12:28 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮಂಗಳೂರು ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪವಿತ್ರ ಪ್ರಸಾದ ಮೆರವಣಿಗೆ: ಪೂರ್ವಭಾವಿ ಸಭೆ

19/11/2024, 18:44

ಮಂಗಳೂರು(reporterkarnataka.com): ಮಂಗಳೂರು ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪವಿತ್ರ ಪ್ರಸಾದದ ಮೆರವಣಿಗೆ 2025 ಜನವರಿ 5ರಂದು ನಡೆಯಲಿದ್ದು, ಇದರ ಬಗ್ಗೆ ಪೂರ್ವಬಾವಿ ಸಭೆಯನ್ನು ಬಿಷಪ್ ಹೌಸ್‌ನಲ್ಲಿ ನಡೆಸಲಾಯಿತು.
ಅಧ್ಯಕ್ಷತೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂ| ಡಾ| ಪೀಟರ್ ಪಾವ್ಲ್ ಸಲ್ಡಾನ ವಹಿಸಿ, ಕಾರ್ಯಕ್ರಮದ ಬಗ್ಗೆ ರೂಪುರೇಖೆಯನ್ನು ವಿವರಿಸಿದರು. ಈ ಸಭೆಯಲ್ಲಿ ಧರ್ಮಪ್ರಾತ್ಯದ ಶ್ರೇಷ್ಠ ಗುರು ವಂ| ಪಾ| ಮ್ಯಾಕ್ಸಿಂ ನೊರೊನ್ಹಾ, ಸಾರ್ವಜನಿಕ ಸಂಪರ್ಕ ಅಧಿಕಾರಿ ರೋಯ್ ಕ್ಯಾಸ್ಟಲಿನೋ, ಕಥೋಲಿಕ್ ಸಭಾ ಕೇಂದ್ರಿಯ ಅಧ್ಯಕ್ಷ ಆಲ್ವಿನ್ ಡಿ’ಸೋಜಾ ಮುಂತಾದವರು ಉಪಸ್ಥಿತರಿದ್ದರು.
ರೋಯ್ ಕ್ಯಾಸ್ಟಲಿನೋ ಮೆರವಣಿಗೆಯ ಬಗ್ಗೆ ಸ್ವಯಂಸೇವಕರ ಸೇವೆಯ ಬಗ್ಗೆ ರೂಪು ರೇಖೆ ನೀಡಿ ಪ್ರತಿ ಚರ್ಚಿನ ಸ್ವಯಂ ಸೇವಕರು ಅವರು ನಿಲ್ಲುವ ಸ್ಥಳವನ್ನು ತಿಳಿಸಿದರು.
ಈ ಪರಮ ಪ್ರಸಾದದ ಮೆರವಣಿಗೆಯು ಆ ದಿನ ಸಂಜೆ 3 ಗಂಟೆಗೆ ಮಿಲಾಗ್ರಿಸ್ ಚರ್ಚಿನಲ್ಲಿ ಬಲಿಪೂಜೆಯೊಂದಿಗೆ ಪ್ರಾರಂಭಗೊಳ್ಳಲಿದ್ದು 4.30ಕ್ಕೆ ಮಿಲಾಗ್ರಿಸ್ ಚರ್ಚಿನಿಂದ ಪಾಂಡೇಶ್ವರದ ರೊಸಾರಿಯೊ ಚರ್ಚಿಗೆ ಮೆರವಣಿಗೆ ಮೂಲಕ ಪರಮ ಪ್ರಸಾದ ಕೊಂಡೊಯ್ಯಲಾಗುವುದು. ಚರ್ಚಿನ ತೆರೆದ ಮೈದಾನದಲ್ಲಿ ಪ್ರವಚನ ಹಾಗೂ ಇತರ ಕಾರ್ಯಕ್ರಮಗಳು ಜರಗಲಿರುವುದು.
ಸಭೆಯಲ್ಲಿ ಧರ್ಮ ಪ್ರಾಂತ್ಯದ 124 ಚರ್ಚುಗಳಿಂದ ಬಂದ ಧರ್ಮಗುರುಗಳು, ಉಪಾಧ್ಯಕ್ಷರು, ಕಾರ್ಯದರ್ಶಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು