3:15 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಮಂಗಳೂರು ದಸರಾ ಮೆರವಣಿಗೆ: ಜನಸಾಗರದ ನಡುವೆ ಶಾರದಾ ಮಾತೆ, ನವದುರ್ಗೆಯರ ಭವ್ಯ ಶೋಭಾಯಾತ್ರೆ

14/10/2024, 00:26

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.ಕಂ

ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ನವರಾತ್ರಿ ಮಹೋತ್ಸದ ಅಂಗವಾಗಿ ದಸರಾ ಶೋಭಾಯಾತ್ರೆ ಭಾರೀ ಜನಸ್ತೋಮದ ಉಪಸ್ಥಿತಿಯಲ್ಲಿ ಭಾನುವಾರ ಆರಂಭವಾಯಿತು.
ದಸರಾ ಶೋಭಾಯಾತ್ರೆಗೆ ಕೇಂದ್ರ ಮಾಜಿ ಸಚಿವ
ಬಿ. ಜನಾರ್ದನ ಪೂಜಾರಿ ಚಾಲನೆ ನೀಡಿದರು. ಮಹಾಗಣಪತಿ, ಬ್ರಹ್ಮಶ್ರೀ ನಾರಾಯಣ ಗುರುಗಳ ವಿಗ್ರಹ ಬಳಿಕ ನವದುರ್ಗೆಯರ ವಿಗ್ರಹದ ಪೂಜೆ ನಂತರ ಶಾರದಾ ದೇವಿ ವಿಗ್ರಹದ ಮೆರವಣಿಗೆಗೆ ಚಾಲನೆ ನೀಡಲಾಯಿತು.



ಕುದ್ರೋಳಿ ಕ್ಷೇತ್ರದಿಂದ ಹೊರಟ ಶೋಭಾಯಾತ್ರೆ ಮಣ್ಣಗುಡ್ಡ ಮಾರ್ಗವಾಗಿ, ನಾರಾಯಣ ಗುರು ವೃತ್ತ -ಲಾಲ್‌ಬಾಗ್, ಬಲ್ಲಾಳ್‌ ಬಾಗ್, ಪಿವಿಎಸ್ ವೃತ್ತ, ನವಭಾರತ್ ಸರ್ಕಲ್, ಕೆ.ಎಸ್‌. ರಾವ್ ರಸ್ತೆ, ಹಂಪನಕಟ್ಟೆ ವಿವಿ ಕಾಲೇಜು ವೃತ್ತದಿಂದ ಬಲಕ್ಕೆ ತಿರುಗಿ, ಗಣಪತಿ ಹೈಸ್ಕೂಲ್ ಮಾರ್ಗವಾಗಿ ವೆಂಕಟರಮಣ ದೇವಸ್ಥಾನದ ಮುಂಭಾಗದಿಂದ ಕಾರ್‌ಸ್ಟ್ರೀಟ್, ಚಿತ್ರಾ ಟಾಕೀಸ್, ಅಳಕೆ ಮಾರ್ಗ ವಾಗಿ ಕ್ಷೇತ್ರ ಕುದ್ರೋಳಿಗೆ ಮರಳಲಿದೆ. ಅ. 14 ರಂದು ಬೆಳಿಗ್ಗೆ ಪ್ರಾತಃಕಾಲ ಮಂಟಪ ಪೂಜೆ ಬಳಿಕ ದೇವಳದ ಪುಷ್ಕರಣಿಯಲ್ಲಿ ಶಾರದೆಯ ವಿಸರ್ಜನೆ ನಡೆಯಲಿದೆ.



ಶಾಸಕ ವೇದವ್ಯಾಸ ಕಾಮತ್, ಎಂಎಲ್ ಸಿ ಪ್ರತಾಪ್ ಸಿಂಹ ನಾಯಕ್ , ಮಾಜಿ ಸಚಿವ ರಮಾನಾಥ ರೈ, ಮಾಜಿ ಮೇಯರ್ ಶಶಿಧರ ಹೆಗ್ಡೆ, ದೇವಸ್ಥಾನದ ಕ್ಷೇತ್ರಾಡಳಿತ ಮಂಡಳಿ ಉಪಾಧ್ಯಕ್ಷೆ ಊರ್ಮಿಳಾ ರಮೇಶ್, ಕಾರ್ಯದರ್ಶಿ ಬಿ.ಮಾಧವ ಸುವರ್ಣ, ಖಜಾಂಜಿ ಪದ್ಮರಾಜ್ ಆರ್, ಆಡಳಿತ ಮಂಡಳಿಯ ಸದಸ್ಯರಾದ ರವಿಶಂಕರ್ ಮಿಜಾರ್, ಎಂ ಶೇಖರ ಪೂಜಾರಿ, ಸಂತೋಷ್ ಕುಮಾರ್,ಜಗದೀಪ್ ಡಿ ಸುವರ್ಣ, ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಸಹ ಅಧ್ಯಕ್ಷ ಡಾ.ಅನಸೂಯ ಬಿ.ಟಿ. ಸಾಲ್ಯಾನ್ , ಉಪಾಧ್ಯಕ್ಷ ಡಾ.ಬಿ.ಜೆ. ಸುವರ್ಣ ಸದಸ್ಯರಾದ ಚಿತ್ತರಂಜನ್ ಗರೋಡಿ ಮುಂತಾದವರು ಶೋಭಾಯಾತ್ರೆ ಚಾಲನೆ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು