4:41 AM Wednesday8 - July 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ…

ಇತ್ತೀಚಿನ ಸುದ್ದಿ

ಮಂಗಳೂರು ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಪೃಥ್ವಿರಾಜ್ ಎಂ. ಪೂಜಾರಿ ಆಯ್ಕೆ

09/02/2025, 14:12

ಮಂಗಳೂರು(reporterkarnataka.com): ಮಂಗಳೂರು ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಪೃಥ್ವಿರಾಜ್ ಎಂ. ಪೂಜಾರಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆ ಫಲಿತಾಂಶ ಶುಕ್ರವಾರ ಪ್ರಕಟಗೊಂಡಿದ್ದು, 539 ಮತಗಳನ್ನು ಗಳಿಸಿ ಪೃಥ್ವಿರಾಜ್ ಎಂ ಪೂಜಾರಿ ಅಧ್ಯಕ್ಷ ಸ್ಥಾನಕ್ಕೆ ಚುನಾಯಿತರಾಗಿದ್ದಾರೆ.
ಮಂಗಳೂರು ತಾಲೂಕಿನ ಕಂಕನಾಡಿ 49ನೇ ವಾರ್ಡಿನ ನಿವಾಸಿಯಾಗಿರುವ ಪೃಥ್ವಿರಾಜ್ ಅವರು ಈ ಹಿಂದೆ ಮಂಗಳೂರು ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಬೂತ್ ಅಧ್ಯಕ್ಷರಾಗಿ ಸಾಮಾಜಿಕ ಸಂಘ-ಸಂಸ್ಥೆಗಳಲ್ಲಿ ಗುರುತಿಸಿಕೊಂಡು ಕರ್ನಾಟಕ ರಾಜ್ಯೋತ್ಸವ ಪುರಸ್ಕೃತ ಯುವವಾಹಿನಿ (ರಿ.) ಕಂಕನಾಡಿ ಘಟಕದ ಮಾಜಿ ಅಧ್ಯಕ್ಷರು. ಸೂರ್ಯಕಾಂತಿ ಬಿಸಿನೆಸ್ ನೆಟ್ವರ್ಕ್ ಇದರ ಜೊತೆ ಕಾರ್ಯದರ್ಶಿಯಾಗಿ, ರೋಟರಿ ಕ್ಲಬ್ ಆಫ್ ಮಂಗಳೂರು ಸೀ ಸೈಡ್ ಇದರ ಸದಸ್ಯರಾಗಿದ್ದಾರೆ. 2024ರ ಆಗಸ್ಟ್ ರಿಂದ 2024 ಸಪ್ಟೆಂಬರ್ ರವರೆಗೆ ಮತದಾನ ನಡೆದಿತ್ತು. ಮಂಗಳೂರು ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಒಟ್ಟು 12 ಅಭ್ಯರ್ಥಿಗಳು ಕಣದಲ್ಲಿದ್ದರು.
ಎಂದು ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು