12:20 PM Wednesday25 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ಮಂಗಳೂರು ದಸರಾ ಮೆರವಣಿಗೆ: ಜನಸಾಗರದ ನಡುವೆ ಶಾರದಾ ಮಾತೆ, ನವದುರ್ಗೆಯರ ಭವ್ಯ ಶೋಭಾಯಾತ್ರೆ

14/10/2024, 00:26

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.ಕಂ

ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ನವರಾತ್ರಿ ಮಹೋತ್ಸದ ಅಂಗವಾಗಿ ದಸರಾ ಶೋಭಾಯಾತ್ರೆ ಭಾರೀ ಜನಸ್ತೋಮದ ಉಪಸ್ಥಿತಿಯಲ್ಲಿ ಭಾನುವಾರ ಆರಂಭವಾಯಿತು.
ದಸರಾ ಶೋಭಾಯಾತ್ರೆಗೆ ಕೇಂದ್ರ ಮಾಜಿ ಸಚಿವ
ಬಿ. ಜನಾರ್ದನ ಪೂಜಾರಿ ಚಾಲನೆ ನೀಡಿದರು. ಮಹಾಗಣಪತಿ, ಬ್ರಹ್ಮಶ್ರೀ ನಾರಾಯಣ ಗುರುಗಳ ವಿಗ್ರಹ ಬಳಿಕ ನವದುರ್ಗೆಯರ ವಿಗ್ರಹದ ಪೂಜೆ ನಂತರ ಶಾರದಾ ದೇವಿ ವಿಗ್ರಹದ ಮೆರವಣಿಗೆಗೆ ಚಾಲನೆ ನೀಡಲಾಯಿತು.



ಕುದ್ರೋಳಿ ಕ್ಷೇತ್ರದಿಂದ ಹೊರಟ ಶೋಭಾಯಾತ್ರೆ ಮಣ್ಣಗುಡ್ಡ ಮಾರ್ಗವಾಗಿ, ನಾರಾಯಣ ಗುರು ವೃತ್ತ -ಲಾಲ್‌ಬಾಗ್, ಬಲ್ಲಾಳ್‌ ಬಾಗ್, ಪಿವಿಎಸ್ ವೃತ್ತ, ನವಭಾರತ್ ಸರ್ಕಲ್, ಕೆ.ಎಸ್‌. ರಾವ್ ರಸ್ತೆ, ಹಂಪನಕಟ್ಟೆ ವಿವಿ ಕಾಲೇಜು ವೃತ್ತದಿಂದ ಬಲಕ್ಕೆ ತಿರುಗಿ, ಗಣಪತಿ ಹೈಸ್ಕೂಲ್ ಮಾರ್ಗವಾಗಿ ವೆಂಕಟರಮಣ ದೇವಸ್ಥಾನದ ಮುಂಭಾಗದಿಂದ ಕಾರ್‌ಸ್ಟ್ರೀಟ್, ಚಿತ್ರಾ ಟಾಕೀಸ್, ಅಳಕೆ ಮಾರ್ಗ ವಾಗಿ ಕ್ಷೇತ್ರ ಕುದ್ರೋಳಿಗೆ ಮರಳಲಿದೆ. ಅ. 14 ರಂದು ಬೆಳಿಗ್ಗೆ ಪ್ರಾತಃಕಾಲ ಮಂಟಪ ಪೂಜೆ ಬಳಿಕ ದೇವಳದ ಪುಷ್ಕರಣಿಯಲ್ಲಿ ಶಾರದೆಯ ವಿಸರ್ಜನೆ ನಡೆಯಲಿದೆ.



ಶಾಸಕ ವೇದವ್ಯಾಸ ಕಾಮತ್, ಎಂಎಲ್ ಸಿ ಪ್ರತಾಪ್ ಸಿಂಹ ನಾಯಕ್ , ಮಾಜಿ ಸಚಿವ ರಮಾನಾಥ ರೈ, ಮಾಜಿ ಮೇಯರ್ ಶಶಿಧರ ಹೆಗ್ಡೆ, ದೇವಸ್ಥಾನದ ಕ್ಷೇತ್ರಾಡಳಿತ ಮಂಡಳಿ ಉಪಾಧ್ಯಕ್ಷೆ ಊರ್ಮಿಳಾ ರಮೇಶ್, ಕಾರ್ಯದರ್ಶಿ ಬಿ.ಮಾಧವ ಸುವರ್ಣ, ಖಜಾಂಜಿ ಪದ್ಮರಾಜ್ ಆರ್, ಆಡಳಿತ ಮಂಡಳಿಯ ಸದಸ್ಯರಾದ ರವಿಶಂಕರ್ ಮಿಜಾರ್, ಎಂ ಶೇಖರ ಪೂಜಾರಿ, ಸಂತೋಷ್ ಕುಮಾರ್,ಜಗದೀಪ್ ಡಿ ಸುವರ್ಣ, ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಸಹ ಅಧ್ಯಕ್ಷ ಡಾ.ಅನಸೂಯ ಬಿ.ಟಿ. ಸಾಲ್ಯಾನ್ , ಉಪಾಧ್ಯಕ್ಷ ಡಾ.ಬಿ.ಜೆ. ಸುವರ್ಣ ಸದಸ್ಯರಾದ ಚಿತ್ತರಂಜನ್ ಗರೋಡಿ ಮುಂತಾದವರು ಶೋಭಾಯಾತ್ರೆ ಚಾಲನೆ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು