1:28 AM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

Mangaluru | ಬಜಿಲಕೇರಿ ಗೋಶಾಲೆಯಲ್ಲಿ ಸಾಮರಸ್ಯ ಮಂಗಳೂರು ವತಿಯಿಂದ ಗೋ ಪೂಜೆ

21/10/2025, 19:52

ಮಂಗಳೂರು(reporterkarnataka.com); ನಗರದ ಬಜಿಲಕೇರಿಯ ಮುಖ್ಯಪ್ರಾಣ ದೇವಸ್ಥಾನದ ವಠಾರದಲ್ಲಿರುವ ಗುರುರಾಜ್ ಭಟ್ ಅವರ ಮಾಲೀಕತ್ವದ ಗೋ – ಶಾಲೆಯಲ್ಲಿ ಸಾಮರಸ್ಯ ಮಂಗಳೂರು ವತಿಯಿಂದ 33 ಕೋಟಿ ದೇವತೆಗಳ ಅವಾಸಸ್ಥಾನವಾಗಿರುವ ಗೋ- ಮಾತೆಯ ಪೂಜೆ ಆಚರಿಸಲಾಯಿತು.
ಹಿಂದೂ ಧರ್ಮದಲ್ಲಿ ಹಸುವಿಗೆ ವಿಶೇಷ ಸ್ಥಾನ, ಮಾನ, ಗೌರವವಿದೆ. ಹಸುವನ್ನು ಪೂಜನೀಯ ಭಾವನೆಯಿಂದ ಕಾಣಲಾಗುತ್ತದೆ. ಅಷ್ಟು ಮಾತ್ರವಲ್ಲ ಹಿಂದೂ ಧರ್ಮಗ್ರಂಥಗಳಲ್ಲಿ ಹಸುವಿಗೆ ತಾಯಿಯ ಸ್ಥಾನವನ್ನು ನೀಡಲಾಗಿದೆ. ಹಸುವಿನಲ್ಲಿ 33 ಕೋಟಿ ದೇವಾನುದೇವತೆಗಳು ನೆಲೆಸಿದ್ದಾರೆಂದು ನಂಬಲಾಗುತ್ತದೆ ಎಂದು ಸಾಮರಸ್ಯ ಮಂಗಳೂರು ಅಧ್ಯಕ್ಷೆ ಮಂಜುಳಾ ನಾಯಕ್ ಹೇಳಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಯೋಗೀಶ್ ನಾಯಕ್ , ಸಮರ್ಥ್ ಭಟ್ , ಸಿತಾರಾ , ರಾಧಿಕಾ ನಾಯಕ್ , ನೀತ್ ಶರಣ್ , ರಾಜೇಶ್ ದೇವಾಡಿಗ , ಸುನಿತಾ , ಟಿಸಿ ಗಣೇಶ್ , ಪ್ರಫುಲ್ಲಾ ಕಾಮತ್ , ಸುನಂದಾ , ಮಾತಾಜಿ , ರತಿಕಾ , ರಚಿತಾ ಹಾಗೂ ಮಾತಾಜಿಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು