5:47 PM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಮಂಗಳೂರು ಇಎಸ್ ಐ ಆಸ್ರತ್ರೆ ಮೇಲ್ದರ್ಜೆಗೇರಿಸಲು ಶಾಸಕ ವೇದವ್ಯಾಸ್ ಕಾಮತ್ ಕೇಂದ್ರ ಸಚಿವ ರಾಮೇಶ್ವರ ತೇಲಿಗೆ ಮನವಿ

09/10/2022, 23:49

ಮಂಗಳೂರು(reporterkarnataka.com):
ನಗರದ ಇ.ಎಸ್.ಐ ಆಸ್ರತ್ರೆಯನ್ನು ಮೇಲ್ದರ್ಜೆಗೇರಿಸುವ ಕುರಿತು ಶಾಸಕ ವೇದವ್ಯಾಸ್ ಕಾಮತ್ ಅವರು ಕೇಂದ್ರ ಉದ್ಯೋಗ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ರಾಜ್ಯ ಸಚಿವ ರಾಮೇಶ್ವರ ತೇಲಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಕೇಂದ್ರ ಸಚಿವರ ಮಂಗಳೂರು ಭೇಟಿಯ ಸಂದರ್ಭದಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಸಚಿವರನ್ನು ಭೇಟಿ ಮಾಡಿ ಈ ಕುರಿತು ಮನವಿ‌ ಸಲ್ಲಿಸಿದ್ದು, ಇ.ಎಸ್.ಐ ಆಸ್ಪತ್ರೆಯನ್ನು ಸಂಪೂರ್ಣವಾಗಿ ಮೇಲ್ದರ್ಜೆಗೇರಿಸುವ ದೃಷ್ಟಿಯಿಂದ ಸಹಕಾರ ನೀಡಬೇಕೆಂದು ಮನವಿ ಮಾಡಿಕೊಂಡರು.
ಈ ಕುರಿತು ಮಾತನಾಡಿದ ಅವರು, ನಗರದಲ್ಲಿರುವ ಇ.ಎಸ್.ಐ ಆಸ್ಪತ್ರೆಯಲ್ಲಿ ವೈದ್ಯರ ಹಾಗೂ ಸಿಬ್ಬಂದಿಗಳ ಕೊರತೆ, ವೈದ್ಯಕೀಯ ಉಪಕರಣಗಳ ಕೊರತೆಯಿರುವ ಕಾರಣದಿಂದ ರೋಗಿಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸಲಾಗುತಿದ್ದು, ಆ ವೆಚ್ಚವನ್ನು ಇ.ಎಸ್.ಐ ಆಸ್ಪತ್ರೆಯ ಮೂಲಕ ಭರಿಸಲಾಗುತ್ತಿದೆ. ಆಸ್ಪತ್ರೆಯ ಸಂಪೂರ್ಣ ಅಭಿವೃದ್ಧಿಯಿಂದ ನಾಗರಿಕರಿಗೂ ಉತ್ತಮ ಸೌಲಭ್ಯ ನೀಡಬಹುದಾಗಿದ್ದು, ಆ ನಿಟ್ಟಿನಲ್ಲಿ ಸಚಿವರ ಗಮನಕ್ಕೆ ತರಲಾಗಿದೆ ಎಂದು ಶಾಸಕ ‌ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಎಂ.ಆರ್.ಪಿ.ಎಲ್ ವ್ಯವಸ್ಥಾಪಕ ನಿರ್ದೇಶರಾದ ಎಂ ವೆಂಕಟೇಶ್, ಪಿಎಫ್ ಕಚೇರಿ ಆಯುಕ್ತರಾದ ಉಣ್ಣಿಕೃಷ್ಣನ್, ಇ.ಎಸ್.ಐ ಆಸ್ಪತ್ರೆಯ ಪ್ರಮುಖರು, ಉಪಮೇಯರ್ ಪೂರ್ಣಿಮಾ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ ಕಾವಾ, ಕಿಶೋರ್ ಕೊಟ್ಟಾರಿ ಹಾಗೂ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು