3:31 PM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

Mangaluru Crime | ಸುಹಾಸ್ ಶೆಟ್ಟಿ ಕೊಲೆ ಹಿಂದೆ ಫಾಜಿಲ್‌ ಸಹೋದರ: ಪೊಲೀಸ್ ಕಮಿಷನರ್ ಅಗರ್ವಾಲ್ ಬಹಿರಂಗ

03/05/2025, 15:11

ಮಂಗಳೂರು(reporterkarnataka.com):
ಬಜಪೆ ಸಮೀಪದ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಫಾಜಿಲ್‌ ಸಹೋದರ ಇರುವ ಅಂಶ ಬೆಳಕಿಗೆ ಬಂದಿದೆ. ಮಂಗಳೂರು ಪೊಲೀಸ್‌ ಕಮಿಷನ‌ರ್ ಅನುಪಮ್ ಅಗರ್ವಾಲ್ ಅವರು ಸುಹಾಸ್ ಕೊಲೆಯಲ್ಲಿ ಈ ಹಿಂದೆ ಹತ್ಯೆಗೀಡಾಗಿದ್ದ ಫಾಜಿಲ್‌ನ ಸಹೋದರ ಸಹಾಯ ಮಾಡಿದ್ದ ಎಂಬ ವಿಷಯವನ್ನು ಬಹಿರಂಗಪಡಿಸಿದ್ದಾರೆ.
ಸುಹಾಸ್ ಶೆಟ್ಟಿ ಹತ್ಯೆಯ ಪ್ರಮುಖ ಆರೋಪಿ ಸಫಾನ್ ಆಗಿದ್ದಾನೆ. ಆತನ ಮೇಲೆ 2023ರಲ್ಲಿ ಮಾರಣಾಂತಿಕ ಹಲ್ಲೆ ನಡೆದಿತ್ತು. ಇದರ ಪ್ರತೀಕಾರಕ್ಕೆ ಫಾಜಿಲ್ ನ ತಮ್ಮನ ಸಹಾಯ ಪಡೆದು ಸುಹಾಸ್ ನ ಕೊಲೆ ಮಾಡಿದ್ದಾನೆ. ಮೇ 1ರ ರಾತ್ರಿ 6 ಮಂದಿ ಸೇರಿ ಸುಹಾಸ್ ಶೆಟ್ಟಿ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ಮಾಡಿದ್ದಾರೆ ಎಂದರು.
ಪೇಜಾವರ ಶಾಂತಿಗುಡ್ಡೆ ನಿವಾಸಿ, ಬಜಪೆ ಕಿನ್ನಿಪದವಿನಲ್ಲಿ ಬಾಡಿಗೆ ಮನೆಯಲ್ಲಿದ್ದ ಡ್ರೈವರ್ ಅಬ್ದುಲ್ ಸಫ್ಘಾನ್ (29), ಮೇಸ್ತಿ ಕೆಲಸ ಮಾಡಿಕೊಂಡಿದ್ದ ಶಾಂತಿಗುಡ್ಡೆ ನಿವಾಸಿ ನಿಯಾಜ್ (28), ಕೆಂಜಾರು ನಿವಾಸಿ ಮೊಹಮ್ಮದ್ ಮುಝಮಿಲ್ (32), ಕಳವಾರು ನಿವಾಸಿ ಕಲಂದರ್ ಶಾಫಿ (31), ಚಾಲಕ ವೃತ್ತಿ ಮಾಡುತ್ತಿದ್ದ ಕಳಸ ನಿವಾಸಿ ರಂಜಿತ್ (19), ಶಾಮಿಯಾನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಕಳಸದ ನಾಗರಾಜ್ (20), ಜೋಕಟ್ಟೆ ನಿವಾಸಿ ಮೊಹಮ್ಮದ್ ರಿಜ್ವಾನ್ (28) ಮತ್ತು ಅದಿಲ್ ಮೆಹರೂಫ್ ಬಂಧಿತರು.
ಸಫ್ಘಾನ್ ಮೇಲೆ 2023ರಲ್ಲಿ ಮಾರಣಾಂತಿಕ ಹಲ್ಲೆಯಾಗಿತ್ತು. ಸುಹಾಸ್ ಶೆಟ್ಟಿ ಸ್ನೇಹಿತರಾದ ಪ್ರಶಾಂತ್, ಧನರಾಜ್ ಸೇರಿ ಸಫಾನ್ ಮೇಲೆ ಹಲ್ಲೆ ಮಾಡಿದ್ದರು. ಸಫ್ಘಾನ್ ಗೆ ಸುಹಾಸ್ ಕೊಲೆ ಮಾಡುವ ಆತಂಕ ಇತ್ತು. ಈ ಹಿನ್ನೆಲೆಯಲ್ಲಿ ಸುಹಾಸ್ ನನ್ನು ಕೊಲೆ ಮಾಡಲು ತೀರ್ಮಾನ ಮಾಡಿದ್ದರು. ಇದೇ ವೇಳೆ ಹತ್ಯೆಯಾಗಿದ್ದ ಫಾಜಿಲ್ ನ ತಮ್ಮನನ್ನು ಸಂಪರ್ಕಿಸಿ ಸುಹಾಸ್ ನನ್ನು ಕೊಲೆ ಮಾಡುವ ಯೋಜನೆ ಮಾಡಿದ್ದಾರೆ ಎಂದು ಕಮಿಷನರ್ ನುಡಿದರು.
ಸುಹಾಸ್ ಕೊಲೆಗಾಗಿ 5 ಲಕ್ಷ ರೂಪಾಯಿ ನೀಡುವುದಾಗಿ ಫಾಜಿಲ್‌ನ ತಮ್ಮ ಆದಿಲ್ ಮೆಹರೂಫ್ ಭರವಸೆ ನೀಡಿದ್ದ. ಅದರಂತೆ 3 ಲಕ್ಷ ಅಡ್ವಾನ್ಸ್ ನೀಡಿದ್ದಾನೆ, ಬಳಿಕ ಒಂದು ತಂಡವನ್ನು ಹತ್ಯೆಗಾಗಿ ಸಫ್ಘಾನ್ ತಯಾರಿ ಮಾಡಿದ್ದಾನೆ ಎಂದು ಅಗರ್ ವಾಲ್ ಮಾಹಿತಿ ನೀಡಿದರು.
ನಿಯಾಜ್ ನ ಇಬ್ಬರು ಸ್ನೇಹಿತರಾದ ಕಳಸ ಮೂಲದ ನಾಗರಾಜ್ ಮತ್ತು ರಂಜಿತ್ ನನ್ನು ಕರೆಸಿದ್ದು, ಈ ಇಬ್ಬರು ಎರಡು ದಿನಗಳಿಂದ ಸಫ್ಘಾನ್ ಮನೆಯಲ್ಲಿ ವಾಸವಾಗಿದ್ದರು. ಮೇ 1ರಂದು ಸುಹಾಸ್ ಚಲನವಲನಗಳನ್ನು ಗಮನಿಸಿ ಕೊಲೆ ಮಾಡಿದ್ದಾರೆ ಎಂದು ಪೊಲೀಸ್‌ ಕಮಿಷನರ್ ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು