12:24 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಮಂಗಳೂರು ದಸರಾ ವೈಭವ: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಶಾರದಾ ದೇವಿ, ನವದುರ್ಗೆಯರ ಪ್ರತಿಷ್ಠಾಪನೆ

26/09/2022, 20:15

ಮಂಗಳೂರು(reporterkarnataka.com) : ನಗರದಲ್ಲಿ ನವರಾತ್ರಿ ಸಂಭ್ರಮ ಆರಂಭಗೊಂಡಿದೆ.


ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಶಾರದಾ ದೇವಿಯ ಮೂರ್ತಿ ಪ್ರತಿಷ್ಠಾಪನೆಯೊಂದಿಗೆ ಮಂಗಳೂರು ದಸರಾ ಉತ್ಸವಕ್ಕೆ ಚಾಲನೆ ಸಿಕ್ಕಿದೆ. 


ಶಾರದಾ ಮಾತೆ ಜತೆಗೆ ನವದುರ್ಗೆಯರಾದ ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟಿ, ಕೂಷ್ಮಾಂಡಿನಿ, ಸ್ಕಂದ ಮಾತಾ, ಕಾತ್ಯಾಯಿನಿ, ಮಹಾಕಾಳಿ, ಮಹಾಗೌರಿ, ಸಿದ್ಧಿಧಾತ್ರಿಯರ ಪ್ರತಿಷ್ಥಾಪನೆಯನ್ನೂ ಮಾಡಲಾಗಿದೆ.

ಕುದ್ರೋಳಿ ಕ್ಷೇತ್ರದ ನವೀಕರಣದ ರೂವಾರಿ ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ದೀಪ ಬೆಳಗಿಸಿ ಉತ್ಸವಕ್ಕೆ ಚಾಲನೆ ನೀಡಿದರು. ಅನಾರೋಗ್ಯದ ಮಧ್ಯೆಯೂ ದಸರಾ ಉದ್ಘಾಟಿಸಿದ ಜನಾರ್ದನ ಪೂಜಾರಿ ಭಕ್ತರ ಜೊತೆ ಕೆಲ ಹೊತ್ತು ಬೆರೆತರು. ಒಂಭತ್ತು ದಿನಗಳ ಕಾಲ ಮಂಗಳೂರಿನಲ್ಲಿ ದಸರಾ ಸಂಭ್ರಮ ಕಳೆಗಟ್ಟಲಿದೆ. ದಸರಾ ಅಂಗವಾಗಿ ಕುದ್ರೋಳಿ ಸೇರಿದಂತೆ ಇಡೀ ಮಂಗಳೂರನ್ನು ವರ್ಣರಂಜಿತ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ. ದಸರಾ ಪ್ರಯುಕ್ತ ಶ್ರೀ ಕ್ಷೇತ್ರ ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯದಲ್ಲಿ ಪ್ರತಿನಿತ್ಯ ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮ, ಅನ್ನದಾನ ನಡೆಯಲಿದೆ.


ಅಕ್ಟೋಬರ್ 5 ರಂದು ನಗರದ ರಾಜಬೀದಿಯಲ್ಲಿ ಮೆರವಣಿಗೆಯಲ್ಲಿ ಮೂರ್ತಿಯನ್ನು ಕೊಂಡೊಯ್ದು ಬಳಿಕ ಕ್ಷೇತ್ರದ ಪುಷ್ಕರಣಿಯಲ್ಲಿ ವಿಸರ್ಜಿಸಲಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು