1:50 AM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಮಂಗಳೂರು ದಸರಾ ವೈಭವ ಆರಂಭ; ಶಾರದಾ ಮಾತೆ, ನವದುರ್ಗೆಯರ ಪ್ರತಿಪ್ಠಾಪನೆ; 13ರಂದು ಶೋಭಾಯಾತ್ರೆ

03/10/2024, 12:48

ಮಂಗಳೂರು(reporterkarnataka.com): ಮಂಗಳೂರು ದಸರಾ ಎಂದೇ ಖ್ಯಾತಿ ಪಡೆದಿರುವ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ನವರಾತ್ರಿ ಮಹೋತ್ಸವ ಇಂದಿನಿಂದ ಆರಂಭಗೊಂಡಿದ್ದು, ಆ. 13ರಂದು ಭವ್ಯ ಶೋಭಾಯಾತ್ರೆ ನಡೆಯಲಿದೆ.


ಕುದ್ರೋಳಿಯಲ್ಲಿ ನಡೆಯುವ ದಸರಾ ಮಹೋತ್ಸವ ಅಕ್ಟೋಬರ್ 3 ರಿಂದ 14ವರೆಗೆ ನಡೆಯಲಿದೆ. ಈ ಬಾರಿಯ ದಸರಾ ಮೆರವಣಿಗೆಯಲ್ಲಿ ಅಬ್ಬರದ ಸೌಂಡ್​, ಡಿಜೆ ಬಳಸದಿರಲು ನಿರ್ಧರಿಸಲಾಗಿದೆ. ದಸರಾ ಉದ್ಘಾಟನೆಯನ್ನು ಕುದ್ರೋಳಿ ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ನೆರವೇರಿಸಿದರು.
ಬೆಳಗ್ಗೆ ನವದುರ್ಗೆಯರು ಮತ್ತು ಶಾರದಾ ಪ್ರತಿಷ್ಠೆ ನಡೆಯಿತು. ಇಂದಿನಿಂದ ಅ.14 ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಕ್ಷೇತ್ರದಲ್ಲಿ ನಡೆಯಲಿದೆ.‌13 ರಂದು ಶಾರದಾ ಮಾತೆ ಹಾಗೂ ನವ ದುರ್ಗೆಯರ ಶೋಭಾಯಾತ್ರೆ ನಡೆಯಲಿದೆ.
*ನಗರ ತುಂಬಾ ಮಿನುಗುವ ದೀಪ:* ಪ್ರತಿ ವರ್ಷದಂತೆ ನಗರದಲ್ಲಿ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದೆ. ಕುದ್ರೋಳಿ ದೇವಸ್ಥಾನ ಮತ್ತು ದಸರಾ ಶೋಭಾಯಾತ್ರೆ ಸಾಗುವ ರಸ್ತೆ ಮತ್ತು ಇತರೆಡೆಗಳಲ್ಲಿ ದೀಪಾಲಂಕಾರ ಮಾಡಲಾಗಿದೆ. ಲಾಲ್ ಭಾಗ್ ಪ್ರದೇಶದಲ್ಲಿ ಮನಮೋಹಕವಾಗಿದೆ.
*ಹಾಫ್ ಮ್ಯಾರಾಥಾನ್:* ಅ.6 ರಂದು ಬೆಳಗ್ಗೆ 5.30ಕ್ಕೆ ಹಾಫ್ ಮ್ಯಾರಾಥಾನ್ ನಡೆಯಲಿದೆ. ಇದು ಈ ಬಾರಿಯ ವಿಶೇಷವಾಗಿದೆ.
ಇದರಲ್ಲಿ ದೇಶದ ವಿವಿಧ ಭಾಗಗಳಿಂದ 2 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ.
*13 ರಂದು ಭವ್ಯ ಶೋಭಾಯಾತ್ರೆ:* ಅ.13 ರಂದು ಸಂಜೆ 4ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ಮಂಗಳೂರು ದಸರಾ ಬೃಹತ್ ಶೋಭಾಯಾತ್ರೆ ಆರಂಭವಾಗಲಿದೆ. ರಾಜ್ಯದ ವಿವಿಧ ಕಡೆಗಳಿಂದ ಆಗಮಿಸುವ ನೃತ್ಯ ತಂಡಗಳು, ಸ್ತಬ್ದ ಚಿತ್ರಗಳು ಭಾಗವಹಿಸಲಿವೆ.
ಕೇರಳದ ಚೆಂಡೆ ವಾದ್ಯವೂ ಮೇಳೈಸಲಿದೆ.
*ಡಿಜೆ ಇಲ್ಲ:* ಈ ಬಾರಿಯ ದಸರಾ ಮೆರವಣಿಗೆಯಲ್ಲಿ ಡಿಜೆಗೆ ಅವಕಾಶ ನೀಡುವುದಿಲ್ಲ. ಪೊಲೀಸ್ ಇಲಾಖೆಯಿಂದಲೂ ಇದಕ್ಕೆ ಸೂಚನೆ ಇದೆ. ಶಬ್ದ ಮಾಲಿನ್ಯ ಆಗಬಾರದು. ಇದರಿಂದ ಯಾರಿಗೂ ತೊಂದರೆ ಆಗಬಾರದು ಎಂಬ ದೃಷ್ಟಿಯಿಂದ ಡಿಜೆಗೆ ಈ ಬಾರಿ ಅವಕಾಶ ಇಲ್ಲ. ಕರ್ನಾಟಕ ಹೈಕೋರ್ಟ್ ಮಡಿಕೇರಿ ದಸರಾಕ್ಕೆ ಸಂಬಂಧಿಸಿದಂತೆ ನೀಡಿದ ತೀರ್ಪಿನಂತೆ ಸೌಂಡ್ ಸಿಸ್ಟಮ್​ನಲ್ಲೂ ಕಡಿಮೆ ಶಬ್ದ ಬಳಸಲು ತೀರ್ಮಾನಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು