7:50 AM Thursday15 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಮಂಗಳೂರು ದಸರಾ ವೈಭವದ ಶೋಭಾಯಾತ್ರೆ: ಕಡಲನಗರಿಯಲ್ಲಿ ಎಲ್ಲೆಂದರಲ್ಲಿ ಜನಸಾಗರ!; ಲಾಡ್ಜ್ ಗಳು ಫುಲ್ !

06/10/2022, 03:29

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporter Karnataka): ಮಂಗಳೂರು ದಸರಾ ಎಂದೇ ಪ್ರಸಿದ್ಧಿ ಪಡೆದ
ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಪ್ರತಿವರ್ಷ ನಡೆಯುವ ನವರಾತ್ರಿ 
ಮಹೋತ್ಸವದ ಕೊನೆಯ ದಿನವಾದ ಬುಧವಾರ ಶಾರದಾ ಮಾತೆ ಹಾಗೂ ನವ ದುರ್ಗೆಯರ ಶೋಭಾಯಾತ್ರೆ ಭಕ್ತಿ ಸಂಭ್ರಮದಿಂದ ನಡೆಯಿತು.


ಕುದ್ರೋಳಿ ಕ್ಷೇತ್ರದಿಂದ ಆರಂಭಗೊಂಡ ಶೋಭಾಯಾತ್ರೆ ಲೇಡಿಹಿಲ್ ಮಾರ್ಗವಾಗಿ ಲಾಲ್ ಭಾಗ್ ತಲುಪುವಾಗ ಸಂಭ್ರಮ ಮುಗಿಲು ಮುಟ್ಟಿತ್ತು. ಭಾರೀ ಸಂಖ್ಯೆಯಲ್ಲಿ ಲಾಲ್ ಬಾಗ್ , ಬಳ್ಳಾಲ್ ಬಾಗ್ ಪ್ರದೇಶದಲ್ಲಿ ನೆರೆದಿದ್ದರು. ಎಂ.ಜಿ.ರೋಡ್ ಜನಸಾಗರವಾಗಿ ಮಾರ್ಪಟ್ಟಿತ್ತು. ರಸ್ತೆಯ ಇಕ್ಕೆಲೆಗಳಲ್ಲಿ ಮಾತ್ರವಲ್ಲದೆ ರಸ್ತೆಯ ಮಧ್ಯದ ಡಿವೈಡರ್ ನಲ್ಲಿ ಕೂಡ ನಿಂತು ಜನರು ದಸರಾ ಮೆರವಣಿಗೆ ಹಾಗೂ ಶಾರದೆ ಮತ್ತು ನವದುರ್ಗೆಯರನ್ನು ಬರ ಮಾಡಿಕೊಂಡರು. ವಿವಿಧ ಕಟ್ಟಡಗಳ ಅಂತಸ್ತಿನಲ್ಲಿ ಹಾಗೂ ಟೆರೆಸ್ ಮೇಲೆ ನಿಂತು ಜನರು ದಸರಾ ಮೆರವಣಿಗೆಯನ್ನು ವೀಕ್ಷಿಸಿದರು. ವಿವಿಧ ಸ್ವಯಂಸೇವಾ ಸಂಸ್ಥೆ ಹಾಗೂ ಸಾಂಸ್ಕೃತಿಕ ಸಂಘಟನೆಗಳಿಂದ ವಿವಿಧ ತರಹದ ಟ್ಯಾಬ್ಲೋಗಳು ಜನರನ್ನು ಆಕರ್ಷಿಸಿತು.



ಮಂಗಳೂರು ದಸರಾ ಸಂಭ್ರಮದ ಸವಿಯಲ್ಲಿ ಕರಾವಳಿ ಮಾತ್ರವಲ್ಲದೆ ಹೊರ ರಾಜ್ಯ ಹಾಗೂ ವಿದೇಶಗಳಿಂದಲೂ ಪ್ರವಾಸಿಗರು ಮಂಗಳೂರಿಗೆ ಆಗಮಿಸಿದ್ದರು. ನಗರದ ಎಲ್ಲ ಲಾಡ್ಜ್ ಗಳು ಭರ್ತಿಯಾಗಿದ್ದವು. ಕೆಲವು ಲಾಡ್ಜ್ ಗಳು 24 ತಾಸಿನ ಬದಲು ಗೋವಾ ಮಾದರಿಯಲ್ಲಿ 12 ತಾಸಿಗೆ ಚೆಕ್ ಔಟ್ ಮಾಡುತ್ತಿದ್ದವು. ಹೊರಗಡೆಯಿಂದ ಬಂದ ಸಾಕಷ್ಟು ಪ್ರವಾಸಿಗರು ವಸತಿ ಸೇವೆ ದೊರಕದೆ ಕಾರಿನಲ್ಲೇ ರೆಸ್ಟ್ ತೆಗೆದುಕೊಳ್ಳಬೇಕಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು