11:27 AM Monday20 - April 2026
ಬ್ರೇಕಿಂಗ್ ನ್ಯೂಸ್
ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

Mangaluru | ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ ಖಂಡನೀಯ: ಶಾಸಕ ವೇದವ್ಯಾಸ ಕಾಮತ್

25/03/2025, 20:45

ಮಂಗಳೂರು(reporter Karnataka.com): ಕೇವಲ ಓಲೈಕೆ ರಾಜಕಾರಣಕ್ಕಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ರವರು ಬರೆದ ಸಂವಿಧಾನವನ್ನೇ ಬದಲಿಸಿ ಧರ್ಮದ ಆಧಾರದಲ್ಲಿ ಮೀಸಲಾತಿ ತರಲು ನಾವು ಸಿದ್ದ ಎಂದಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ರವರ ಹೇಳಿಕೆ ಖಂಡನೀಯವೆಂದು ಶಾಸಕ ವೇದವ್ಯಾಸ ಕಾಮತ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಪುರಭವನದ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆ ಬಳಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಬಂದ ನಂತರ ಮುಸ್ಲಿಂ ಲೀಗ್ ಕೂಡ ಇಂತಹದೇ ಬೇಡಿಕೆಯನ್ನಿಟ್ಟಿತ್ತು. ಆಗ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಸರ್ದಾರ್ ಪಟೇಲರು ಅದನ್ನು ಖಂಡ ತುಂಡವಾಗಿ ವಿರೋಧಿಸಿದ್ದರು. ಅಂತಹ ಮಹಾನ್ ನಾಯಕರ ಮಾತನ್ನೇ ಧಿಕ್ಕರಿಸಿ, ಇದೀಗ ಸಂವಿಧಾನವನ್ನೇ ಬದಲಾಯಿಸಲು ಹೊರಟಿದೆ ಕಾಂಗ್ರೆಸ್. ಮತ್ತೆ ಸಂವಿಧಾನವನ್ನು ಉಳಿಸುವ ಬಗ್ಗೆ ಬೊಗಳೆ ಬಿಡುತ್ತಾರೆ. ಇದು ಅತ್ಯಂತ ಗಂಭೀರವಾದ ವಿಷಯವಾಗಿದ್ದು ಕಾಂಗ್ರೆಸ್ಸಿನ ಸಾವಿರ ಜನ ಬಂದರೂ ಸಂವಿಧಾನದ ಒಂದಿಂಚನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದರು.

ಜೇಬಿನಲ್ಲಿ ಸಂವಿಧಾನದ ಪುಸ್ತಕ ಇಟ್ಟುಕೊಂಡು ಊರೆಲ್ಲ ಓಡಾಡಿ ನಾಟಕ ಮಾಡಿದ್ದ ಪುಣ್ಯಾತ್ಮ ರಾಹುಲ್ ಗಾಂಧಿ ಈಗ ಕಾಣೆಯಾಗಿದ್ದಾರೆ. ಮಾತೆತ್ತಿದರೆ ಸಂವಿಧಾನ ಎನ್ನುವ ಪ್ರಗತಿಪರರು, ಬುದ್ದಿಜೀವಿಗಳು ಇದೀಗ ಸಂವಿಧಾನಕ್ಕೇ ಸವಾಲೊಡ್ಡುವ ಮಾತನಾಡಿದ್ದರೂ ಬಾಯಿಗೆ ಬೀಗ ಹಾಕಿಕೊಂಡು ಮನೆಯೊಳಗೇ ಕೂತಿದ್ದಾರೆ. ಹಿಂದುಳಿದವರು, ಹಾಗೂ ಪರಿಶಿಷ್ಟ ಬಂಧುಗಳಿಗೆ ಅನ್ಯಾಯ ಮಾಡಲು ನಿಂತಿರುವ ಕಾಂಗ್ರೆಸ್ಸಿನ ಹಿಡನ್ ಅಜೆಂಡಾ ಬಯಲಾಗಿದ್ದು, ಈಗಲಾದರೂ ಕಾಂಗ್ರೆಸ್ಸಿನ ಅಸಲಿ ತನವನ್ನು ಅರಿತು ತಕ್ಕ ಪಾಠ ಕಲಿಸಬೇಕಿದೆ. ಈ ಕೂಡಲೇ ಸಂವಿಧಾನಕ್ಕೆ ಅಪಚಾರ ಮಾಡಿದ ಡಿಕೆಶಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಅವರ ಹೇಳಿಕೆಯನ್ನು ಸಮರ್ಥಿಸಿದ ಕಾಂಗ್ರೆಸ್ಸಿಗರು ಈ ದೇಶದ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಸಹಿತ, ಜಿಲ್ಲೆಯ ಶಾಸಕರುಗಳು, ಪಕ್ಷದ ಪ್ರಮುಖರು, ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷರು, ಸದಸ್ಯರು, ಪ್ರಕೋಷ್ಠಗಳ ಪ್ರಮುಖರ ಸಹಿತ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು