5:56 PM Thursday23 - April 2026
ಬ್ರೇಕಿಂಗ್ ನ್ಯೂಸ್
ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು…

ಇತ್ತೀಚಿನ ಸುದ್ದಿ

ಮಂಗಳೂರು ದಸರಾ ವೈಭವ ಆರಂಭ; ಶಾರದಾ ಮಾತೆ, ನವದುರ್ಗೆಯರ ಪ್ರತಿಪ್ಠಾಪನೆ; 13ರಂದು ಶೋಭಾಯಾತ್ರೆ

03/10/2024, 12:48

ಮಂಗಳೂರು(reporterkarnataka.com): ಮಂಗಳೂರು ದಸರಾ ಎಂದೇ ಖ್ಯಾತಿ ಪಡೆದಿರುವ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ನವರಾತ್ರಿ ಮಹೋತ್ಸವ ಇಂದಿನಿಂದ ಆರಂಭಗೊಂಡಿದ್ದು, ಆ. 13ರಂದು ಭವ್ಯ ಶೋಭಾಯಾತ್ರೆ ನಡೆಯಲಿದೆ.


ಕುದ್ರೋಳಿಯಲ್ಲಿ ನಡೆಯುವ ದಸರಾ ಮಹೋತ್ಸವ ಅಕ್ಟೋಬರ್ 3 ರಿಂದ 14ವರೆಗೆ ನಡೆಯಲಿದೆ. ಈ ಬಾರಿಯ ದಸರಾ ಮೆರವಣಿಗೆಯಲ್ಲಿ ಅಬ್ಬರದ ಸೌಂಡ್​, ಡಿಜೆ ಬಳಸದಿರಲು ನಿರ್ಧರಿಸಲಾಗಿದೆ. ದಸರಾ ಉದ್ಘಾಟನೆಯನ್ನು ಕುದ್ರೋಳಿ ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ನೆರವೇರಿಸಿದರು.
ಬೆಳಗ್ಗೆ ನವದುರ್ಗೆಯರು ಮತ್ತು ಶಾರದಾ ಪ್ರತಿಷ್ಠೆ ನಡೆಯಿತು. ಇಂದಿನಿಂದ ಅ.14 ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಕ್ಷೇತ್ರದಲ್ಲಿ ನಡೆಯಲಿದೆ.‌13 ರಂದು ಶಾರದಾ ಮಾತೆ ಹಾಗೂ ನವ ದುರ್ಗೆಯರ ಶೋಭಾಯಾತ್ರೆ ನಡೆಯಲಿದೆ.
*ನಗರ ತುಂಬಾ ಮಿನುಗುವ ದೀಪ:* ಪ್ರತಿ ವರ್ಷದಂತೆ ನಗರದಲ್ಲಿ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದೆ. ಕುದ್ರೋಳಿ ದೇವಸ್ಥಾನ ಮತ್ತು ದಸರಾ ಶೋಭಾಯಾತ್ರೆ ಸಾಗುವ ರಸ್ತೆ ಮತ್ತು ಇತರೆಡೆಗಳಲ್ಲಿ ದೀಪಾಲಂಕಾರ ಮಾಡಲಾಗಿದೆ. ಲಾಲ್ ಭಾಗ್ ಪ್ರದೇಶದಲ್ಲಿ ಮನಮೋಹಕವಾಗಿದೆ.
*ಹಾಫ್ ಮ್ಯಾರಾಥಾನ್:* ಅ.6 ರಂದು ಬೆಳಗ್ಗೆ 5.30ಕ್ಕೆ ಹಾಫ್ ಮ್ಯಾರಾಥಾನ್ ನಡೆಯಲಿದೆ. ಇದು ಈ ಬಾರಿಯ ವಿಶೇಷವಾಗಿದೆ.
ಇದರಲ್ಲಿ ದೇಶದ ವಿವಿಧ ಭಾಗಗಳಿಂದ 2 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ.
*13 ರಂದು ಭವ್ಯ ಶೋಭಾಯಾತ್ರೆ:* ಅ.13 ರಂದು ಸಂಜೆ 4ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ಮಂಗಳೂರು ದಸರಾ ಬೃಹತ್ ಶೋಭಾಯಾತ್ರೆ ಆರಂಭವಾಗಲಿದೆ. ರಾಜ್ಯದ ವಿವಿಧ ಕಡೆಗಳಿಂದ ಆಗಮಿಸುವ ನೃತ್ಯ ತಂಡಗಳು, ಸ್ತಬ್ದ ಚಿತ್ರಗಳು ಭಾಗವಹಿಸಲಿವೆ.
ಕೇರಳದ ಚೆಂಡೆ ವಾದ್ಯವೂ ಮೇಳೈಸಲಿದೆ.
*ಡಿಜೆ ಇಲ್ಲ:* ಈ ಬಾರಿಯ ದಸರಾ ಮೆರವಣಿಗೆಯಲ್ಲಿ ಡಿಜೆಗೆ ಅವಕಾಶ ನೀಡುವುದಿಲ್ಲ. ಪೊಲೀಸ್ ಇಲಾಖೆಯಿಂದಲೂ ಇದಕ್ಕೆ ಸೂಚನೆ ಇದೆ. ಶಬ್ದ ಮಾಲಿನ್ಯ ಆಗಬಾರದು. ಇದರಿಂದ ಯಾರಿಗೂ ತೊಂದರೆ ಆಗಬಾರದು ಎಂಬ ದೃಷ್ಟಿಯಿಂದ ಡಿಜೆಗೆ ಈ ಬಾರಿ ಅವಕಾಶ ಇಲ್ಲ. ಕರ್ನಾಟಕ ಹೈಕೋರ್ಟ್ ಮಡಿಕೇರಿ ದಸರಾಕ್ಕೆ ಸಂಬಂಧಿಸಿದಂತೆ ನೀಡಿದ ತೀರ್ಪಿನಂತೆ ಸೌಂಡ್ ಸಿಸ್ಟಮ್​ನಲ್ಲೂ ಕಡಿಮೆ ಶಬ್ದ ಬಳಸಲು ತೀರ್ಮಾನಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು