಕ್ಷರಾದ ಭರತ್ ಶೆಟ್ಟಿಗೆ ಶಾಲು ಹೊದಿಸಿ ಸನ್ಮಾನಿಸಲಾಯಿತು ಮತ್ತು ಭಾರತೀಯ ಜನತಾ ಪಕ್ಷದ ಶಿಕ್ಷಣ ಪ್ರಕೋಷ್ಟದ ರಾಜ್ಯ ಸದಸ್ಯರಾಗಿ ಆಯ್ಕೆಯಾದ ಮುರಳಿ ಎಚ್. ಅವರನ್ನು ಗೌರವಿಸಲಾಯಿತು.
ಮಂಗಳೂರು ಕಂಪ್ಯೂಟರ್ ವಿತರಕರ ಸಂಘದ (ಎಮ್‌ಐಟಿಡಿಎ) ಪೂರ್ವಧ್ಯಕ್ಷರಾದ ಗೋಪಿನಾಥ್, ಕೇತನ್ ಚಂದ್ರಾನ, ಸಾಯಿ ರಾವ್ ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು.
ಶಂಕರ್ ನಾರಾಯಣ ಪ್ರಾರ್ಥನೆ ನೆರವೇರಿಸಿದರು, ಜಗದೀಶ್ ಸ್ವಾಗತಿಸಿದರು. ರವಿ ಭಟ್ ವಂದನಾರ್ಪಣೆ ಸಲ್ಲಿಸಿದರು. ಮುರಳಿ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು