6:41 AM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಮಂಗಳೂರು ದಸರಾ ಮೆರವಣಿಗೆಗೆ ಈ ಬಾರಿ ಸೌಹಾರ್ದತೆಯ ಟಚ್: ಪ್ರಥಮ ಬಾರಿಗೆ ಐಕ್ಯತೆಯ ಸ್ತಬ್ದಚಿತ್ರ

21/10/2023, 22:08

ಮಂಗಳೂರು(reporterkarnataka.com): ನಾಡ ಹಬ್ಬ ದಸರಾ ನಾಡಿನ ಸಾಂಸ್ಕೃತಿಕ ಹಬ್ಬವಾಗಿದ್ದು ಜನಸಾಮಾನ್ಯರೆಲ್ಲರೂ ಭಾವೈಕ್ಯತೆಯಿಂದ ದಸರಾ ಸಂಭ್ರಮದಲ್ಲಿ ಪಾಲ್ಗೊಂಡಾಗ ನಾಡಿನ ಐಕ್ಯತೆ ಮತ್ತು ಸಮಗ್ರತೆಯನ್ನು ಮತ್ತಷ್ಟು ಗಟ್ಟಿಗೊಳಿಸಬಹುದು.ಈ ನಿಟ್ಟಿನಲ್ಲಿ ಮಂಗಳೂರು ದಸರಾದಲ್ಲಿ ಸರ್ವ ಜನಾಂಗದ ಜನರನ್ನು ಒಂದುಗೂಡಿಸುವ ಒಂದು ಸಣ್ಣ ಪ್ರಯತ್ನದ ಭಾಗವಾಗಿ ಈ ಬಾರಿಯ ಮಂಗಳೂರು ದಸರಾದ ವೈಭವದ ಮೆರವಣಿಗೆಯಲ್ಲಿ “ಸರ್ವ ಧರ್ಮದ ಜನತೆ ಕಟ್ಟಿ ಬೆಳೆಸಿದ ಮಂಗಳೂರು” ಎಂಬ ಕಣ್ಣೋಟದಿಂದ ಅಳವಡಿಸುವ ಟ್ಯಾಬ್ಲೋವನ್ನು ದಸರಾ ಮೆರವಣಿಗೆಯಲ್ಲಿ ಪ್ರದರ್ಶಿಸಿ ಮಂಗಳೂರಿನ ಅಭಿವೃದ್ಧಿಯಲ್ಲಿ ಸರ್ವ ಧರ್ಮದ ಜನರ ಕೊಡುಗೆಗಳನ್ನು ಸಮಾಜಕ್ಕೆ ನೆನಪಿಸುವ ಅಪೂರ್ವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಸ್ತಬ್ದಚಿತ್ರವನ್ನು ದ.ಕ‌.ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವ್ರದ್ದಿ ಸಂಘ(ರಿ), ಸಂತ ಮದರ್ ತೆರೇಸಾ ವಿಚಾರ ವೇದಿಕೆ, ಮಂಗಳೂರು ಹಾಗೂ ಭಗತ್ ಸಿಂಗ್ ವಾರಿಯರ್ಸ್‌ ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಅಯೋಜಿಸಲಾಗಿದ್ದು, ಇದರ ಯಶಸ್ವಿಗೆ ಸರ್ವ ಧರ್ಮದ ಜನತೆ ಸಂಪೂರ್ಣ ಸಹಕಾರ ನೀಡಬೇಕೆಂದು ವಿನಂತಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು