4:50 PM Tuesday31 - March 2026
ಬ್ರೇಕಿಂಗ್ ನ್ಯೂಸ್
ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.…

ಇತ್ತೀಚಿನ ಸುದ್ದಿ

ಮಂಗಳೂರು: ದಿನದ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ದಾಖಲು; ನದಿಗಳಲ್ಲಿ ನೀರಿನ ಒಳ ಹರಿವು ಸ್ಥಗಿತ

09/03/2023, 15:15

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಕಡಲನಗರಿ ಮಂಗಳೂರಿನಲ್ಲಿ ಬಿಸಿಲಿನ ಝಳ ಹೆಚ್ಚುತ್ತಿತ್ತು, ಇಂದಿನ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇತ್ತು.

ಕರಾವಳಿಯಲ್ಲಿ ಬೇಸಿಗೆ ಕಾಲ ಆರಂಭವಾಗಿದ್ದು ತಾಪಮಾನದಲ್ಲಿ ಏರಿಕೆ ಶುರುವಾಗಿದೆ. ಜಿಲ್ಲೆಯ ಪ್ರಮುಖ ನದಿಗಳಾದ ನೇತ್ರಾವತಿ, ಕುಮಾರಧಾರ, ಫಲ್ಗುಣಿ, ಪಯಸ್ವಿನಿಯಲ್ಲಿ ನೀರಿನ ಒಳ ಹರಿವು ನಿಂತು ಹೋಗಿದೆ. ಇನ್ನೇನಿದ್ದರೂ ಮಳೆ ಬರುವ ತನಕ ಸಂಗ್ರಹವಾಗಿರುವ ನೀರಿನಲ್ಲೇ ಮಂಗಳೂರು ಸೇರಿದಂತೆ ಪೇಟೆ- ಪಟ್ಟಣಗಳ ಜನರು ಬದುಕಬೇಕಾಗಿದೆ.

ಮಂಗಳೂರಿನಲ್ಲಿ ಗುರುವಾರ ದಿನದ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇತ್ತು. ಮಧ್ಯಾಹ್ನ 2.30ರ ವೇಳೆಗೆ ದಿನದ ಗರಿಷ್ಟ ಉಷ್ಣತೆಯು 35 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಆದರೆ ಮಧ್ಯಾಹ್ನ 3.30ರ ವೇಳಗೆ ತಾಪಮಾನ ಮತ್ತೆ 34 ಡಿಗ್ರಿ ಸೆಲ್ಸಿಯಸ್ ಗೆ ಇಳಿದಿತ್ತು.
ಪಶ್ಚಿಮ ಕರಾವಳಿಯಲ್ಲಿ ನೆಲೆಸಿರುವ ಮತ್ತು ಅರಬ್ಬೀ ಸಮುದ್ರವನ್ನು ಸ್ಪರ್ಶಿಸುವ ಮಂಗಳೂರು ಐತಿಹಾಸಿಕವಾಗಿ ಹಡಗು ನಿರ್ಮಾಣ ಕೇಂದ್ರವಾಗಿದೆ. ನವ ಮಂಗಳೂರು ಬಂದರು ಇಲ್ಲಿನ ಪ್ರಮುಖ ವಾಣಿಜ್ಯ ಬಂದರು ಆಗಿದೆ. ಹಳೆ ಬಂದರು ಇಡೀ ಇಡೀ ಜಿಲ್ಲೆಯ ಆರ್ಥಿಕ ಚಟುವಟಿಕೆಯ ಬೆನ್ನೆಲುಬಾಗಿದೆ. ಮಂಗಳೂರು ಇಂದು ಹೊಸ ಮತ್ತು ಹಳೆಯ ಮಿಶ್ರಣವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು