1:04 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ ಕಚೇರಿ ಉದ್ಘಾಟನೆ: ಸಕಲ ಸಿದ್ಧತೆ ಬಹುತೇಕ ಪೂರ್ಣ

18/01/2025, 15:40

ಮಂಗಳೂರು(reporterkarnataka.com):ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ನಡೆಯಲಿರುವ ಬಹು ನಿರೀಕ್ಷಿತ ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3 ಯ ಕಚೇರಿಯು ಮಣ್ಣಗುಡ್ಡೆಯ ಎಸ್.ಎಲ್ ಶೇಟ್ ಜುವೆಲ್ಲರ್ಸ್ & ಡೈಮಂಡ್ ಹೌಸ್ ಬಳಿ ಉದ್ಘಾಟನೆಗೊಂಡಿತು.

ನಂತರ ಮಾತನಾಡಿದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಗೌರವಾಧ್ಯಕ್ಷ ಗಿರಿಧರ್ ಶೆಟ್ಟಿ ಅವರು, ಜನವರಿ 18 ರಿಂದ 22 ರ ವರೆಗೆ 5 ದಿನಗಳ ಕಾಲ ನಡೆಯಲಿರುವ ಸ್ಟ್ರೀಟ್ ಫುಡ್ ಫಿಯೆಸ್ಟಗೆ ಸಂಬಂಧಪಟ್ಟ ಯಾವುದೇ ಮಾಹಿತಿಗಾಗಿ ಮಳಿಗೆದಾರರು, ಸಾರ್ವಜನಿಕರು, ಈ ಕಚೇರಿಯನ್ನು ಸಂಪರ್ಕಿಸಬಹುದು ಎಂದರು.
ಸ್ಟ್ರೀಟ್ ಫುಡ್ ಫಿಯೆಸ್ಟಗೆ ಸಂಬಂಧಿಸಿದಂತೆ ಈಗಾಗಲೇ ಸಕಲ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿದ್ದು ಸಾರ್ವಜನಿಕ ವಲಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅದರಲ್ಲೂ ಚಾಯ್ ವಾಲಾ ಡಾಲಿ ಎಲ್ಲರ ಪ್ರಮುಖ ಆಕರ್ಷಣೆ ಕೇಂದ್ರವಾಗಿದ್ದು ಇದೇ ರೀತಿಯ ಅನೇಕ ವಿಶಿಷ್ಟಗಳು ಈ ಬಾರಿ ಇರಲಿದೆ. ಜನವರಿ 18ರ ಸಂಜೆ 6 ಗಂಟೆಗೆ ಹಲವು ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಸ್ಟ್ರೀಟ್ ಫುಡ್ ಫಿಯೆಸ್ಟಗೆ ಅದ್ದೂರಿ ಚಾಲನೆ ದೊರೆಯಲಿದೆ ಎಂದರು.
ಆನ್ ಲೈನ್ ಮೂಲಕ ನೂರಾರು ಸಂಖ್ಯೆಯ ಆಹಾರ ಮಳಿಗೆಗಳು ನೋಂದಾಯಿಕೊಂಡಿದ್ದು, ಕಳೆದೆರಡು ಆವೃತ್ತಿಗಳಿಗೆ ಹೋಲಿಸಿದರೆ ಈ ಬಾರಿ ಇನ್ನಷ್ಟು ಮನರಂಜನಾ ಕಾರ್ಯಕ್ರಮಗಳ ಜೊತೆಗೆ ಮತ್ತಷ್ಟು ಹೊಸತನಗಳು ಇರಲಿದೆ. ಸಾರ್ವಜನಿಕರ ಸುರಕ್ಷತೆ, ಸ್ವಚ್ಛತೆ, ಪಾರ್ಕಿಂಗ್, ಸಹಿತ ಕಾರ್ಯಕ್ರಮದ ಯಶಸ್ಸಿಗೆ ಎಲ್ಲಾ ರೀತಿಯಲ್ಲೂ ವಿಶೇಷ ಆದ್ಯತೆ ನೀಡಲಾಗಿದ್ದು ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದರು.
ಉದ್ಘಾಟನಾ ಸಮಾರಂಭದಲ್ಲಿ ಪ್ರತಿಷ್ಠಾನದ ಪ್ರಮುಖರಾದ ನರೇಶ್ ಶೆಣೈ, ಲಲಿತ್ ಮೆಂಡನ್, ಕಿರಣ್ ಶೆಣೈ, ಜಗದೀಶ್ ಕದ್ರಿ, ಸಂಜಯ್ ಪೈ , ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು