3:47 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಮಂಗಳೂರು: ಡಿವೈಡರ್ ಹಾರಿ ಪ್ರಪಾತಕ್ಕೆ ಉರುಳುತ್ತಿದ್ದ ಕಾರು ಸ್ವಲ್ಪದಲ್ಲೇ ಪಾರು: ಅದೃಷ್ಟವಶಾತ್ ಮೂವರು ಬಚಾವ್

15/07/2023, 10:45

ಮಂಗಳೂರು(reporterkarnataka.com): ನಗರದ ಕದ್ರಿ ಬಳಿ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್ ಹಾರಿದ್ದು, ಅದೃಷ್ಟವಶಾತ್
ಸ್ವಲ್ಪದರಲ್ಲೇ ಪಕ್ಕದಲ್ಲಿದ್ದ ಪ್ರಪಾತಕ್ಕೆ ಉರುಳುವುದು ತಪ್ಪುವ ಮೂಲಕ ಕಾರಲ್ಲಿದ್ದ ಮೂವರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಕದ್ರಿ ಸರ್ಕಿಟ್ ಹೌಸ್ ಬಿಜೈ ರಸ್ತೆ ಮಧ್ಯೆ ಬಟ್ಟಗುಡ್ಡೆ ಬಳಿ ಕಾರು ಅಪಘಾತ ಸಂಭವಿಸಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಅಲ್ಪಸ್ವಲ್ಪಗಾಯಗಳೊಂದಿಗೆ ಪವಾಡ ಸದೃಶ್ಯರಾಗಿ ಪಾರಾಗಿದ್ದಾರೆ.
ಶುಕ್ರವಾರ ತಡರಾತ್ರಿ ಸುಮಾರು 12.30ರ ವೇಳೆಗೆ ಅಪಘಾತ ನಡೆದಿದೆ. ಸರ್ಕಿಟ್ ಹೌಸ್ ಕಡೆಯಿಂದ ಬಿಜೈ ಕಡೆಗೆ ವೇಗವಾಗಿ ಸಾಗುತ್ತಿದ್ದ ಮಾರುತಿ ಬಲೇನೋ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ವಿದ್ಯುತ್ ಕಂಬಕ್ಕೆ ಹೊಡೆದು ಪಕ್ಕದ ರಸ್ತೆ ಬಿದ್ದು ಅಲ್ಲಿದ್ದ ಪ್ರಪಾತದ ಸನಿಹದಲ್ಲೇ ಗಿಡ ಗಂಟಿಗಳ ಮಧ್ಯೆ ಸಿಲುಕಿಕೊಂಡಿದೆ. ಅಪಘಾತದ ತೀವ್ರತೆಗೆ ದಾರಿ ದೀಪದ ಲೈಟ್ ಕಂಬ ದೂರಕ್ಕೆ ಎಸೆಯಲ್ಪಟ್ಟಿದೆ.
ಸಂಚಾರಿ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು