7:13 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

Mangaluru | ರಾಷ್ಟ್ರೀಯ ಹೆದ್ದಾರಿ 66 ದುರಸ್ತಿ ಆಗ್ರಹಿಸಿ 12ರಂದು ಕಾಂಗ್ರೆಸ್ ಪ್ರತಿಭಟನೆ

11/09/2025, 23:56

ಮಂಗಳೂರು(reporterkarnataka.com): ರಸ್ತೆ ಗುಂಡಿಗಳಿಂದಾಗಿ ಹಲವರ ಸಾವಿಗೆ ಕಾರಣವಾಗಿರುವ ರಾಷ್ಟ್ರೀಯ ಹೆದ್ದಾರಿ 66ನ್ನು ದುರಸ್ತಿ ಮಾಡದಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಧೋರಣೆಯನ್ನು ಖಂಡಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಸೆ.12ರಂದು ಬೆಳಗ್ಗೆ ನಗರದ ನಂತೂರುನಲ್ಲಿ ಪ್ರತಿಭಟನೆ ನಡೆಸಲಿದೆ.
ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್
ಅವರು ಇಂದು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದರು.
ಪ್ರತಿಭಟನೆಯ ಬಳಿಕ ರಸ್ತೆ ದುರಸ್ತಿಗೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಚೇರಿಗೆ ತೆರಳಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದರು.
ಎರಡು ದಿನಗಳ ಹಿಂದೆ ದ್ವಿಚಕ್ರ ವಾಹನ ರಾಷ್ಟ್ರೀಯ ಹೆದ್ದಾರಿಯಲ್ಲಿನ ಗುಂಡಿಗೆ ಬಿದ್ದು ಮಾಧವಿ ಎಂಬವರು ಮೃತಪಟ್ಟಿದ್ದಾರೆ. ಆದರೆ ಅವರಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಬಿಜೆಪಿ ನಾಯಕರು ಧ್ವನಿಯೆತ್ತಿಲ್ಲ ಏಕೆ?. ಹಿಂದೂ ಮಹಿಳೆ ಅಪಘಾತದಲ್ಲಿ ಮೃತಪಟ್ಟಿದ್ದರೂ ಆಕೆಗೆ ನ್ಯಾಯ ದೊರಕಿಸಲು ಬಿಜೆಪಿಯ ರಾಜ್ಯ ಪ್ರತಿಪಕ್ಷ ನಾಯಕ ಆರ್. ಅಶೋಕ್ , ರಾಜ್ಯಾಧ್ಯಕ್ಷ ವಿಜಯೇಂದ್ರ, ಪಕ್ಷದ ನಾಯಕರಾದ ಸಿ.ಟಿ.ರವಿ, ನಾರಾಯಣ ಸ್ವಾಮಿ ಯಾಕೆ ಬಂದಿಲ್ಲ ಎಂದವರು ಪ್ರಶ್ನಿಸಿದರು.
ದ.ಕ. ಜಿಲ್ಲೆಯಲ್ಲಿ ಸರಣಿಯ ಹತ್ಯೆಗಳು ನಡೆದ ಬಳಿಕ ಪೊಲೀಸ್ ಅಧಿಕಾರಿಗಳು ಕಾನೂನನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿದ ಕಾರಣದಿಂದಾಗಿ ಶಾಂತಿ ನೆಲೆಸಿದೆ. ಇದೀಗ ಆತಂಕ ದೂರವಾಗಿ ಜನರಿಗೆ ಶಾಂತಿ, ನೆಮ್ಮದಿಯ ಜೀವನ ನಡೆಸುವ ವಾತಾವರಣ ನಿರ್ಮಾಣವಾಗಿದೆ. ಹೊಡಿ, ಬಡಿ, ಕಡಿ, ಕೋಮು ದ್ವೇಷದ ಭಾಷಣಕ್ಕೆ ಮಂಗಳೂರು ಪೊಲೀಸ್ ಆಯುಕ್ತರು ಮತ್ತು ದ.ಕ. ಜಿಲ್ಲಾ ಎಸ್ಪಿ ಕಡಿವಾಣ ಹಾಕಿದ್ದಾರೆ. ಕಾನೂನಿನ ಅನುಷ್ಠಾನ ಸಮರ್ಪಕವಾಗಿ ಆಗಿರುವ ಹಿನ್ನೆಲೆಯಲ್ಲಿ ಡ್ರಗ್ಸ್ ಪೂರೈಕೆ , ಮಟ್ಕಾ, ಸ್ಕಿಲ್ ಗೇಮ್, ಜುಗಾರಿ, ಇಸ್ಪೇಟ್ ಮತ್ತಿತರರ ಅಕ್ರಮ, ಕಾನೂನುಬಾಹಿರ ಚಟುವಟಿಕೆಗಳು ಬಂದ್ ಆಗಿವೆ ಎಂದು ಹರೀಶ್ ಕುಮಾರ್ ನುಡಿದರು.
ಕಾನೂನು ಎಲ್ಲರಿಗೂ ಒಂದೇ. ಆದರೆ ಅನುಷ್ಠಾನದಲ್ಲಿ ಅಧಿಕಾರಿಗಳು ಎಡವಿದ ಹಿನ್ನೆಲೆಯಲ್ಲಿ ಹಿಂದೆ ಸಮಸ್ಯೆ ಆಗಿತ್ತು. ಈಗ ಎಲ್ಲಡೆ ಗಣೇಶೋತ್ಸವ ಶಾಂತಿಯುತವಾಗಿ ನಡೆದಿದೆ. ಕಾರ್ಯಕ್ರಮಗಳಿಗೆ ಅನುಮತಿ ಪಡೆಯದವರಿಗೆ ಸ್ವಲ್ಪ ತೊಂದರೆ ಆಗಿದ್ದು ನಿಜ. ಡಿಜೆಗೆ ಅವಕಾಶ ನೀಡದಿರುವುದು ಸ್ವಾಗತಾರ್ಹ. ಆರೋಗ್ಯಕ್ಕೆ ಹಾನಿಕಾರವಾದ ಡಿಜೆಗೆ ಇನ್ನು ಮುಂದೆಯೂ ಪೊಲೀಸ್ ಇಲಾಖೆ ಅವಕಾಶ ನೀಡಬಾರದು. ಧ್ವನಿವರ್ಧಕ, ಶಾಮಿಯಾನ, ಲೈಟಿಂಗ್ಸ್ ನವರಿಗೆ ತೊಂದರೆ ಆಗಿಲ್ಲ . ಸರಕಾರ ಕಾನೂನು ಮಾಡಿರುವುದನ್ನು ಅಧಿಕಾರಿಗಳು ಅನುಷ್ಠಾನ ಮಾಡಿದ್ದಾರೆ. ಏನಾದರೂ ಸಣ್ಣಪುಟ್ಟ ಲೋಪದೋಷಗಳು ಕಾಣಿಸಿಕೊಂಡಿದ್ದರೆ ಅವುಗಳನ್ನು ಸಂಬಂಧಪಟ್ಟವರನ್ನು ಕರೆಸಿ ಸಭೆ ನಡೆಸಿ ಸರಿಪಡಿಸುವ ಬಗ್ಗೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವರು ಭರವಸೆ ನೀಡಿದ್ದಾರೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮೂಡಾ ಅಧ್ಯಕ್ಷ ಸದಾಶಿವ ಉಳ್ಳಾಲ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ , ಜಿಲ್ಲಾ ನಗರ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಸ್. ಅಪ್ಪಿ, ಮುಖಂಡರಾದ ಶಬೀರ್ ಸಿದ್ದಕಟ್ಟೆ, ಸುರೇಂದ್ರ ಕಂಬಳಿ, ವಿಕಾಶ್ ಶೆಟ್ಟಿ, ನೀರಜ್‌ಚಂದ್ರ ಪಾಲ್, ಪದ್ಮಪ್ರಸಾದ್ ಜೈನ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು