5:35 PM Thursday25 - December 2025
ಬ್ರೇಕಿಂಗ್ ನ್ಯೂಸ್
ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60… ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ

ಇತ್ತೀಚಿನ ಸುದ್ದಿ

ಮಂಗಳೂರು ದಸರಾ ವೈಭವ ಆರಂಭ; ಶಾರದಾ ಮಾತೆ, ನವದುರ್ಗೆಯರ ಪ್ರತಿಪ್ಠಾಪನೆ; 13ರಂದು ಶೋಭಾಯಾತ್ರೆ

03/10/2024, 12:48

ಮಂಗಳೂರು(reporterkarnataka.com): ಮಂಗಳೂರು ದಸರಾ ಎಂದೇ ಖ್ಯಾತಿ ಪಡೆದಿರುವ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ನವರಾತ್ರಿ ಮಹೋತ್ಸವ ಇಂದಿನಿಂದ ಆರಂಭಗೊಂಡಿದ್ದು, ಆ. 13ರಂದು ಭವ್ಯ ಶೋಭಾಯಾತ್ರೆ ನಡೆಯಲಿದೆ.


ಕುದ್ರೋಳಿಯಲ್ಲಿ ನಡೆಯುವ ದಸರಾ ಮಹೋತ್ಸವ ಅಕ್ಟೋಬರ್ 3 ರಿಂದ 14ವರೆಗೆ ನಡೆಯಲಿದೆ. ಈ ಬಾರಿಯ ದಸರಾ ಮೆರವಣಿಗೆಯಲ್ಲಿ ಅಬ್ಬರದ ಸೌಂಡ್​, ಡಿಜೆ ಬಳಸದಿರಲು ನಿರ್ಧರಿಸಲಾಗಿದೆ. ದಸರಾ ಉದ್ಘಾಟನೆಯನ್ನು ಕುದ್ರೋಳಿ ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ನೆರವೇರಿಸಿದರು.
ಬೆಳಗ್ಗೆ ನವದುರ್ಗೆಯರು ಮತ್ತು ಶಾರದಾ ಪ್ರತಿಷ್ಠೆ ನಡೆಯಿತು. ಇಂದಿನಿಂದ ಅ.14 ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಕ್ಷೇತ್ರದಲ್ಲಿ ನಡೆಯಲಿದೆ.‌13 ರಂದು ಶಾರದಾ ಮಾತೆ ಹಾಗೂ ನವ ದುರ್ಗೆಯರ ಶೋಭಾಯಾತ್ರೆ ನಡೆಯಲಿದೆ.
*ನಗರ ತುಂಬಾ ಮಿನುಗುವ ದೀಪ:* ಪ್ರತಿ ವರ್ಷದಂತೆ ನಗರದಲ್ಲಿ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದೆ. ಕುದ್ರೋಳಿ ದೇವಸ್ಥಾನ ಮತ್ತು ದಸರಾ ಶೋಭಾಯಾತ್ರೆ ಸಾಗುವ ರಸ್ತೆ ಮತ್ತು ಇತರೆಡೆಗಳಲ್ಲಿ ದೀಪಾಲಂಕಾರ ಮಾಡಲಾಗಿದೆ. ಲಾಲ್ ಭಾಗ್ ಪ್ರದೇಶದಲ್ಲಿ ಮನಮೋಹಕವಾಗಿದೆ.
*ಹಾಫ್ ಮ್ಯಾರಾಥಾನ್:* ಅ.6 ರಂದು ಬೆಳಗ್ಗೆ 5.30ಕ್ಕೆ ಹಾಫ್ ಮ್ಯಾರಾಥಾನ್ ನಡೆಯಲಿದೆ. ಇದು ಈ ಬಾರಿಯ ವಿಶೇಷವಾಗಿದೆ.
ಇದರಲ್ಲಿ ದೇಶದ ವಿವಿಧ ಭಾಗಗಳಿಂದ 2 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ.
*13 ರಂದು ಭವ್ಯ ಶೋಭಾಯಾತ್ರೆ:* ಅ.13 ರಂದು ಸಂಜೆ 4ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ಮಂಗಳೂರು ದಸರಾ ಬೃಹತ್ ಶೋಭಾಯಾತ್ರೆ ಆರಂಭವಾಗಲಿದೆ. ರಾಜ್ಯದ ವಿವಿಧ ಕಡೆಗಳಿಂದ ಆಗಮಿಸುವ ನೃತ್ಯ ತಂಡಗಳು, ಸ್ತಬ್ದ ಚಿತ್ರಗಳು ಭಾಗವಹಿಸಲಿವೆ.
ಕೇರಳದ ಚೆಂಡೆ ವಾದ್ಯವೂ ಮೇಳೈಸಲಿದೆ.
*ಡಿಜೆ ಇಲ್ಲ:* ಈ ಬಾರಿಯ ದಸರಾ ಮೆರವಣಿಗೆಯಲ್ಲಿ ಡಿಜೆಗೆ ಅವಕಾಶ ನೀಡುವುದಿಲ್ಲ. ಪೊಲೀಸ್ ಇಲಾಖೆಯಿಂದಲೂ ಇದಕ್ಕೆ ಸೂಚನೆ ಇದೆ. ಶಬ್ದ ಮಾಲಿನ್ಯ ಆಗಬಾರದು. ಇದರಿಂದ ಯಾರಿಗೂ ತೊಂದರೆ ಆಗಬಾರದು ಎಂಬ ದೃಷ್ಟಿಯಿಂದ ಡಿಜೆಗೆ ಈ ಬಾರಿ ಅವಕಾಶ ಇಲ್ಲ. ಕರ್ನಾಟಕ ಹೈಕೋರ್ಟ್ ಮಡಿಕೇರಿ ದಸರಾಕ್ಕೆ ಸಂಬಂಧಿಸಿದಂತೆ ನೀಡಿದ ತೀರ್ಪಿನಂತೆ ಸೌಂಡ್ ಸಿಸ್ಟಮ್​ನಲ್ಲೂ ಕಡಿಮೆ ಶಬ್ದ ಬಳಸಲು ತೀರ್ಮಾನಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು