10:53 AM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಮಂಗಳೂರು ದಸರಾ ವೈಭವ: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಶಾರದಾ ದೇವಿ, ನವದುರ್ಗೆಯರ ಪ್ರತಿಷ್ಠಾಪನೆ

26/09/2022, 20:15

ಮಂಗಳೂರು(reporterkarnataka.com) : ನಗರದಲ್ಲಿ ನವರಾತ್ರಿ ಸಂಭ್ರಮ ಆರಂಭಗೊಂಡಿದೆ.


ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಶಾರದಾ ದೇವಿಯ ಮೂರ್ತಿ ಪ್ರತಿಷ್ಠಾಪನೆಯೊಂದಿಗೆ ಮಂಗಳೂರು ದಸರಾ ಉತ್ಸವಕ್ಕೆ ಚಾಲನೆ ಸಿಕ್ಕಿದೆ. 


ಶಾರದಾ ಮಾತೆ ಜತೆಗೆ ನವದುರ್ಗೆಯರಾದ ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟಿ, ಕೂಷ್ಮಾಂಡಿನಿ, ಸ್ಕಂದ ಮಾತಾ, ಕಾತ್ಯಾಯಿನಿ, ಮಹಾಕಾಳಿ, ಮಹಾಗೌರಿ, ಸಿದ್ಧಿಧಾತ್ರಿಯರ ಪ್ರತಿಷ್ಥಾಪನೆಯನ್ನೂ ಮಾಡಲಾಗಿದೆ.

ಕುದ್ರೋಳಿ ಕ್ಷೇತ್ರದ ನವೀಕರಣದ ರೂವಾರಿ ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ದೀಪ ಬೆಳಗಿಸಿ ಉತ್ಸವಕ್ಕೆ ಚಾಲನೆ ನೀಡಿದರು. ಅನಾರೋಗ್ಯದ ಮಧ್ಯೆಯೂ ದಸರಾ ಉದ್ಘಾಟಿಸಿದ ಜನಾರ್ದನ ಪೂಜಾರಿ ಭಕ್ತರ ಜೊತೆ ಕೆಲ ಹೊತ್ತು ಬೆರೆತರು. ಒಂಭತ್ತು ದಿನಗಳ ಕಾಲ ಮಂಗಳೂರಿನಲ್ಲಿ ದಸರಾ ಸಂಭ್ರಮ ಕಳೆಗಟ್ಟಲಿದೆ. ದಸರಾ ಅಂಗವಾಗಿ ಕುದ್ರೋಳಿ ಸೇರಿದಂತೆ ಇಡೀ ಮಂಗಳೂರನ್ನು ವರ್ಣರಂಜಿತ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ. ದಸರಾ ಪ್ರಯುಕ್ತ ಶ್ರೀ ಕ್ಷೇತ್ರ ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯದಲ್ಲಿ ಪ್ರತಿನಿತ್ಯ ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮ, ಅನ್ನದಾನ ನಡೆಯಲಿದೆ.


ಅಕ್ಟೋಬರ್ 5 ರಂದು ನಗರದ ರಾಜಬೀದಿಯಲ್ಲಿ ಮೆರವಣಿಗೆಯಲ್ಲಿ ಮೂರ್ತಿಯನ್ನು ಕೊಂಡೊಯ್ದು ಬಳಿಕ ಕ್ಷೇತ್ರದ ಪುಷ್ಕರಣಿಯಲ್ಲಿ ವಿಸರ್ಜಿಸಲಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು