10:06 AM Sunday10 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಮಂಗಳೂರು ದಸರಾ ಮಹೋತ್ಸವ; ಪಾಲಿಕೆ ವತಿಯಿಂದ ನಗರದಲ್ಲಿ ದೀಪಾಲಂಕಾರ: ಶಾಸಕ ವೇದವ್ಯಾಸ್ ಕಾಮತ್ 

20/09/2022, 21:01

ಮಂಗಳೂರು(reporterkarnataka.com):ಮಂಗಳೂರು ದಸರಾ ಮಹೋತ್ಸವಕ್ಕೆ ಈ ಬಾರಿ ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ನಗರದಲ್ಲಿ ದೀಪಾಲಂಕಾರ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ. 

ಮಂಗಳೂರು ದಸರಾ‌ ಖ್ಯಾತಿ ದೇಶದೆಲ್ಲೆಡೆ ಹಬ್ಬುತ್ತಿದೆ. ಕರಾವಳಿ ಭಾಗದಲ್ಲಿ ಮಂಗಳೂರು ದಸರಾ ಹೊಸ ಹುರುಪು ನೀಡಿದ್ದು ಇದಕ್ಕೆ ಪೂರಕವಾಗಿ ಪಾಲಿಕೆಯ ವತಿಯಿಂದ ನಗರದಲ್ಲಿ ವಿದ್ಯುತ್ ದೀಪಾಲಂಕಾರ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ. 

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ, ಮಂಗಳಾದೇವಿ ದೇವಸ್ಥಾನ, ರಥಬೀದಿ ವೆಂಕಟರಮಣ ದೇವಸ್ಥಾನ, ಡೊಂಗರಕೇರಿ ವೆಂಕಟರಮಣ ದೇವಸ್ಥಾನ ಸೇರಿದಂತೆ ನಗರದಲ್ಲಿ ನವರಾತ್ರಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಮಂಗಳೂರು ದಸರಕ್ಕೆ ವಿಶ್ವವಿಖ್ಯಾತ ಮೈಸೂರು ದಸರಾ ಮಾದರಿಯಲ್ಲಿ ಮನ್ನಣೆ ದೊರೆಯುತಿದ್ದು ಮುಂಬರುವ ದಿನಗಳಲ್ಲಿ ದೇಶ ವಿದೇಶದಿಂದ ಭಕ್ತರನ್ನು ಆಕರ್ಷಿಸುತ್ತದೆ ಎಂದು ಹೇಳಿದ್ದಾರೆ. 

ಮಂಗಳೂರು ದಸರಾ ಮೂಲಕ ಈ ಭಾಗದ ಆರ್ಥಿಕ, ಉದ್ಯಮ, ಪ್ರವಾಸೋದ್ಯಮಕ್ಕೆ ಹೆಚ್ಚಿನ ಆಧ್ಯತೆ ನೀಡಲಾಗುತ್ತದೆ. ಈ ನಿಟ್ಟಿನಲ್ಲಿ ಪಾಲಿಕೆಯ ವತಿಯಿಂದ ಮಹತ್ವದ ನಿರ್ಣಯ ಕೈಗೊಂಡು ನಗರದ ದೀಪಾಲಂಕಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂದೆ ಯಾವುದೇ ಆಡಳಿತ ವ್ಯವಸ್ಥೆ ಬಂದರೂ ದೀಪಾಲಂಕಾರದ ವ್ಯವಸ್ಥೆ ಮುಂದುವರಿಯಲಿದೆ ಎಂದು ಹೇಳಿದ್ದಾರೆ.

ನಾರಾಯಣ ಗುರು ವೃತ್ತ ಉದ್ಘಾಟನೆ: ಮಂಗಳೂರು ದಸರಾ‌ ಸಂದರ್ಭದಲ್ಲಿ ಸದ್ಯ ನಿರ್ಮಾಣ ಹಂತದಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರು ಸರ್ಕಲ್ ಉದ್ಘಾಟನೆಯಾಗಲಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ. ತ್ವರಿತ ಗತಿಯಲ್ಲಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಅಂತಿಮ ಹಂತ ತಲುಪಿದೆ. ದಸರಾ ಸಂಭ್ರಮಾಚರಣೆಯ ಸಂದರ್ಭದಲ್ಲಿ ಉದ್ಘಾಟನೆಗೆ ಸಿದ್ಧವಾಗಲಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು