4:15 AM Friday16 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

Mangaluru | ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಕೃಷ್ಣವೇಣಿ ಮತ್ತೆ ಲೋಕಾಯುಕ್ತ ಬಲೆಗೆ: 1 ವರ್ಷದೊಳಗೆ 2ನೇ ಬಾರಿ ಸೆರೆ!

28/05/2025, 21:35

ಮಂಗಳೂರು(reporter Karnataka.com): ದಕ್ಷಿಣ ಕನ್ನಡ ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಕೃಷ್ಣವೇಣಿ ಅವರು
ಒಂದು ವರ್ಷದೊಳಗೆ ಎರಡನೇ ಬಾರಿಗೆ ಲೋಕಾಯುಕ್ತ ಬಲೆಗೆ
ಬಿದ್ದಿದ್ದಾರೆ.
ಉಳ್ಳಾಲ ತಾಲೂಕಿನ ಇರಾ ಗ್ರಾಮದ ಸರ್ವೆ ನಂಬರ್ 279-5ರಲ್ಲಿ 1.39 ಎಕರೆ ಜಮೀನಿನ ಪೈಕಿ 35 ಸೆಂಟ್ಸ್ ಜಾಗದಲ್ಲಿ ಮನೆ ಕಟ್ಟುವುದಕ್ಕಾಗಿ ಅಲ್ಲಿದ್ದ ಕಲ್ಲುಗಳನ್ನು ತೆರವು ಮಾಡಲು ಗಣಿ ಇಲಾಖೆಯ ಅನುಮತಿ ಕೋರಿದ್ದರು. ಈ ಬಗ್ಗೆ 2024ರ ಅ.28ರಂದು ಗಣಿ ಇಲಾಖೆಗೆ ಅರ್ಜಿ ಸಲ್ಲಿಸಿದ್ದು ಅನುಮತಿ ಪತ್ರ ನೀಡಿರಲಿಲ್ಲ. ವಿಚಾರಿಸಲು ಗಣಿ ಇಲಾಖೆಗೆ ಹೋದಾಗ ಉಪ ನಿರ್ದೇಶಕಿ ಕೃಷ್ಣವೇಣಿ ತನ್ನ ಕೊಠಡಿಗೆ ಸಿಬ್ಬಂದಿ ಪ್ರದೀಪ್ ಎಂಬವರನ್ನು ಕರೆಸಿ, ಈ ಫೈಲಿಗೆ 50 ಸಾವಿರ ತೆಗೆದುಕೊಳ್ಳಿ ಎಂದು ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು.
ನೊಂದ ಅರ್ಜಿದಾರ ಈ ಕುರಿತು ಮಂಗಳೂರು ಲೋಕಾಯುಕ್ತ ಇಲಾಖೆಗೆ ದೂರು ಸಲ್ಲಿಸಿದ್ದರು. ಮೇ 28ರಂದು ಅರ್ಜಿದಾರ ಲಂಚದ ಹಣ 50 ಸಾವಿರವನ್ನು ಮಲ್ಲಿಕಟ್ಟೆಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಕಚೇರಿಯಲ್ಲಿ ವಾಹನ ಚಾಲಕ ಮಧು ಎಂಬಾತನ ಮೂಲಕ ಕೃಷ್ಣವೇಣಿ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ದಾಳಿ ಮಾಡಿದ್ದು, ರೆಡ್ ಹ್ಯಾಂಡ್ ಆಗಿ ಇಬ್ಬರನ್ನೂ ಬಂಧಿಸಿದ್ದಾರೆ. ಒಂದು ವರ್ಷದ ಹಿಂದೆ ಅಕ್ರಮ ಆಸ್ತಿ ಗಳಿಕೆ ವಿಚಾರದಲ್ಲಿ ಲೋಕಾಯುಕ್ತ ದಾಳಿ ಮಾಡಿ, ಬೆಂಗಳೂರು ಸೇರಿ ವಿವಿಧ ಕಡೆ 11 ಕೋಟಿಯಷ್ಟು ಆಸ್ತಿ ಪತ್ತೆ ಮಾಡಿದ್ದರು. ಅಕ್ರಮ ಆಸ್ತಿ ಪ್ರಕರಣದಲ್ಲಿ ಒಮ್ಮೆಗೆ ಬಂಧನ ಆದರೂ, ಈಕೆಯನ್ನು ಅದೇ ಜಾಗದಲ್ಲಿ ಮುಂದುವರಿಸಲಾಗಿತ್ತು. ಆ ಬಳಿಕ ಕಳೆದ ಜುಲೈ ತಿಂಗಳಲ್ಲಿ ಮಂಗಳೂರಿಗೆ ಬಂದಿದ್ದ ಉಪ ಲೋಕಾಯುಕ್ತ ವೀರಪ್ಪ ಅವರೂ ಕೃಷ್ಣವೇಣಿ ಬೇಜವಾಬ್ದಾರಿ ನಡೆಯ ಬಗ್ಗೆ ತರಾಟೆ ಎತ್ತಿಕೊಂಡಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರೂ ಇದೇ ಮಹಿಳಾ ಅಧಿಕಾರಿಯ ನಿರ್ಲಕ್ಷ್ಯ ಧೋರಣೆ ಬಗ್ಗೆ ಪ್ರಶ್ನಿಸಿದ್ದಲ್ಲದೆ, ಕ್ರಮಕ್ಕೆ ಜಿಲ್ಲಾಧಿಕಾರಿಗೆ ಸೂಚಿಸಿದ್ದರು.
ಆದರೆ ಭ್ರಷ್ಟಾಚಾರದಲ್ಲಿ ಸಿಕ್ಕಿಬಿದ್ದರೂ ಅದೇ ಅಧಿಕಾರಿಯನ್ನು ಮಂಗಳೂರಿನಲ್ಲಿ ವರ್ಷ ಕಳೆದರೂ ಉಳಿಸಿಕೊಳ್ಳಲಾಗಿತ್ತು.
ಲೋಕಾಯುಕ್ತ ಪ್ರಭಾರ ఎస్పి ಕುಮಾರಚಂದ್ರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಗಾನ ಪಿ. ಕುಮಾರ್, ಪೊಲೀಸ್‌ ನಿರೀಕ್ಷಕರಾದ ಸುರೇಶ್ ಕುಮಾರ್, ಭಾರತಿ ಜಿ., ಚಂದ್ರಶೇಖರ್ ಕೆ.ಎನ್, ಉಡುಪಿ ಜಿಲ್ಲಾ ಲೋಕಾಯುಕ್ತ ನಿರೀಕ್ಷಕರಾದ ಮಂಜುನಾಥ, ರಾಜೇಂದ್ರ ನಾಯಕ್ ಮತ್ತು ಸಿಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು