3:20 PM Saturday4 - April 2026
ಬ್ರೇಕಿಂಗ್ ನ್ಯೂಸ್
ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

ಇತ್ತೀಚಿನ ಸುದ್ದಿ

ಮಂಗಳೂರು ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪವಿತ್ರ ಪ್ರಸಾದ ಮೆರವಣಿಗೆ: ಪೂರ್ವಭಾವಿ ಸಭೆ

19/11/2024, 18:44

ಮಂಗಳೂರು(reporterkarnataka.com): ಮಂಗಳೂರು ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪವಿತ್ರ ಪ್ರಸಾದದ ಮೆರವಣಿಗೆ 2025 ಜನವರಿ 5ರಂದು ನಡೆಯಲಿದ್ದು, ಇದರ ಬಗ್ಗೆ ಪೂರ್ವಬಾವಿ ಸಭೆಯನ್ನು ಬಿಷಪ್ ಹೌಸ್‌ನಲ್ಲಿ ನಡೆಸಲಾಯಿತು.
ಅಧ್ಯಕ್ಷತೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂ| ಡಾ| ಪೀಟರ್ ಪಾವ್ಲ್ ಸಲ್ಡಾನ ವಹಿಸಿ, ಕಾರ್ಯಕ್ರಮದ ಬಗ್ಗೆ ರೂಪುರೇಖೆಯನ್ನು ವಿವರಿಸಿದರು. ಈ ಸಭೆಯಲ್ಲಿ ಧರ್ಮಪ್ರಾತ್ಯದ ಶ್ರೇಷ್ಠ ಗುರು ವಂ| ಪಾ| ಮ್ಯಾಕ್ಸಿಂ ನೊರೊನ್ಹಾ, ಸಾರ್ವಜನಿಕ ಸಂಪರ್ಕ ಅಧಿಕಾರಿ ರೋಯ್ ಕ್ಯಾಸ್ಟಲಿನೋ, ಕಥೋಲಿಕ್ ಸಭಾ ಕೇಂದ್ರಿಯ ಅಧ್ಯಕ್ಷ ಆಲ್ವಿನ್ ಡಿ’ಸೋಜಾ ಮುಂತಾದವರು ಉಪಸ್ಥಿತರಿದ್ದರು.
ರೋಯ್ ಕ್ಯಾಸ್ಟಲಿನೋ ಮೆರವಣಿಗೆಯ ಬಗ್ಗೆ ಸ್ವಯಂಸೇವಕರ ಸೇವೆಯ ಬಗ್ಗೆ ರೂಪು ರೇಖೆ ನೀಡಿ ಪ್ರತಿ ಚರ್ಚಿನ ಸ್ವಯಂ ಸೇವಕರು ಅವರು ನಿಲ್ಲುವ ಸ್ಥಳವನ್ನು ತಿಳಿಸಿದರು.
ಈ ಪರಮ ಪ್ರಸಾದದ ಮೆರವಣಿಗೆಯು ಆ ದಿನ ಸಂಜೆ 3 ಗಂಟೆಗೆ ಮಿಲಾಗ್ರಿಸ್ ಚರ್ಚಿನಲ್ಲಿ ಬಲಿಪೂಜೆಯೊಂದಿಗೆ ಪ್ರಾರಂಭಗೊಳ್ಳಲಿದ್ದು 4.30ಕ್ಕೆ ಮಿಲಾಗ್ರಿಸ್ ಚರ್ಚಿನಿಂದ ಪಾಂಡೇಶ್ವರದ ರೊಸಾರಿಯೊ ಚರ್ಚಿಗೆ ಮೆರವಣಿಗೆ ಮೂಲಕ ಪರಮ ಪ್ರಸಾದ ಕೊಂಡೊಯ್ಯಲಾಗುವುದು. ಚರ್ಚಿನ ತೆರೆದ ಮೈದಾನದಲ್ಲಿ ಪ್ರವಚನ ಹಾಗೂ ಇತರ ಕಾರ್ಯಕ್ರಮಗಳು ಜರಗಲಿರುವುದು.
ಸಭೆಯಲ್ಲಿ ಧರ್ಮ ಪ್ರಾಂತ್ಯದ 124 ಚರ್ಚುಗಳಿಂದ ಬಂದ ಧರ್ಮಗುರುಗಳು, ಉಪಾಧ್ಯಕ್ಷರು, ಕಾರ್ಯದರ್ಶಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು