7:05 AM Sunday16 - November 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್

ಇತ್ತೀಚಿನ ಸುದ್ದಿ

ಮಂಗಳೂರು ಕೋರ್ಟ್‌ ಕಾಂಪ್ಲೆಕ್ಸ್‌ನಲ್ಲಿ ಡಿಫೆನ್ಸ್‌ ಕೌನ್ಸೆಲ್ ಕಚೇರಿ ಕಾರ್ಯಾರಂಭ

15/01/2023, 19:03

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಮಂಗಳೂರು ನ್ಯಾಯಾಲಯ ಸಂಕೀರ್ಣದಲ್ಲಿ ಇದೇ ಮೊದಲ ಬಾರಿಗೆ ಕಾನೂನು ನೆರವು ಅಭಿರಕ್ಷಕರ (ಡಿಫೆನ್ಸ್ ಕೌನ್ಸೆಲ್) ಕಚೇರಿ ಕಾರ್ಯಾರಂಭ ಮಾಡಿದೆ.

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಜೆ. ವೀರಪ್ಪ ಕಾನೂನು ನೆರವು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಭಿರಕ್ಷಕರ ಕಚೇರಿಯನ್ನು ಏಕಕಾಲಕ್ಕೆ ಲೋಕಾರ್ಪಣೆ ಮಾಡಿದರು.
ಮಂಗಳೂರಿನ ನ್ಯಾಯಾಲಯ ಸಂಕೀರ್ಣದಲ್ಲಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ರವೀಂದ್ರ ಜೋಷಿ ಅವರು ಕಚೇರಿಯನ್ನು ವಿಧ್ಯುಕ್ತವಾಗಿ ಉದ್ಘಾಟಿಸಿದರು.

ಮಂಗಳೂರಿನ ಹಿರಿಯ ನ್ಯಾಯವಾದಿ ವಾಸುದೇವ ಗೌಡ ಅವರು ಮುಖ್ಯ ಡಿಫೆನ್ಸ್ ಕೌನ್ಸೆಲ್ ಆಗಿ ಅಧಿಕಾರ ವಹಿಸಿಕೊಂಡರು. ಉಪ ಡಿಫೆನ್ಸ್ ಕೌನ್ಸೆಲ್ ಆಗಿ ಶುಕರಾಜ ಕೊಟ್ಟಾರಿ ಹಾಗೂ ಸಹಾಯಕ ಡಿಫೆನ್ಸ್ ಕೌನ್ಸೆಲ್ ಆಗಿ ಕೃಷ್ಣ ಅಧಿಕಾರ ಸ್ವೀಕರಿಸಿದರು.

ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ.ಜಿ. ಶೋಭಾ, ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಪೃಥ್ವಿರಾಜ್ ರೈ, ಕಾರ್ಯದರ್ಶಿ ಶ್ರೀಧರ ಎಣ್ಮಕಜೆ, ಹಿರಿಯ ವಕೀಲರಾದ ಇಬ್ರಾಹಿಂ ಹಾಗೂ ವಿವಿಧ ನ್ಯಾಯಾಧೀಶರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು