9:46 PM Sunday3 - August 2025
ಬ್ರೇಕಿಂಗ್ ನ್ಯೂಸ್
Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ

ಇತ್ತೀಚಿನ ಸುದ್ದಿ

ಮಂಗಳೂರು: ಫೆ.10ರಂದು 20ನೇ ವರ್ಷದ ಶ್ರೀ ಕೃಷ್ಣ-ಬಲರಾಮ ರಥಯಾತ್ರೆ; ಎಲ್ಲರಿಗೂ ರಥ ಎಳೆಯಲು‌‌ ಅವಕಾಶ

07/02/2024, 15:55

ಮಂಗಳೂರು(reporterkarnataka.com): ಅಂತಾರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಸ್ಥೆ ಮಂಗಳೂರು ಶಾಖೆಯ ಆಶ್ರಯದಲ್ಲಿ ನಡೆಯಲಿರುವ 20ನೇ ವಾರ್ಷಿಕ ಕೃಷ್ಣ ಬಲರಾಮ ರಥಯಾತ್ರೆ ಉತ್ಸವ ಫೆ.10 ರಂದು ನಗರದ ಪಿವಿಎಸ್ ಮಂದಿರದಲ್ಲಿ ಸಂಜೆ 4.30ಕ್ಕೆ ನಡೆಯಲಿದೆ ಎಂದು ಇಸ್ಕಾನ್‌ನ ಅಧ್ಯಕ್ಷ ಗುಣಾಕರ ರಾಮ ದಾಸ ಹೇಳಿದರು.

ನಗರದ ಇಸ್ಕಾನ್ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಈ ರಥಯಾತ್ರೆಗೆ ರಥವು ಬೆಂಗಳೂರಿನಿಂದ ಬರಲಿದ್ದು, ನಗರದಲ್ಲಿ 5 ಕಿ.ಮೀ. ದೂರ ಸಾಗಲಿದೆ. ರಥವು ಪಿವಿಎಸ್ ಮಂದಿರದಿಂದ, ಶಾರದಾ ವಿದ್ಯಾಲಯ ರಸ್ತೆ, ಟಿ.ವಿ. ರಮಣ ಪೈ ಸಭಾಂಗಣ ವೃತ್ತ, ಮಹಾಮಯಿ ದೇವಸ್ಥಾನ ರಸ್ತೆ, ವೆಂಕಟರಮಣ ದೇವಸ್ಥಾನ ವೃತ್ತ ರಥಬೀದಿ, ಬಿಇಎಂ ಶಾಲೆ ರಸ್ತೆ, ಕುದ್ರೋಳಿ ದೇವಸ್ಥಾನ ರಸ್ತೆ, ಮಣ್ಣಗುಡ್ಡ ರಸ್ತೆ, ಬಲ್ಲಾಳ್ ಭಾಗ್ ರಸ್ತೆ, ಮಹಾತ್ಮ ಗಾಂಧಿ ರಸ್ತೆ ಮೂಲಕ ಇಸ್ಕಾನ್ ಪಿ.ವಿ.ಎಸ್ ರಸ್ತೆಯ ಮೂಲಕ ಸಂಜೆ 7.30_ಕ್ಕೆ ಬಂದು ಸೇರಲಿದೆ ಎಂದರು.
ಈ ರಥಯಾತ್ರೆಗೆ 5 ಸಾವಿರಕ್ಕೂ ಹೆಚ್ಚು ಜನ ಸೇರಲಿದ್ದು, ಎಲ್ಲಾ ಭಕ್ತರಿಗೂ ರಥ ಎಳೆಯುವ ಅವಕಾಶ ಕಲ್ಪಿಸಲಾಗಿದೆ. ರಥಯಾತ್ರೆಯ ನಂತರ ಮಹಾಮಂಗಳಾರತಿ ಹಾಗೂ ಅನ್ನಸಂತರ್ಪಣೆ ನಡೆಯಲಿದೆ ಎಂದರು.
ಕಾರ್ಯಕ್ರಮಕ್ಕೆ ಶಾಸಕ ವೇದವ್ಯಾಸ ಕಾಮತ್, ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ. ಮೋಹನ್ ಆಳ್ವ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್, ಮಂಗಳೂರು ನಗರಪಾಲಿಕೆ ಸದಸ್ಯೆ ಜಯಶ್ರೀ ಕುಡ್ವ, ಅಭಿನವ್ ಬನ್ಸಲ್‌ನ ನಿದೇರ್ಶಕ ಎ.ಕೆ. ಬನ್ಸಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಜೊತೆ ಕಾರ್ಯದರ್ಶಿಗಳಾದ ರಾಧ ವಲ್ಲಭ ದಾಸ, ಸುಂದರ ಗೌರ ದಾಸ ಮಾಧ್ಯಮ ಸಲಹೆಗಾರ ಎಂ.ವಿ. ಮಲ್ಯ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು