3:49 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಮಂಗಳೂರು ಇಎಸ್ ಐ ಆಸ್ರತ್ರೆ ಮೇಲ್ದರ್ಜೆಗೇರಿಸಲು ಶಾಸಕ ವೇದವ್ಯಾಸ್ ಕಾಮತ್ ಕೇಂದ್ರ ಸಚಿವ ರಾಮೇಶ್ವರ ತೇಲಿಗೆ ಮನವಿ

09/10/2022, 23:49

ಮಂಗಳೂರು(reporterkarnataka.com):
ನಗರದ ಇ.ಎಸ್.ಐ ಆಸ್ರತ್ರೆಯನ್ನು ಮೇಲ್ದರ್ಜೆಗೇರಿಸುವ ಕುರಿತು ಶಾಸಕ ವೇದವ್ಯಾಸ್ ಕಾಮತ್ ಅವರು ಕೇಂದ್ರ ಉದ್ಯೋಗ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ರಾಜ್ಯ ಸಚಿವ ರಾಮೇಶ್ವರ ತೇಲಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಕೇಂದ್ರ ಸಚಿವರ ಮಂಗಳೂರು ಭೇಟಿಯ ಸಂದರ್ಭದಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಸಚಿವರನ್ನು ಭೇಟಿ ಮಾಡಿ ಈ ಕುರಿತು ಮನವಿ‌ ಸಲ್ಲಿಸಿದ್ದು, ಇ.ಎಸ್.ಐ ಆಸ್ಪತ್ರೆಯನ್ನು ಸಂಪೂರ್ಣವಾಗಿ ಮೇಲ್ದರ್ಜೆಗೇರಿಸುವ ದೃಷ್ಟಿಯಿಂದ ಸಹಕಾರ ನೀಡಬೇಕೆಂದು ಮನವಿ ಮಾಡಿಕೊಂಡರು.
ಈ ಕುರಿತು ಮಾತನಾಡಿದ ಅವರು, ನಗರದಲ್ಲಿರುವ ಇ.ಎಸ್.ಐ ಆಸ್ಪತ್ರೆಯಲ್ಲಿ ವೈದ್ಯರ ಹಾಗೂ ಸಿಬ್ಬಂದಿಗಳ ಕೊರತೆ, ವೈದ್ಯಕೀಯ ಉಪಕರಣಗಳ ಕೊರತೆಯಿರುವ ಕಾರಣದಿಂದ ರೋಗಿಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸಲಾಗುತಿದ್ದು, ಆ ವೆಚ್ಚವನ್ನು ಇ.ಎಸ್.ಐ ಆಸ್ಪತ್ರೆಯ ಮೂಲಕ ಭರಿಸಲಾಗುತ್ತಿದೆ. ಆಸ್ಪತ್ರೆಯ ಸಂಪೂರ್ಣ ಅಭಿವೃದ್ಧಿಯಿಂದ ನಾಗರಿಕರಿಗೂ ಉತ್ತಮ ಸೌಲಭ್ಯ ನೀಡಬಹುದಾಗಿದ್ದು, ಆ ನಿಟ್ಟಿನಲ್ಲಿ ಸಚಿವರ ಗಮನಕ್ಕೆ ತರಲಾಗಿದೆ ಎಂದು ಶಾಸಕ ‌ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಎಂ.ಆರ್.ಪಿ.ಎಲ್ ವ್ಯವಸ್ಥಾಪಕ ನಿರ್ದೇಶರಾದ ಎಂ ವೆಂಕಟೇಶ್, ಪಿಎಫ್ ಕಚೇರಿ ಆಯುಕ್ತರಾದ ಉಣ್ಣಿಕೃಷ್ಣನ್, ಇ.ಎಸ್.ಐ ಆಸ್ಪತ್ರೆಯ ಪ್ರಮುಖರು, ಉಪಮೇಯರ್ ಪೂರ್ಣಿಮಾ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ ಕಾವಾ, ಕಿಶೋರ್ ಕೊಟ್ಟಾರಿ ಹಾಗೂ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು