8:12 PM Thursday22 - January 2026
ಬ್ರೇಕಿಂಗ್ ನ್ಯೂಸ್
ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ…

ಇತ್ತೀಚಿನ ಸುದ್ದಿ

ಮಂಗಳೂರು ದಸರಾ ವೈಭವ ಆರಂಭ; ಶಾರದಾ ಮಾತೆ, ನವದುರ್ಗೆಯರ ಪ್ರತಿಪ್ಠಾಪನೆ; 13ರಂದು ಶೋಭಾಯಾತ್ರೆ

03/10/2024, 12:48

ಮಂಗಳೂರು(reporterkarnataka.com): ಮಂಗಳೂರು ದಸರಾ ಎಂದೇ ಖ್ಯಾತಿ ಪಡೆದಿರುವ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ನವರಾತ್ರಿ ಮಹೋತ್ಸವ ಇಂದಿನಿಂದ ಆರಂಭಗೊಂಡಿದ್ದು, ಆ. 13ರಂದು ಭವ್ಯ ಶೋಭಾಯಾತ್ರೆ ನಡೆಯಲಿದೆ.


ಕುದ್ರೋಳಿಯಲ್ಲಿ ನಡೆಯುವ ದಸರಾ ಮಹೋತ್ಸವ ಅಕ್ಟೋಬರ್ 3 ರಿಂದ 14ವರೆಗೆ ನಡೆಯಲಿದೆ. ಈ ಬಾರಿಯ ದಸರಾ ಮೆರವಣಿಗೆಯಲ್ಲಿ ಅಬ್ಬರದ ಸೌಂಡ್​, ಡಿಜೆ ಬಳಸದಿರಲು ನಿರ್ಧರಿಸಲಾಗಿದೆ. ದಸರಾ ಉದ್ಘಾಟನೆಯನ್ನು ಕುದ್ರೋಳಿ ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ನೆರವೇರಿಸಿದರು.
ಬೆಳಗ್ಗೆ ನವದುರ್ಗೆಯರು ಮತ್ತು ಶಾರದಾ ಪ್ರತಿಷ್ಠೆ ನಡೆಯಿತು. ಇಂದಿನಿಂದ ಅ.14 ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಕ್ಷೇತ್ರದಲ್ಲಿ ನಡೆಯಲಿದೆ.‌13 ರಂದು ಶಾರದಾ ಮಾತೆ ಹಾಗೂ ನವ ದುರ್ಗೆಯರ ಶೋಭಾಯಾತ್ರೆ ನಡೆಯಲಿದೆ.
*ನಗರ ತುಂಬಾ ಮಿನುಗುವ ದೀಪ:* ಪ್ರತಿ ವರ್ಷದಂತೆ ನಗರದಲ್ಲಿ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದೆ. ಕುದ್ರೋಳಿ ದೇವಸ್ಥಾನ ಮತ್ತು ದಸರಾ ಶೋಭಾಯಾತ್ರೆ ಸಾಗುವ ರಸ್ತೆ ಮತ್ತು ಇತರೆಡೆಗಳಲ್ಲಿ ದೀಪಾಲಂಕಾರ ಮಾಡಲಾಗಿದೆ. ಲಾಲ್ ಭಾಗ್ ಪ್ರದೇಶದಲ್ಲಿ ಮನಮೋಹಕವಾಗಿದೆ.
*ಹಾಫ್ ಮ್ಯಾರಾಥಾನ್:* ಅ.6 ರಂದು ಬೆಳಗ್ಗೆ 5.30ಕ್ಕೆ ಹಾಫ್ ಮ್ಯಾರಾಥಾನ್ ನಡೆಯಲಿದೆ. ಇದು ಈ ಬಾರಿಯ ವಿಶೇಷವಾಗಿದೆ.
ಇದರಲ್ಲಿ ದೇಶದ ವಿವಿಧ ಭಾಗಗಳಿಂದ 2 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ.
*13 ರಂದು ಭವ್ಯ ಶೋಭಾಯಾತ್ರೆ:* ಅ.13 ರಂದು ಸಂಜೆ 4ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ಮಂಗಳೂರು ದಸರಾ ಬೃಹತ್ ಶೋಭಾಯಾತ್ರೆ ಆರಂಭವಾಗಲಿದೆ. ರಾಜ್ಯದ ವಿವಿಧ ಕಡೆಗಳಿಂದ ಆಗಮಿಸುವ ನೃತ್ಯ ತಂಡಗಳು, ಸ್ತಬ್ದ ಚಿತ್ರಗಳು ಭಾಗವಹಿಸಲಿವೆ.
ಕೇರಳದ ಚೆಂಡೆ ವಾದ್ಯವೂ ಮೇಳೈಸಲಿದೆ.
*ಡಿಜೆ ಇಲ್ಲ:* ಈ ಬಾರಿಯ ದಸರಾ ಮೆರವಣಿಗೆಯಲ್ಲಿ ಡಿಜೆಗೆ ಅವಕಾಶ ನೀಡುವುದಿಲ್ಲ. ಪೊಲೀಸ್ ಇಲಾಖೆಯಿಂದಲೂ ಇದಕ್ಕೆ ಸೂಚನೆ ಇದೆ. ಶಬ್ದ ಮಾಲಿನ್ಯ ಆಗಬಾರದು. ಇದರಿಂದ ಯಾರಿಗೂ ತೊಂದರೆ ಆಗಬಾರದು ಎಂಬ ದೃಷ್ಟಿಯಿಂದ ಡಿಜೆಗೆ ಈ ಬಾರಿ ಅವಕಾಶ ಇಲ್ಲ. ಕರ್ನಾಟಕ ಹೈಕೋರ್ಟ್ ಮಡಿಕೇರಿ ದಸರಾಕ್ಕೆ ಸಂಬಂಧಿಸಿದಂತೆ ನೀಡಿದ ತೀರ್ಪಿನಂತೆ ಸೌಂಡ್ ಸಿಸ್ಟಮ್​ನಲ್ಲೂ ಕಡಿಮೆ ಶಬ್ದ ಬಳಸಲು ತೀರ್ಮಾನಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು