12:11 PM Tuesday8 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ ಕಚೇರಿ ಉದ್ಘಾಟನೆ: ಸಕಲ ಸಿದ್ಧತೆ ಬಹುತೇಕ ಪೂರ್ಣ

18/01/2025, 15:40

ಮಂಗಳೂರು(reporterkarnataka.com):ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ನಡೆಯಲಿರುವ ಬಹು ನಿರೀಕ್ಷಿತ ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3 ಯ ಕಚೇರಿಯು ಮಣ್ಣಗುಡ್ಡೆಯ ಎಸ್.ಎಲ್ ಶೇಟ್ ಜುವೆಲ್ಲರ್ಸ್ & ಡೈಮಂಡ್ ಹೌಸ್ ಬಳಿ ಉದ್ಘಾಟನೆಗೊಂಡಿತು.

ನಂತರ ಮಾತನಾಡಿದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಗೌರವಾಧ್ಯಕ್ಷ ಗಿರಿಧರ್ ಶೆಟ್ಟಿ ಅವರು, ಜನವರಿ 18 ರಿಂದ 22 ರ ವರೆಗೆ 5 ದಿನಗಳ ಕಾಲ ನಡೆಯಲಿರುವ ಸ್ಟ್ರೀಟ್ ಫುಡ್ ಫಿಯೆಸ್ಟಗೆ ಸಂಬಂಧಪಟ್ಟ ಯಾವುದೇ ಮಾಹಿತಿಗಾಗಿ ಮಳಿಗೆದಾರರು, ಸಾರ್ವಜನಿಕರು, ಈ ಕಚೇರಿಯನ್ನು ಸಂಪರ್ಕಿಸಬಹುದು ಎಂದರು.
ಸ್ಟ್ರೀಟ್ ಫುಡ್ ಫಿಯೆಸ್ಟಗೆ ಸಂಬಂಧಿಸಿದಂತೆ ಈಗಾಗಲೇ ಸಕಲ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿದ್ದು ಸಾರ್ವಜನಿಕ ವಲಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅದರಲ್ಲೂ ಚಾಯ್ ವಾಲಾ ಡಾಲಿ ಎಲ್ಲರ ಪ್ರಮುಖ ಆಕರ್ಷಣೆ ಕೇಂದ್ರವಾಗಿದ್ದು ಇದೇ ರೀತಿಯ ಅನೇಕ ವಿಶಿಷ್ಟಗಳು ಈ ಬಾರಿ ಇರಲಿದೆ. ಜನವರಿ 18ರ ಸಂಜೆ 6 ಗಂಟೆಗೆ ಹಲವು ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಸ್ಟ್ರೀಟ್ ಫುಡ್ ಫಿಯೆಸ್ಟಗೆ ಅದ್ದೂರಿ ಚಾಲನೆ ದೊರೆಯಲಿದೆ ಎಂದರು.
ಆನ್ ಲೈನ್ ಮೂಲಕ ನೂರಾರು ಸಂಖ್ಯೆಯ ಆಹಾರ ಮಳಿಗೆಗಳು ನೋಂದಾಯಿಕೊಂಡಿದ್ದು, ಕಳೆದೆರಡು ಆವೃತ್ತಿಗಳಿಗೆ ಹೋಲಿಸಿದರೆ ಈ ಬಾರಿ ಇನ್ನಷ್ಟು ಮನರಂಜನಾ ಕಾರ್ಯಕ್ರಮಗಳ ಜೊತೆಗೆ ಮತ್ತಷ್ಟು ಹೊಸತನಗಳು ಇರಲಿದೆ. ಸಾರ್ವಜನಿಕರ ಸುರಕ್ಷತೆ, ಸ್ವಚ್ಛತೆ, ಪಾರ್ಕಿಂಗ್, ಸಹಿತ ಕಾರ್ಯಕ್ರಮದ ಯಶಸ್ಸಿಗೆ ಎಲ್ಲಾ ರೀತಿಯಲ್ಲೂ ವಿಶೇಷ ಆದ್ಯತೆ ನೀಡಲಾಗಿದ್ದು ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದರು.
ಉದ್ಘಾಟನಾ ಸಮಾರಂಭದಲ್ಲಿ ಪ್ರತಿಷ್ಠಾನದ ಪ್ರಮುಖರಾದ ನರೇಶ್ ಶೆಣೈ, ಲಲಿತ್ ಮೆಂಡನ್, ಕಿರಣ್ ಶೆಣೈ, ಜಗದೀಶ್ ಕದ್ರಿ, ಸಂಜಯ್ ಪೈ , ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು