12:30 AM Monday6 - July 2026
ಬ್ರೇಕಿಂಗ್ ನ್ಯೂಸ್
ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.…

ಇತ್ತೀಚಿನ ಸುದ್ದಿ

ಮಂಗಳೂರು ಧರ್ಮ ಪ್ರಾಂತ್ಯದಲ್ಲಿ ಕ್ರೈಸ್ತ ಶಿಕ್ಷಣ ವರ್ಷ ಪ್ರಾರಂಭೋತ್ಸವ: ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಕಾರ್ಯಕ್ರಮ

02/06/2024, 16:20

ಮಂಗಳೂರು(reporterkarnataka.com): ಮಂಗಳೂರು ಕ್ಯಾಥೋಲಿಕ್ ಧರ್ಮ ಪ್ರಾಂತ್ಯದ ಚರ್ಚ್ ಗಳಲ್ಲಿ 2024- 25ನೇ ಸಾಲಿನ ಕ್ರೈಸ್ತ ಶಿಕ್ಷಣ ವರ್ಷದ ಪ್ರಾರಂಭೋತ್ಸವ ಭಾನುವಾರ ನೆರವೇರಿತು.
ಸೊಮ್ಯಾ, ಆಮ್ಕಾಂ ಮಾಗೊಂಕ್ ಶಿಕಾಯ್ (ಕರ್ತರೇ, ನಮಗೆ ಪ್ರಾರ್ಥಿಸಲು ಕಲಿಸಿರಿ) ಎಂಬ ಧ್ಯೇಯ ವಾಕ್ಯದೊಂದಿಗೆ ದೀಪ ಬೆಳಗಿಸಿ ಕ್ರೈಸ್ತ ಶಿಕ್ಷಣದ ಮಕ್ಕಳು, ಶಿಕ್ಷಕರು, ಹೆತ್ತವರು, ಹಿರಿಯರ ಪ್ರತಿನಿಧಿಗಳೊಂದಿಗೆ ಕ್ರೈಸ್ತ ಶಿಕ್ಷಣದ ವರ್ಷವನ್ನು ಉದ್ಘಾಟಿಸಲಾಯಿತು.
ಅದರಂತೆ ಇಂದು ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಈ ಕಾರ್ಯಕ್ರಮವನ್ನು ಚರ್ಚಿನ ಧರ್ಮಗುರು ರೆ. ಫಾ. ಆಲ್ಬನ್ ಡಿ ಸೋಜ ಅವರು ಉದ್ಘಾಟಿಸಿದರು. ಚರ್ಚಿನ
ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೇರೊ, ಕ್ರೈಸ್ತ ಶಿಕ್ಷಣ ಸಂಯೋಜಕಿ ಲಿಝೀ ಫೆರ್ನಾಂಡಿಸ್, ಶಿಕ್ಷಕಿ ಪ್ರತಿನಿಧಿ ರೆನಿಟಾ ಟೆಲ್ಲಿಸ್, ಮಕ್ಕಳ ಪ್ರತಿನಿಧಿ ರಿಶೋನ್ ಪಿಂಟೊ, ಶಿಕ್ಷಕರಾದ ಸಿಸ್ಟರ್ ಡೊರೊತಿ,ಮರ್ಲಿನ್ ಮೊಂತೇರೊ, ಅಸುಮ್ತಾ ಮೊಂತೇರೊ, ಜೆಸಿಂತಾ ವಾಲ್ಡರ್, ವೀಣಾ ಡಿಮೆಲ್ಲೊ, ಶಾಂತಿ ಮೊಂತೇರೊ, ರೆನಿಟಾ ಟೆಲ್ಲಿಸ್, ಲಿಝೀ ಫೆರ್ನಾಂಡಿಸ್, ನಿಶಾ ಬ್ರಾಗ್ಸ್, ಮಾಲಿನಿ ಫೆರ್ನಾಂಡಿಸ್, ಗ್ರಾಸಿಯಾ ಪಿಂಟೊ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು