4:41 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮಂಗಳೂರು ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪವಿತ್ರ ಪ್ರಸಾದ ಮೆರವಣಿಗೆ: ಪೂರ್ವಭಾವಿ ಸಭೆ

19/11/2024, 18:44

ಮಂಗಳೂರು(reporterkarnataka.com): ಮಂಗಳೂರು ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪವಿತ್ರ ಪ್ರಸಾದದ ಮೆರವಣಿಗೆ 2025 ಜನವರಿ 5ರಂದು ನಡೆಯಲಿದ್ದು, ಇದರ ಬಗ್ಗೆ ಪೂರ್ವಬಾವಿ ಸಭೆಯನ್ನು ಬಿಷಪ್ ಹೌಸ್‌ನಲ್ಲಿ ನಡೆಸಲಾಯಿತು.
ಅಧ್ಯಕ್ಷತೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂ| ಡಾ| ಪೀಟರ್ ಪಾವ್ಲ್ ಸಲ್ಡಾನ ವಹಿಸಿ, ಕಾರ್ಯಕ್ರಮದ ಬಗ್ಗೆ ರೂಪುರೇಖೆಯನ್ನು ವಿವರಿಸಿದರು. ಈ ಸಭೆಯಲ್ಲಿ ಧರ್ಮಪ್ರಾತ್ಯದ ಶ್ರೇಷ್ಠ ಗುರು ವಂ| ಪಾ| ಮ್ಯಾಕ್ಸಿಂ ನೊರೊನ್ಹಾ, ಸಾರ್ವಜನಿಕ ಸಂಪರ್ಕ ಅಧಿಕಾರಿ ರೋಯ್ ಕ್ಯಾಸ್ಟಲಿನೋ, ಕಥೋಲಿಕ್ ಸಭಾ ಕೇಂದ್ರಿಯ ಅಧ್ಯಕ್ಷ ಆಲ್ವಿನ್ ಡಿ’ಸೋಜಾ ಮುಂತಾದವರು ಉಪಸ್ಥಿತರಿದ್ದರು.
ರೋಯ್ ಕ್ಯಾಸ್ಟಲಿನೋ ಮೆರವಣಿಗೆಯ ಬಗ್ಗೆ ಸ್ವಯಂಸೇವಕರ ಸೇವೆಯ ಬಗ್ಗೆ ರೂಪು ರೇಖೆ ನೀಡಿ ಪ್ರತಿ ಚರ್ಚಿನ ಸ್ವಯಂ ಸೇವಕರು ಅವರು ನಿಲ್ಲುವ ಸ್ಥಳವನ್ನು ತಿಳಿಸಿದರು.
ಈ ಪರಮ ಪ್ರಸಾದದ ಮೆರವಣಿಗೆಯು ಆ ದಿನ ಸಂಜೆ 3 ಗಂಟೆಗೆ ಮಿಲಾಗ್ರಿಸ್ ಚರ್ಚಿನಲ್ಲಿ ಬಲಿಪೂಜೆಯೊಂದಿಗೆ ಪ್ರಾರಂಭಗೊಳ್ಳಲಿದ್ದು 4.30ಕ್ಕೆ ಮಿಲಾಗ್ರಿಸ್ ಚರ್ಚಿನಿಂದ ಪಾಂಡೇಶ್ವರದ ರೊಸಾರಿಯೊ ಚರ್ಚಿಗೆ ಮೆರವಣಿಗೆ ಮೂಲಕ ಪರಮ ಪ್ರಸಾದ ಕೊಂಡೊಯ್ಯಲಾಗುವುದು. ಚರ್ಚಿನ ತೆರೆದ ಮೈದಾನದಲ್ಲಿ ಪ್ರವಚನ ಹಾಗೂ ಇತರ ಕಾರ್ಯಕ್ರಮಗಳು ಜರಗಲಿರುವುದು.
ಸಭೆಯಲ್ಲಿ ಧರ್ಮ ಪ್ರಾಂತ್ಯದ 124 ಚರ್ಚುಗಳಿಂದ ಬಂದ ಧರ್ಮಗುರುಗಳು, ಉಪಾಧ್ಯಕ್ಷರು, ಕಾರ್ಯದರ್ಶಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು