7:55 PM Monday6 - April 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು

ಇತ್ತೀಚಿನ ಸುದ್ದಿ

ಮಂಗಳೂರು ದಸರಾ ವೈಭವದ ಶೋಭಾಯಾತ್ರೆ: ಕಡಲನಗರಿಯಲ್ಲಿ ಎಲ್ಲೆಂದರಲ್ಲಿ ಜನಸಾಗರ!; ಲಾಡ್ಜ್ ಗಳು ಫುಲ್ !

06/10/2022, 03:29

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporter Karnataka): ಮಂಗಳೂರು ದಸರಾ ಎಂದೇ ಪ್ರಸಿದ್ಧಿ ಪಡೆದ
ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಪ್ರತಿವರ್ಷ ನಡೆಯುವ ನವರಾತ್ರಿ 
ಮಹೋತ್ಸವದ ಕೊನೆಯ ದಿನವಾದ ಬುಧವಾರ ಶಾರದಾ ಮಾತೆ ಹಾಗೂ ನವ ದುರ್ಗೆಯರ ಶೋಭಾಯಾತ್ರೆ ಭಕ್ತಿ ಸಂಭ್ರಮದಿಂದ ನಡೆಯಿತು.


ಕುದ್ರೋಳಿ ಕ್ಷೇತ್ರದಿಂದ ಆರಂಭಗೊಂಡ ಶೋಭಾಯಾತ್ರೆ ಲೇಡಿಹಿಲ್ ಮಾರ್ಗವಾಗಿ ಲಾಲ್ ಭಾಗ್ ತಲುಪುವಾಗ ಸಂಭ್ರಮ ಮುಗಿಲು ಮುಟ್ಟಿತ್ತು. ಭಾರೀ ಸಂಖ್ಯೆಯಲ್ಲಿ ಲಾಲ್ ಬಾಗ್ , ಬಳ್ಳಾಲ್ ಬಾಗ್ ಪ್ರದೇಶದಲ್ಲಿ ನೆರೆದಿದ್ದರು. ಎಂ.ಜಿ.ರೋಡ್ ಜನಸಾಗರವಾಗಿ ಮಾರ್ಪಟ್ಟಿತ್ತು. ರಸ್ತೆಯ ಇಕ್ಕೆಲೆಗಳಲ್ಲಿ ಮಾತ್ರವಲ್ಲದೆ ರಸ್ತೆಯ ಮಧ್ಯದ ಡಿವೈಡರ್ ನಲ್ಲಿ ಕೂಡ ನಿಂತು ಜನರು ದಸರಾ ಮೆರವಣಿಗೆ ಹಾಗೂ ಶಾರದೆ ಮತ್ತು ನವದುರ್ಗೆಯರನ್ನು ಬರ ಮಾಡಿಕೊಂಡರು. ವಿವಿಧ ಕಟ್ಟಡಗಳ ಅಂತಸ್ತಿನಲ್ಲಿ ಹಾಗೂ ಟೆರೆಸ್ ಮೇಲೆ ನಿಂತು ಜನರು ದಸರಾ ಮೆರವಣಿಗೆಯನ್ನು ವೀಕ್ಷಿಸಿದರು. ವಿವಿಧ ಸ್ವಯಂಸೇವಾ ಸಂಸ್ಥೆ ಹಾಗೂ ಸಾಂಸ್ಕೃತಿಕ ಸಂಘಟನೆಗಳಿಂದ ವಿವಿಧ ತರಹದ ಟ್ಯಾಬ್ಲೋಗಳು ಜನರನ್ನು ಆಕರ್ಷಿಸಿತು.



ಮಂಗಳೂರು ದಸರಾ ಸಂಭ್ರಮದ ಸವಿಯಲ್ಲಿ ಕರಾವಳಿ ಮಾತ್ರವಲ್ಲದೆ ಹೊರ ರಾಜ್ಯ ಹಾಗೂ ವಿದೇಶಗಳಿಂದಲೂ ಪ್ರವಾಸಿಗರು ಮಂಗಳೂರಿಗೆ ಆಗಮಿಸಿದ್ದರು. ನಗರದ ಎಲ್ಲ ಲಾಡ್ಜ್ ಗಳು ಭರ್ತಿಯಾಗಿದ್ದವು. ಕೆಲವು ಲಾಡ್ಜ್ ಗಳು 24 ತಾಸಿನ ಬದಲು ಗೋವಾ ಮಾದರಿಯಲ್ಲಿ 12 ತಾಸಿಗೆ ಚೆಕ್ ಔಟ್ ಮಾಡುತ್ತಿದ್ದವು. ಹೊರಗಡೆಯಿಂದ ಬಂದ ಸಾಕಷ್ಟು ಪ್ರವಾಸಿಗರು ವಸತಿ ಸೇವೆ ದೊರಕದೆ ಕಾರಿನಲ್ಲೇ ರೆಸ್ಟ್ ತೆಗೆದುಕೊಳ್ಳಬೇಕಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು