6:54 PM Thursday1 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಮಂಗಳೂರು ದಸರಾ ವೈಭವ ಆರಂಭ; ಶಾರದಾ ಮಾತೆ, ನವದುರ್ಗೆಯರ ಪ್ರತಿಪ್ಠಾಪನೆ; 13ರಂದು ಶೋಭಾಯಾತ್ರೆ

03/10/2024, 12:48

ಮಂಗಳೂರು(reporterkarnataka.com): ಮಂಗಳೂರು ದಸರಾ ಎಂದೇ ಖ್ಯಾತಿ ಪಡೆದಿರುವ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ನವರಾತ್ರಿ ಮಹೋತ್ಸವ ಇಂದಿನಿಂದ ಆರಂಭಗೊಂಡಿದ್ದು, ಆ. 13ರಂದು ಭವ್ಯ ಶೋಭಾಯಾತ್ರೆ ನಡೆಯಲಿದೆ.


ಕುದ್ರೋಳಿಯಲ್ಲಿ ನಡೆಯುವ ದಸರಾ ಮಹೋತ್ಸವ ಅಕ್ಟೋಬರ್ 3 ರಿಂದ 14ವರೆಗೆ ನಡೆಯಲಿದೆ. ಈ ಬಾರಿಯ ದಸರಾ ಮೆರವಣಿಗೆಯಲ್ಲಿ ಅಬ್ಬರದ ಸೌಂಡ್​, ಡಿಜೆ ಬಳಸದಿರಲು ನಿರ್ಧರಿಸಲಾಗಿದೆ. ದಸರಾ ಉದ್ಘಾಟನೆಯನ್ನು ಕುದ್ರೋಳಿ ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ನೆರವೇರಿಸಿದರು.
ಬೆಳಗ್ಗೆ ನವದುರ್ಗೆಯರು ಮತ್ತು ಶಾರದಾ ಪ್ರತಿಷ್ಠೆ ನಡೆಯಿತು. ಇಂದಿನಿಂದ ಅ.14 ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಕ್ಷೇತ್ರದಲ್ಲಿ ನಡೆಯಲಿದೆ.‌13 ರಂದು ಶಾರದಾ ಮಾತೆ ಹಾಗೂ ನವ ದುರ್ಗೆಯರ ಶೋಭಾಯಾತ್ರೆ ನಡೆಯಲಿದೆ.
*ನಗರ ತುಂಬಾ ಮಿನುಗುವ ದೀಪ:* ಪ್ರತಿ ವರ್ಷದಂತೆ ನಗರದಲ್ಲಿ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದೆ. ಕುದ್ರೋಳಿ ದೇವಸ್ಥಾನ ಮತ್ತು ದಸರಾ ಶೋಭಾಯಾತ್ರೆ ಸಾಗುವ ರಸ್ತೆ ಮತ್ತು ಇತರೆಡೆಗಳಲ್ಲಿ ದೀಪಾಲಂಕಾರ ಮಾಡಲಾಗಿದೆ. ಲಾಲ್ ಭಾಗ್ ಪ್ರದೇಶದಲ್ಲಿ ಮನಮೋಹಕವಾಗಿದೆ.
*ಹಾಫ್ ಮ್ಯಾರಾಥಾನ್:* ಅ.6 ರಂದು ಬೆಳಗ್ಗೆ 5.30ಕ್ಕೆ ಹಾಫ್ ಮ್ಯಾರಾಥಾನ್ ನಡೆಯಲಿದೆ. ಇದು ಈ ಬಾರಿಯ ವಿಶೇಷವಾಗಿದೆ.
ಇದರಲ್ಲಿ ದೇಶದ ವಿವಿಧ ಭಾಗಗಳಿಂದ 2 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ.
*13 ರಂದು ಭವ್ಯ ಶೋಭಾಯಾತ್ರೆ:* ಅ.13 ರಂದು ಸಂಜೆ 4ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ಮಂಗಳೂರು ದಸರಾ ಬೃಹತ್ ಶೋಭಾಯಾತ್ರೆ ಆರಂಭವಾಗಲಿದೆ. ರಾಜ್ಯದ ವಿವಿಧ ಕಡೆಗಳಿಂದ ಆಗಮಿಸುವ ನೃತ್ಯ ತಂಡಗಳು, ಸ್ತಬ್ದ ಚಿತ್ರಗಳು ಭಾಗವಹಿಸಲಿವೆ.
ಕೇರಳದ ಚೆಂಡೆ ವಾದ್ಯವೂ ಮೇಳೈಸಲಿದೆ.
*ಡಿಜೆ ಇಲ್ಲ:* ಈ ಬಾರಿಯ ದಸರಾ ಮೆರವಣಿಗೆಯಲ್ಲಿ ಡಿಜೆಗೆ ಅವಕಾಶ ನೀಡುವುದಿಲ್ಲ. ಪೊಲೀಸ್ ಇಲಾಖೆಯಿಂದಲೂ ಇದಕ್ಕೆ ಸೂಚನೆ ಇದೆ. ಶಬ್ದ ಮಾಲಿನ್ಯ ಆಗಬಾರದು. ಇದರಿಂದ ಯಾರಿಗೂ ತೊಂದರೆ ಆಗಬಾರದು ಎಂಬ ದೃಷ್ಟಿಯಿಂದ ಡಿಜೆಗೆ ಈ ಬಾರಿ ಅವಕಾಶ ಇಲ್ಲ. ಕರ್ನಾಟಕ ಹೈಕೋರ್ಟ್ ಮಡಿಕೇರಿ ದಸರಾಕ್ಕೆ ಸಂಬಂಧಿಸಿದಂತೆ ನೀಡಿದ ತೀರ್ಪಿನಂತೆ ಸೌಂಡ್ ಸಿಸ್ಟಮ್​ನಲ್ಲೂ ಕಡಿಮೆ ಶಬ್ದ ಬಳಸಲು ತೀರ್ಮಾನಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು