3:54 AM Monday8 - December 2025
ಬ್ರೇಕಿಂಗ್ ನ್ಯೂಸ್
ಸಿಎ ಸೈಟ್ ನಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾಲಮಿತಿ ಷರತ್ತು ಸಡಿಲಿಕೆಗೆ ಕ್ರಮ: ವಿಧಾನ… ಜವಾಹರಲಾಲ್ ನೆಹರು ಹೊಂದಾಣಿಕೆಯ ಶಿಲ್ಪಿಯಾಗಿದ್ದರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿದ್ವಾಯಿ ಆಸ್ಪತ್ರೆ: ಒಂದೇ ಮೂತ್ರಪಿಂಡ ಹೊಂದಿದ್ದ ವಿಲ್ಮ್ಸ್ ಟ್ಯೂಮರ್ ಕಾಯಿಲೆಪೀಡಿತ ಬಾಲಕನಿಗೆ ಯಶಸ್ವಿ… ​ಬೆಂಗಳೂರಿನಲ್ಲಿ ವಾಹನಗಳ ಸಂಖ್ಯಾ ಸ್ಫೋಟ: 1.47 ಕೋಟಿ ಜನಸಂಖ್ಯೆ; 1.23 ಕೋಟಿ ವಾಹನಗಳ… ಬೆಳಗಾವಿ ಚಳಿಗಾಲದ ಅಧಿವೇಶನದ ನಾಳೆಯಿಂದ ಆರಂಭ: ಕುಂದನಗರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ ನನ್ನದು ಕೃಷ್ಣತತ್ವ, ಕಾಂಗ್ರೆಸ್ ಪಕ್ಷದ್ದು ಕಂಸತತ್ವ; ಕೃಷ್ಣಬೋಧೆ ಸಾರ್ವಕಾಲಿಕ, ಭಗವದ್ಗೀತೆ ಕಾಲಾತೀತ: ಕೇಂದ್ರ… Bagalkote | ಸಿದ್ಧಶ್ರೀ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪೂರ್ವಭಾವಿ ಸಭೆ : ಚಲನಚಿತ್ರಗಳ ಆಹ್ವಾನ Kodagu | ಮಡಿಕೇರಿ: ಆಕಸ್ಮಿಕ ಗುಂಡಿನ ಚೂರು ತಗುಲಿ ಇಬ್ಬರು ಯುವಕರಿಗೆ ಗಾಯ ರಾಷ್ಟ್ರವ್ಯಾಪಿ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಸಚಿವ ಡಾ. ಶರಣಪ್ರಕಾಶ್‌ ಒತ್ತಾಯ ಸೌರಶಕ್ತಿಗೆ 3ನೇ ಅತಿದೊಡ್ಡ ಕೊಡುಗೆದಾರ ಭಾರತ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಇತ್ತೀಚಿನ ಸುದ್ದಿ

ಮಂಗಳೂರು ದಸರಾ ವೈಭವ ಆರಂಭ; ಶಾರದಾ ಮಾತೆ, ನವದುರ್ಗೆಯರ ಪ್ರತಿಪ್ಠಾಪನೆ; 13ರಂದು ಶೋಭಾಯಾತ್ರೆ

03/10/2024, 12:48

ಮಂಗಳೂರು(reporterkarnataka.com): ಮಂಗಳೂರು ದಸರಾ ಎಂದೇ ಖ್ಯಾತಿ ಪಡೆದಿರುವ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ನವರಾತ್ರಿ ಮಹೋತ್ಸವ ಇಂದಿನಿಂದ ಆರಂಭಗೊಂಡಿದ್ದು, ಆ. 13ರಂದು ಭವ್ಯ ಶೋಭಾಯಾತ್ರೆ ನಡೆಯಲಿದೆ.


ಕುದ್ರೋಳಿಯಲ್ಲಿ ನಡೆಯುವ ದಸರಾ ಮಹೋತ್ಸವ ಅಕ್ಟೋಬರ್ 3 ರಿಂದ 14ವರೆಗೆ ನಡೆಯಲಿದೆ. ಈ ಬಾರಿಯ ದಸರಾ ಮೆರವಣಿಗೆಯಲ್ಲಿ ಅಬ್ಬರದ ಸೌಂಡ್​, ಡಿಜೆ ಬಳಸದಿರಲು ನಿರ್ಧರಿಸಲಾಗಿದೆ. ದಸರಾ ಉದ್ಘಾಟನೆಯನ್ನು ಕುದ್ರೋಳಿ ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ನೆರವೇರಿಸಿದರು.
ಬೆಳಗ್ಗೆ ನವದುರ್ಗೆಯರು ಮತ್ತು ಶಾರದಾ ಪ್ರತಿಷ್ಠೆ ನಡೆಯಿತು. ಇಂದಿನಿಂದ ಅ.14 ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಕ್ಷೇತ್ರದಲ್ಲಿ ನಡೆಯಲಿದೆ.‌13 ರಂದು ಶಾರದಾ ಮಾತೆ ಹಾಗೂ ನವ ದುರ್ಗೆಯರ ಶೋಭಾಯಾತ್ರೆ ನಡೆಯಲಿದೆ.
*ನಗರ ತುಂಬಾ ಮಿನುಗುವ ದೀಪ:* ಪ್ರತಿ ವರ್ಷದಂತೆ ನಗರದಲ್ಲಿ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದೆ. ಕುದ್ರೋಳಿ ದೇವಸ್ಥಾನ ಮತ್ತು ದಸರಾ ಶೋಭಾಯಾತ್ರೆ ಸಾಗುವ ರಸ್ತೆ ಮತ್ತು ಇತರೆಡೆಗಳಲ್ಲಿ ದೀಪಾಲಂಕಾರ ಮಾಡಲಾಗಿದೆ. ಲಾಲ್ ಭಾಗ್ ಪ್ರದೇಶದಲ್ಲಿ ಮನಮೋಹಕವಾಗಿದೆ.
*ಹಾಫ್ ಮ್ಯಾರಾಥಾನ್:* ಅ.6 ರಂದು ಬೆಳಗ್ಗೆ 5.30ಕ್ಕೆ ಹಾಫ್ ಮ್ಯಾರಾಥಾನ್ ನಡೆಯಲಿದೆ. ಇದು ಈ ಬಾರಿಯ ವಿಶೇಷವಾಗಿದೆ.
ಇದರಲ್ಲಿ ದೇಶದ ವಿವಿಧ ಭಾಗಗಳಿಂದ 2 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ.
*13 ರಂದು ಭವ್ಯ ಶೋಭಾಯಾತ್ರೆ:* ಅ.13 ರಂದು ಸಂಜೆ 4ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ಮಂಗಳೂರು ದಸರಾ ಬೃಹತ್ ಶೋಭಾಯಾತ್ರೆ ಆರಂಭವಾಗಲಿದೆ. ರಾಜ್ಯದ ವಿವಿಧ ಕಡೆಗಳಿಂದ ಆಗಮಿಸುವ ನೃತ್ಯ ತಂಡಗಳು, ಸ್ತಬ್ದ ಚಿತ್ರಗಳು ಭಾಗವಹಿಸಲಿವೆ.
ಕೇರಳದ ಚೆಂಡೆ ವಾದ್ಯವೂ ಮೇಳೈಸಲಿದೆ.
*ಡಿಜೆ ಇಲ್ಲ:* ಈ ಬಾರಿಯ ದಸರಾ ಮೆರವಣಿಗೆಯಲ್ಲಿ ಡಿಜೆಗೆ ಅವಕಾಶ ನೀಡುವುದಿಲ್ಲ. ಪೊಲೀಸ್ ಇಲಾಖೆಯಿಂದಲೂ ಇದಕ್ಕೆ ಸೂಚನೆ ಇದೆ. ಶಬ್ದ ಮಾಲಿನ್ಯ ಆಗಬಾರದು. ಇದರಿಂದ ಯಾರಿಗೂ ತೊಂದರೆ ಆಗಬಾರದು ಎಂಬ ದೃಷ್ಟಿಯಿಂದ ಡಿಜೆಗೆ ಈ ಬಾರಿ ಅವಕಾಶ ಇಲ್ಲ. ಕರ್ನಾಟಕ ಹೈಕೋರ್ಟ್ ಮಡಿಕೇರಿ ದಸರಾಕ್ಕೆ ಸಂಬಂಧಿಸಿದಂತೆ ನೀಡಿದ ತೀರ್ಪಿನಂತೆ ಸೌಂಡ್ ಸಿಸ್ಟಮ್​ನಲ್ಲೂ ಕಡಿಮೆ ಶಬ್ದ ಬಳಸಲು ತೀರ್ಮಾನಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು