9:46 AM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮಂಗಳೂರು ದಸರಾ ವೈಭವ ಆರಂಭ; ಶಾರದಾ ಮಾತೆ, ನವದುರ್ಗೆಯರ ಪ್ರತಿಪ್ಠಾಪನೆ; 13ರಂದು ಶೋಭಾಯಾತ್ರೆ

03/10/2024, 12:48

ಮಂಗಳೂರು(reporterkarnataka.com): ಮಂಗಳೂರು ದಸರಾ ಎಂದೇ ಖ್ಯಾತಿ ಪಡೆದಿರುವ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ನವರಾತ್ರಿ ಮಹೋತ್ಸವ ಇಂದಿನಿಂದ ಆರಂಭಗೊಂಡಿದ್ದು, ಆ. 13ರಂದು ಭವ್ಯ ಶೋಭಾಯಾತ್ರೆ ನಡೆಯಲಿದೆ.


ಕುದ್ರೋಳಿಯಲ್ಲಿ ನಡೆಯುವ ದಸರಾ ಮಹೋತ್ಸವ ಅಕ್ಟೋಬರ್ 3 ರಿಂದ 14ವರೆಗೆ ನಡೆಯಲಿದೆ. ಈ ಬಾರಿಯ ದಸರಾ ಮೆರವಣಿಗೆಯಲ್ಲಿ ಅಬ್ಬರದ ಸೌಂಡ್​, ಡಿಜೆ ಬಳಸದಿರಲು ನಿರ್ಧರಿಸಲಾಗಿದೆ. ದಸರಾ ಉದ್ಘಾಟನೆಯನ್ನು ಕುದ್ರೋಳಿ ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ನೆರವೇರಿಸಿದರು.
ಬೆಳಗ್ಗೆ ನವದುರ್ಗೆಯರು ಮತ್ತು ಶಾರದಾ ಪ್ರತಿಷ್ಠೆ ನಡೆಯಿತು. ಇಂದಿನಿಂದ ಅ.14 ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಕ್ಷೇತ್ರದಲ್ಲಿ ನಡೆಯಲಿದೆ.‌13 ರಂದು ಶಾರದಾ ಮಾತೆ ಹಾಗೂ ನವ ದುರ್ಗೆಯರ ಶೋಭಾಯಾತ್ರೆ ನಡೆಯಲಿದೆ.
*ನಗರ ತುಂಬಾ ಮಿನುಗುವ ದೀಪ:* ಪ್ರತಿ ವರ್ಷದಂತೆ ನಗರದಲ್ಲಿ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದೆ. ಕುದ್ರೋಳಿ ದೇವಸ್ಥಾನ ಮತ್ತು ದಸರಾ ಶೋಭಾಯಾತ್ರೆ ಸಾಗುವ ರಸ್ತೆ ಮತ್ತು ಇತರೆಡೆಗಳಲ್ಲಿ ದೀಪಾಲಂಕಾರ ಮಾಡಲಾಗಿದೆ. ಲಾಲ್ ಭಾಗ್ ಪ್ರದೇಶದಲ್ಲಿ ಮನಮೋಹಕವಾಗಿದೆ.
*ಹಾಫ್ ಮ್ಯಾರಾಥಾನ್:* ಅ.6 ರಂದು ಬೆಳಗ್ಗೆ 5.30ಕ್ಕೆ ಹಾಫ್ ಮ್ಯಾರಾಥಾನ್ ನಡೆಯಲಿದೆ. ಇದು ಈ ಬಾರಿಯ ವಿಶೇಷವಾಗಿದೆ.
ಇದರಲ್ಲಿ ದೇಶದ ವಿವಿಧ ಭಾಗಗಳಿಂದ 2 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ.
*13 ರಂದು ಭವ್ಯ ಶೋಭಾಯಾತ್ರೆ:* ಅ.13 ರಂದು ಸಂಜೆ 4ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ಮಂಗಳೂರು ದಸರಾ ಬೃಹತ್ ಶೋಭಾಯಾತ್ರೆ ಆರಂಭವಾಗಲಿದೆ. ರಾಜ್ಯದ ವಿವಿಧ ಕಡೆಗಳಿಂದ ಆಗಮಿಸುವ ನೃತ್ಯ ತಂಡಗಳು, ಸ್ತಬ್ದ ಚಿತ್ರಗಳು ಭಾಗವಹಿಸಲಿವೆ.
ಕೇರಳದ ಚೆಂಡೆ ವಾದ್ಯವೂ ಮೇಳೈಸಲಿದೆ.
*ಡಿಜೆ ಇಲ್ಲ:* ಈ ಬಾರಿಯ ದಸರಾ ಮೆರವಣಿಗೆಯಲ್ಲಿ ಡಿಜೆಗೆ ಅವಕಾಶ ನೀಡುವುದಿಲ್ಲ. ಪೊಲೀಸ್ ಇಲಾಖೆಯಿಂದಲೂ ಇದಕ್ಕೆ ಸೂಚನೆ ಇದೆ. ಶಬ್ದ ಮಾಲಿನ್ಯ ಆಗಬಾರದು. ಇದರಿಂದ ಯಾರಿಗೂ ತೊಂದರೆ ಆಗಬಾರದು ಎಂಬ ದೃಷ್ಟಿಯಿಂದ ಡಿಜೆಗೆ ಈ ಬಾರಿ ಅವಕಾಶ ಇಲ್ಲ. ಕರ್ನಾಟಕ ಹೈಕೋರ್ಟ್ ಮಡಿಕೇರಿ ದಸರಾಕ್ಕೆ ಸಂಬಂಧಿಸಿದಂತೆ ನೀಡಿದ ತೀರ್ಪಿನಂತೆ ಸೌಂಡ್ ಸಿಸ್ಟಮ್​ನಲ್ಲೂ ಕಡಿಮೆ ಶಬ್ದ ಬಳಸಲು ತೀರ್ಮಾನಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು