3:13 AM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಮಂಗಳೂರು: ಡಿಸೆಂಬರ್ 15- 17ರಂದು 49ನೇ ರಾಜ್ಯ, 8ನೇ ಅಂತಾರಾಜ್ಯ ದಂತ ವೈದ್ಯಕೀಯ ಮಹಾ ಸಮ್ಮೇಳನ

14/12/2023, 22:58

ಮಂಗಳೂರು(reporterkarnataka.com): ದ.ಕ. ಜಿಲ್ಲಾ ಇಂಡಿಯನ್ ಡೆಂಟಲ್ ಎಸೋಸಿಯೇಷನ್‌ ಅತಿಥೇಯದಲ್ಲಿ 49ನೇ ರಾಜ್ಯ, 8ನೇ ಅಂತರಾಜ್ಯ ದಂತ ವೈದ್ಯಕೀಯ ಮಹಾ ಸಮ್ಮೇಳನ ನಗರದ ಅತ್ತಾವರ ಕಾಪ್ರಿಗುಡ್ಡದಲ್ಲಿರುವ ಮರೆನ ಗ್ರೀನ್ಸ್‌ನಲ್ಲಿ ಡಿ.15 ಮತ್ತು 16 ಮತ್ತು 17ರಂದು ಜರುಗಲಿದೆ.
ಡಿ.15ರಂದು ಬೆಳಗ್ಗೆ 10 ಗಂಟೆಗೆ ಮಾಹೆಯ ವೈಸ್ ಚಾನ್ಸಲರ್ ಲೆ.ಜ. ಡಾ. ವೆಂಕಟೇಶ್ ಉದ್ಘಾಟಿಸುವರು. ಮಾಹೆಯ ಪ್ರೊ.ಚಾನ್ಸಲರ್ ಡಾ.ಶರತ್ ರಾವ್ ಮುಖ್ಯ ಅತಿಥಿಯಾಗಿರುವರು. ಡಿ.16ರಂದು ನಡೆಯುವ ಬೆಳಗ್ಗೆ 9.45ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು.
ಐಡಿಎ ರಾಷ್ಟ್ರೀಯ ಅಧ್ಯಕ್ಷ ಡಾ. ರಾಜೀವ್ ಕುಮಾರ್ ಚುಗ್, ರಾಷ್ಟ್ರೀಯ ಉಪಾಧ್ಯಕ್ಷ ಡಾ.ಶಿವಶರಣ್ ಶೆಟ್ಟಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ. ಅಶೋಕ್ ಡಿ.ದೋಬ್ಲೆ, ರಾಜ್ಯ ಅಧ್ಯಕ್ಷ ಡಾ.ರಾಮಮೂರ್ತಿ ಟಿ.ಕೆ, ಜಿಲ್ಲಾ ಐಡಿಎ ಅಧ್ಯಕ್ಷ ಡಾ.ಜುನೈದ್ ಅಹ್ಮದ್ ಹಾಗೂ ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿರುವರು. ಒಟ್ಟು 26 ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಪ್ರಮುಖ ಭಾಷಣ, 231 ಪ್ರಬಂಧ ಮಂಡನೆ, 279 ಚಿತ್ರ ಪ್ರಬಂಧ ಮಂಡನೆ, 13 ಪ್ರಾತ್ಯಕ್ಷಿತೆ ಶಿಬಿರ ನಡೆಯಲಿದೆ. ದೇಶದ ವಿವಿಧೆಡೆಯಿಂದ ಅಂದಾಜು 2 ಸಾವಿರ ದಂತ ವೈದ್ಯ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು