2:18 AM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಮಂಗಳೂರು ದಸರಾ ವೈಭವ: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಶಾರದಾ ದೇವಿ, ನವದುರ್ಗೆಯರ ಪ್ರತಿಷ್ಠಾಪನೆ

26/09/2022, 20:15

ಮಂಗಳೂರು(reporterkarnataka.com) : ನಗರದಲ್ಲಿ ನವರಾತ್ರಿ ಸಂಭ್ರಮ ಆರಂಭಗೊಂಡಿದೆ.


ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಶಾರದಾ ದೇವಿಯ ಮೂರ್ತಿ ಪ್ರತಿಷ್ಠಾಪನೆಯೊಂದಿಗೆ ಮಂಗಳೂರು ದಸರಾ ಉತ್ಸವಕ್ಕೆ ಚಾಲನೆ ಸಿಕ್ಕಿದೆ. 


ಶಾರದಾ ಮಾತೆ ಜತೆಗೆ ನವದುರ್ಗೆಯರಾದ ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟಿ, ಕೂಷ್ಮಾಂಡಿನಿ, ಸ್ಕಂದ ಮಾತಾ, ಕಾತ್ಯಾಯಿನಿ, ಮಹಾಕಾಳಿ, ಮಹಾಗೌರಿ, ಸಿದ್ಧಿಧಾತ್ರಿಯರ ಪ್ರತಿಷ್ಥಾಪನೆಯನ್ನೂ ಮಾಡಲಾಗಿದೆ.

ಕುದ್ರೋಳಿ ಕ್ಷೇತ್ರದ ನವೀಕರಣದ ರೂವಾರಿ ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ದೀಪ ಬೆಳಗಿಸಿ ಉತ್ಸವಕ್ಕೆ ಚಾಲನೆ ನೀಡಿದರು. ಅನಾರೋಗ್ಯದ ಮಧ್ಯೆಯೂ ದಸರಾ ಉದ್ಘಾಟಿಸಿದ ಜನಾರ್ದನ ಪೂಜಾರಿ ಭಕ್ತರ ಜೊತೆ ಕೆಲ ಹೊತ್ತು ಬೆರೆತರು. ಒಂಭತ್ತು ದಿನಗಳ ಕಾಲ ಮಂಗಳೂರಿನಲ್ಲಿ ದಸರಾ ಸಂಭ್ರಮ ಕಳೆಗಟ್ಟಲಿದೆ. ದಸರಾ ಅಂಗವಾಗಿ ಕುದ್ರೋಳಿ ಸೇರಿದಂತೆ ಇಡೀ ಮಂಗಳೂರನ್ನು ವರ್ಣರಂಜಿತ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ. ದಸರಾ ಪ್ರಯುಕ್ತ ಶ್ರೀ ಕ್ಷೇತ್ರ ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯದಲ್ಲಿ ಪ್ರತಿನಿತ್ಯ ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮ, ಅನ್ನದಾನ ನಡೆಯಲಿದೆ.


ಅಕ್ಟೋಬರ್ 5 ರಂದು ನಗರದ ರಾಜಬೀದಿಯಲ್ಲಿ ಮೆರವಣಿಗೆಯಲ್ಲಿ ಮೂರ್ತಿಯನ್ನು ಕೊಂಡೊಯ್ದು ಬಳಿಕ ಕ್ಷೇತ್ರದ ಪುಷ್ಕರಣಿಯಲ್ಲಿ ವಿಸರ್ಜಿಸಲಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು