5:41 AM Friday16 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಮಂಗಳೂರು ದಕ್ಷಿಣ ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿಯಾಗಿ ಸಂತೋಷ್ ಕಾಮತ್ ನಾಳೆ ನಾಮಪತ್ರ ಸಲ್ಲಿಕೆ: ಮಂಗಳಾದೇವಿಯಿಂದ ಪಾದಯಾತ್ರೆ

18/04/2023, 09:42

ಮಂಗಳೂರು(reporterkarnataka.com): ಮಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರದ ಆಮ್ ಆದ್ಮಿ ಪಾರ್ಟಿ(ಎಎಪಿ) ಅಭ್ಯರ್ಥಿ ಸಂತೋಷ್ ಕಾಮತ್ ಅವರು ಏಪ್ರಿಲ್ 19ರಂದು ನಾಮಪತ್ರ ಸಲ್ಲಿಸುವರು.
ಏ.19ರಂದು ಬೆಳಗ್ಗೆ 9.30 ಗಂಟೆಗೆ ಮಂಗಳಾದೇವಿ ದೇವಸ್ಥಾನದಿಂದ ಪಾದಯಾತ್ರೆ ಹೊರಟು ಲಾಲ್ ಬಾಗ್ ನ ಮಂಗಳೂರು ಮಹಾನಗರಪಾಲಿಕೆ ಕಚೇರಿಯಲ್ಲಿರುವ ಚುನಾವಣಾಧಿಕಾರಿ ಕಚೇರಿಗೆ ಆಗಮಿಸಿ ತಮ್ಮ ಉಮೇದ್ವಾರಿಕೆ ಸಲ್ಲಿಸುವರು.


ಸಂತೋಷ್ ಕಾಮತ್ ಅವರು ಸಾಮಾಜಿಕ ಕಾರ್ಯಕರ್ತ. ಕೊರೊನಾ ಲಾಕ್ ಡೌನ್ ಸಂಧರ್ಭದಲ್ಲಿ ಜನಪರ ಕಾಳಜಿ ಬಗ್ಗೆ ತನ್ನ ಬದ್ದತೆಯನ್ನು ಪ್ರಕಟಿಸಿದವರು. ಹೋರಾಟದ ಮನೋಭಾವದ ಅವರು ಬಟ್ಟೆ ವ್ಯಾಪಾರಿಗಳ ಬಗ್ಗೆ ಗಟ್ಟಿಯಾಗಿ ಧ್ವನಿ ಎತ್ತಿದವರು. ಆಮ್ ಆದ್ಮಿ ಪಾರ್ಟಿ ಬಿಡುಗಡೆ ಮಾಡಿದ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಸಂತೋಷ್ ಕಾಮತ್ ಅವರ ಹೆಸರಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು