11:16 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಮಂಗಳೂರು ದಸರಾ ವೈಭವ ಆರಂಭ; ಶಾರದಾ ಮಾತೆ, ನವದುರ್ಗೆಯರ ಪ್ರತಿಪ್ಠಾಪನೆ; 13ರಂದು ಶೋಭಾಯಾತ್ರೆ

03/10/2024, 12:48

ಮಂಗಳೂರು(reporterkarnataka.com): ಮಂಗಳೂರು ದಸರಾ ಎಂದೇ ಖ್ಯಾತಿ ಪಡೆದಿರುವ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ನವರಾತ್ರಿ ಮಹೋತ್ಸವ ಇಂದಿನಿಂದ ಆರಂಭಗೊಂಡಿದ್ದು, ಆ. 13ರಂದು ಭವ್ಯ ಶೋಭಾಯಾತ್ರೆ ನಡೆಯಲಿದೆ.


ಕುದ್ರೋಳಿಯಲ್ಲಿ ನಡೆಯುವ ದಸರಾ ಮಹೋತ್ಸವ ಅಕ್ಟೋಬರ್ 3 ರಿಂದ 14ವರೆಗೆ ನಡೆಯಲಿದೆ. ಈ ಬಾರಿಯ ದಸರಾ ಮೆರವಣಿಗೆಯಲ್ಲಿ ಅಬ್ಬರದ ಸೌಂಡ್​, ಡಿಜೆ ಬಳಸದಿರಲು ನಿರ್ಧರಿಸಲಾಗಿದೆ. ದಸರಾ ಉದ್ಘಾಟನೆಯನ್ನು ಕುದ್ರೋಳಿ ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ನೆರವೇರಿಸಿದರು.
ಬೆಳಗ್ಗೆ ನವದುರ್ಗೆಯರು ಮತ್ತು ಶಾರದಾ ಪ್ರತಿಷ್ಠೆ ನಡೆಯಿತು. ಇಂದಿನಿಂದ ಅ.14 ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಕ್ಷೇತ್ರದಲ್ಲಿ ನಡೆಯಲಿದೆ.‌13 ರಂದು ಶಾರದಾ ಮಾತೆ ಹಾಗೂ ನವ ದುರ್ಗೆಯರ ಶೋಭಾಯಾತ್ರೆ ನಡೆಯಲಿದೆ.
*ನಗರ ತುಂಬಾ ಮಿನುಗುವ ದೀಪ:* ಪ್ರತಿ ವರ್ಷದಂತೆ ನಗರದಲ್ಲಿ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದೆ. ಕುದ್ರೋಳಿ ದೇವಸ್ಥಾನ ಮತ್ತು ದಸರಾ ಶೋಭಾಯಾತ್ರೆ ಸಾಗುವ ರಸ್ತೆ ಮತ್ತು ಇತರೆಡೆಗಳಲ್ಲಿ ದೀಪಾಲಂಕಾರ ಮಾಡಲಾಗಿದೆ. ಲಾಲ್ ಭಾಗ್ ಪ್ರದೇಶದಲ್ಲಿ ಮನಮೋಹಕವಾಗಿದೆ.
*ಹಾಫ್ ಮ್ಯಾರಾಥಾನ್:* ಅ.6 ರಂದು ಬೆಳಗ್ಗೆ 5.30ಕ್ಕೆ ಹಾಫ್ ಮ್ಯಾರಾಥಾನ್ ನಡೆಯಲಿದೆ. ಇದು ಈ ಬಾರಿಯ ವಿಶೇಷವಾಗಿದೆ.
ಇದರಲ್ಲಿ ದೇಶದ ವಿವಿಧ ಭಾಗಗಳಿಂದ 2 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ.
*13 ರಂದು ಭವ್ಯ ಶೋಭಾಯಾತ್ರೆ:* ಅ.13 ರಂದು ಸಂಜೆ 4ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ಮಂಗಳೂರು ದಸರಾ ಬೃಹತ್ ಶೋಭಾಯಾತ್ರೆ ಆರಂಭವಾಗಲಿದೆ. ರಾಜ್ಯದ ವಿವಿಧ ಕಡೆಗಳಿಂದ ಆಗಮಿಸುವ ನೃತ್ಯ ತಂಡಗಳು, ಸ್ತಬ್ದ ಚಿತ್ರಗಳು ಭಾಗವಹಿಸಲಿವೆ.
ಕೇರಳದ ಚೆಂಡೆ ವಾದ್ಯವೂ ಮೇಳೈಸಲಿದೆ.
*ಡಿಜೆ ಇಲ್ಲ:* ಈ ಬಾರಿಯ ದಸರಾ ಮೆರವಣಿಗೆಯಲ್ಲಿ ಡಿಜೆಗೆ ಅವಕಾಶ ನೀಡುವುದಿಲ್ಲ. ಪೊಲೀಸ್ ಇಲಾಖೆಯಿಂದಲೂ ಇದಕ್ಕೆ ಸೂಚನೆ ಇದೆ. ಶಬ್ದ ಮಾಲಿನ್ಯ ಆಗಬಾರದು. ಇದರಿಂದ ಯಾರಿಗೂ ತೊಂದರೆ ಆಗಬಾರದು ಎಂಬ ದೃಷ್ಟಿಯಿಂದ ಡಿಜೆಗೆ ಈ ಬಾರಿ ಅವಕಾಶ ಇಲ್ಲ. ಕರ್ನಾಟಕ ಹೈಕೋರ್ಟ್ ಮಡಿಕೇರಿ ದಸರಾಕ್ಕೆ ಸಂಬಂಧಿಸಿದಂತೆ ನೀಡಿದ ತೀರ್ಪಿನಂತೆ ಸೌಂಡ್ ಸಿಸ್ಟಮ್​ನಲ್ಲೂ ಕಡಿಮೆ ಶಬ್ದ ಬಳಸಲು ತೀರ್ಮಾನಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು